ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ವೀವ್ ಶಾಲೆ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ (ಆರ್ಟಿಇ) 24 ಮಕ್ಕಳಿಗೆ ಪ್ರವೇಶ ನಿರಾಕರಿಸಿದೆ.ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಆರ್ ಟಿಇ ಮಕ್ಕಳ ಪೋಷಕರು ಪ್ರವೇಶಕ್ಕಾಗಿ ಶಾಲಾ ಆಡಳಿತ ಮಂಡಳಿಯನ್ನು ಭೇಟಿ ಮಾಡಿದ್ದಾರೆ. ಆದರೆ ಪ್ರವೇಶ ನೀಡಲು ನಿರಾಕರಿಸಿದ ಶಾಲಾ ಸಿಬ್ಬಂದಿ, ತಮ್ಮ ಶಾಲೆಯ ಅಧ್ಯಕ್ಷರಾಗಿರುವ ಸಚಿವ ಡಿ.ಕೆ.ಶಿವಕುಮಾರ್ ಅವರಿಂದ ಪತ್ರ ತೆಗೆದುಕೊಂಡು ಬರುವಂತೆ ಪೋಷಕರಿಗೆ ಸೂಚಿಸಿದ್ದಾರೆ.ಕೆಲವು ದಿನಗಳ ಹಿಂದಷ್ಟೇ ಸಿಬಿಎಸ್ ಇಯಿಂದ ಮಾನ್ಯತೆ ಪಡೆದಿರುವ ಹಿಲ್ ವೀವ್ ಶಾಲೆಯಲ್ಲಿ ಆರ್ ಟಿಇ ಅಡಿ 1ನೇ ತರಗತಿಗೆ ಸೀಟ್ ಹಂಚಿಕೆಯಾಗಿದ್ದ 24 ಮಕ್ಕಳಿಗೆ ಪ್ರವೇಶ ನಿರಾಕರಿಸಲಾಗಿತ್ತು. ಹೀಗಾಗಿ ಪೋಷಕರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಭೇಟಿ ಮಾಡಿದ್ದರು. ಅವರು ಪ್ರವೇಶ ಕೊಡಿಸುವ ಭರವಸೆ ನೀಡಿದ್ದರು. ಆದರೆ ಪ್ರವೇಶ ಕೊಡಿಸುವ ಬಗ್ಗೆ ಅವರು ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ಹೀಗಾಗಿ ನಾವು ಹೈಕೋರ್ಟ್ ಮೊರೆ ಹೋಗಿದ್ದೇವು. ಕೋರ್ಟ್ ನಮ್ಮ ಮನವಿಯನ್ನು ಪುರಸ್ಕರಿಸಿ ಪ್ರವೇಶ ನೀಡುವಂತೆ ಶಾಲೆಗೆ ಸೂಚಿಸಿದೆ ಎಂದು ಪೋಷಕರೊಬ್ಬರು ತಿಳಿಸಿದ್ದಾರೆ.
ಹೈಕೋರ್ಟ್ ಆದೇಶದೊಂದಿಗೆ ನಾವು ಶಾಲಾ ಪ್ರಾಚಾರ್ಯರನ್ನು ಭೇಟಿ ಮಾಡಿದ್ದೇವೆ. ಅವರು ಈ ಕುರಿತು ಸುಮಾರು ಒಂದು ಗಂಟೆ ಚರ್ಚಿಸಿದ ಬಳಿಕ, ಪ್ರವೇಶ ಪಡೆಯಲು ಶಾಲಾ ಅಧ್ಯಕ್ಷರಿಂದ ಪತ್ರ ತರುವಂತೆ ನಮಗೆ ಸೂಚಿಸಿದ್ದಾರೆ. ಆದರೆ ಇನ್ನು ಎರಡು ದಿನ ನಾವು ಕಾಯುತ್ತಿವೆ. ಒಂದು ವೇಳೆ ಪ್ರವೇಶ ನೀಡದಿದ್ದರೆ ಉಪವಾಸ ಸತ್ಯಾಗ್ರಹಮಾಡುವುದಾಗಿ ಮತ್ತೊಬ್ಬ ಪೋಷಕರು ಎಚ್ಚರಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಈ ಶಾಲೆಯ ಅಧ್ಯಕ್ಷರಾಗಿದ್ದು, ಶಾಲೆಯಲ್ಲಿ ಆರ್ಟಿಇ ಅಡಿ ಲಭ್ಯವಿದ್ದ ಸೀಟಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಮಾರ್ಗಸೂಚಿಯಂತೆ ಅರ್ಜಿ ಸಲ್ಲಿಸಿ, ಆನ್ಲೈನ್ ಸೀಟು ಹಂಚಿಕೆ ಪ್ರಕ್ರಿಯೆ ಮೂಲಕವೇ ಸೀಟು ಪಡೆದ ಮಕ್ಕಳಿಗೆ ಪ್ರವೇಶ ನಿರಾಕರಿಸುವ ಮೂಲಕ ಶಾಲಾಡಳಿತ ಮಂಡಳಿ ಸರ್ಕಾರದ ಆದೇಶ ಉಲ್ಲಂಸಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ಶ್ರೀ ಸಿದ್ಧಿವಿನಾಯಕ ಪ್ರೌಢಶಾಲೆ ಗೋಳಿ, ಶಿರಸಿ ಇಲ್ಲಿಯ ವಿದ್ಯಾರ್ಥಿಗಳು 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ, ತೃತೀಯ ಸ್ಥಾನ ಹಾಗೂ ಏಳನೇ ಸ್ಥಾನವನ್ನು ಕ್ರಮವಾಗಿ...
