516
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರವಾಸಿಗರಿಗೆ ಸಹಾಯ ಮಾಡಲು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಮಂಗಳವಾರ 24/7 ತುರ್ತು ಸಹಾಯವಾಣಿ ಆರಂಭಿಸಿದೆ.
“ಸಹಾಯ ಅಥವಾ ಮಾಹಿತಿ ಅಗತ್ಯವಿರುವ ಪ್ರವಾಸಿಗರಿಗಾಗಿ ಅನಂತನಾಗ್ ಜಿಲ್ಲಾಡಳಿತವು 24×7 ತುರ್ತು ಸಹಾಯ ಕೇಂದ್ರವನ್ನು ಸ್ಥಾಪಿಸಿದೆ. ಪ್ರವಾಸಿಗರು ಮಾಹಿತಿ ಅಥವಾ ಸಹಾಯಕ್ಕಾಗಿ 01932222337, 7780885759, 9697982527 ಅಥವಾ 6006365245 ಅನ್ನು ಸಂಪರ್ಕಿಸಬಹುದು” ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ಶ್ರೀನಗರದಲ್ಲಿಯೂ ತುರ್ತು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.