ಹೊನ್ನಾವರ : ವಿಶ್ವಾಸಮಾನ್ಯ ಸೇವೆ ಅನನ್ಯ ಎಂಬ ನುಡಿಯೊಂದಿಗೆ ಇಲೆಕ್ಟ್ರಾನಿಕ್ಸ್ ಹಾಗೂ ಫರ್ನೀಚರ್ಸ್ ಉತ್ಪನ್ನಗಳ ಮಾರಾಟ ಹಾದಿಯಲ್ಲಿ ಉತ್ಕೃಷ್ಟ ಸೇವೆಗಳ ಮೂಲಕ ಹಾಗೂ ಗ್ರಾಹಕರಿಗೆ ಆಕರ್ಷಕ ಬೆಲೆಗಳ ಮೂಲಕ ಜಿಲ್ಲೆಯಲ್ಲಿಯೇ ಮನೆಮಾತಾಗಿರುವ ತರಂಗ...
ಹೊನ್ನಾವರ ತಾಲೂಕಿನ ಹಳದೀಪುರದ ಕುದಬೈಲ್ ನ ಪ್ರಾಥಮಿಕ ಶಾಲೆಯ ಪಕ್ಕದ ಮನೆಯ ಬಾಗಿಲಿಗೆ ಬಂದ ಚಿರತೆ ಅಲ್ಲಿದ್ದ ನಾಯಿಮರಿಯನ್ನು ಹೊತ್ತು ಹೋಗಿರುವ ಘಟನೆ ಮನೆಯವರು ಅಳವಡಿಸಿದ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸೋಮವಾರ ನಡುರಾತ್ರಿ...
ಶಿರಸಿ : ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದಿಂದ ಅರು ಬಾರಿ ಗೆದ್ದು ಕಳೆದ ಚುನಾವಣೆಯಲ್ಲಿ ಸೋತಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಕಣಕ್ಕೆ ಇಳಿಸಿದೆ. ಇದರಿಂದ ಸಂಭ್ರಮ...
ಕುಮಟಾ : ಪ್ರಭಲ ಹಿಂದುತ್ವ ವಾದಿ ಹಾಗೂ ಕಳೆದ ಮೂವತ್ತು ವರ್ಷಗಳಿಂದ ಸಂಸದರಾಗಿದ್ದ ಅನಂತಕುಮಾರ ಹೆಗಡೆ ಬದಲಾಗಿ ಮಾಜಿ ಸ್ವೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಉತ್ತಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್...
ಕುಮಟಾ : 48 ವರ್ಷ ವಯಸ್ಸಿನ ವ್ಯಕ್ತಿಯೊಬ್ಬ ಹನ್ನೊಂದು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸುವ ಜೊತೆಗೆ ಜಾತಿನಿಂದನೆ ಮಾಡಿದ್ದಾನೆ ಎಂದು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಮೀನಿನಲ್ಲಿ...
ಮಂಗಳೂರು: ೨೦೦೭ರಿಂದ ಮಂಗಳೂರಿನಿಂದ ಪ್ರಕಟವಾಗಲು ಆರಂಭವಾದ "ಕೊಡಿಯಾಲ ಖಬರ" ಕೊಂಕಣಿ ಪಾಕ್ಷಿಕ ಪತ್ರಿಕೆಯು ಡಿಜಿಟಲ್ ಮಾಧ್ಯಮವಾಗಿ ‘ಕೊಡಿಯಾಲ ಖಬರ ಡಾಟ್ ಕಾಮ್’ ಆಗಿ ರೂಪಾಂತರಗೊಂಡು ನಾಲ್ಕು ವರ್ಷಗಳು ಕಳೆದಿವೆ. ಕಳೆದ ನಾಲ್ಕು ವರ್ಷಗಳಲ್ಲಿ...
ಕುಮಟಾ : ಮಾತೃ ಋಣ, ಪಿತೃ ಋಣ, ಆಚಾರ್ಯ ಋಣ, ಸಮಾಜ ಋಣ ಈ ರೀತಿಯಾಗಿ ವಿವಿಧ ಋಣಗಳು ಮನುಷ್ಯನ ಮೇಲೆ ಇದ್ದು, ಅವುಗಳನ್ನು ತೀರಿಸಿದರೆ ಮಾತ್ರ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂಬುದು ಹಿಂದೂ...
ಮೈಸೂರು : ಎಸ್. ಎಸ್. ಎಲ್. ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಲು ಮೇ. 15 ರಿಂದಲೇ ತರಗತಿಗೆ ಹಾಜರಾಗಲು ಹೈಸ್ಕೂಲ್ ಶಿಕ್ಷಕರಿಗೆ ಸೂಚಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರಕಾರ ಹಿಂಪಡೆದಿದೆ. ಆ...
ಭಟ್ಕಳ: 85 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಭಟ್ಕಳ ಎಜ್ಯುಕೇಶನ್ ಟ್ರಸ್ಟ್'ನ 8 ವಿದ್ಯಾ ಸಂಸ್ಥೆಗಳಲ್ಲಿ ಒಂದು, ಪ್ರತಿಷ್ಠಿತ ಶ್ರೀ ಗುರು ಸುಧೀಂದ್ರ ಪದವಿ ಕಾಲೇಜು. ಕರ್ನಾಟಕ ಸರ್ಕಾರದ ಮಾನ್ಯತೆಯೊಂದಿಗೆ, ಕರ್ನಾಟಕ ವಿಶ್ವವಿದ್ಯಾಲಯದ...
2023-24ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶಕ್ಕೆ ಸಮಯ ನಿಗದಿಯಾಗಿದೆ. ನಾಳೆ ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಟಿಯಲ್ಲಿ ಫಲಿತಾಂಶ ಪ್ರಕಟ ಮಾಡಲಿದೆ.
2023-24ನೇ ಸಾಲಿನ SSLC ಪರೀಕ್ಷೆಯ...
ಹೊನ್ನಾವರ: ತಾಲೂಕಿನ ಅಳ್ಳಂಕಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಇಂದು ಮುಂಜಾನೆ ಶಂಕುಸ್ಥಾಪನೆ ಮಾಡಲಾಯಿತು. ಇಲ್ಲಿಯ ಶ್ರೀ ಕ್ಷೇತ್ರ ಬಂಗಾರಮಕ್ಕಿ ಹಾಗೂ ಬೆಂಗಳೂರಿನ ಸುಧೀಕ್ಷಾ ಹೆಲ್ತ್ ಕೇರ್ ನ ಸಂಸ್ಥೆಯ ಸಹಯೋಗದಲ್ಲಿ ಉತ್ತರ ಕನ್ನಡ...
ಗ್ರಾಹಕರಿಗೆ ಅನನ್ಯವಾದ ಸೇವೆಯಿಂದ ಎಲ್ಲೆಡೆ ವಿಶ್ವಾಸಮಾನ್ಯತೆ ಗಳಿಸಿರುವ ಜಿಲ್ಲೆಯ ಗ್ರಹೋಪಕರಣ ಹಾಗೂ ಪೀಠೋಪಕರಣಗಳ ಬೃಹತ್ ಮಳಿಗೆಯಾಗಿರುವ ಇಲ್ಲಿನ ತರಂಗ ಇಲೆಕ್ಟ್ರಾನಿಕ್ಸ ಹಾಗೂ ಫರ್ನಿಚರ್ ಸಂಸ್ಥೆಯ ಹೊನ್ನಾವರದ ಶಾಖಾ ಮಳಿಗೆಯು ನೂತನ ವಿಶಾಲ, ಸುಸಜ್ಜಿತ...