Home ಅಪರಾಧಉಗ್ರರ ದಾಳಿಯಲ್ಲಿ ಕರ್ನಾಟಕದ ಮತ್ತೊಬ್ಬ ನಿವಾಸಿ ಸಾವು

ಉಗ್ರರ ದಾಳಿಯಲ್ಲಿ ಕರ್ನಾಟಕದ ಮತ್ತೊಬ್ಬ ನಿವಾಸಿ ಸಾವು

ಬೆಂಗಳೂರಿನ ನಿವಾಸಿ ಮಧುಸೂದನ ಸೋಮಿಶೆಟ್ಟಿ ಇನ್ನಿಲ್ಲ

by News Desk
0 comments

ಬೆಂಗಳೂರು : ಜಮ್ಮು ಕಾಶ್ಮೀರದ ಪಹಲ್ಗಾಮ್​ನಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಯಲ್ಲಿ ಕರ್ನಾಟಕದ ಮತ್ತೊಬ್ಬ ನಿವಾಸಿ ಸಾವಿಗೀಡಾಗಿದ್ದು, ಒಟ್ಟು ಮೂವರು ಮೃತಪಟ್ಟಿದ್ದಾರೆ.

ಆಂಧ್ರಮೂಲದ ಬೆಂಗಳೂರಿನ ನಿವಾಸಿ ಮಧುಸೂದನ ಸೋಮಿಶೆಟ್ಟಿ ಅವರು ಪಹ್ಲಗಾಮ್‌ ಉಗ್ರರ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಈ ಪೈಶಾಚಿಕ ದಾಳಿಯಲ್ಲಿ ಶಿವಮೊಗ್ಗದ ಮಂಜುನಾಥ ರಾವ್ ಹಾಗೂ ಬೆಂಗಳೂರಿನ ಮತ್ತಿಕೆರೆಯ ಪ್ರದೇಶದ ಭರತ ಭೂಷಣ (41) ಎಂಬ ಮೃತಪಟ್ಟಿದ್ದಾರೆ ಎಂದು ಈ ಮೊದಲು ಮಾಹಿತಿ ಲಭ್ಯವಾಗಿತ್ತು. ಈಗ ಮಧುಸೂದನ ಅವರು ಮೃತಪಟ್ಟ ಮಾಹಿತಿ ಲಭ್ಯವಾಗಿದೆ.

ಒಂದು ವಾರದ ಹಿಂದೆ ಜನ್ಮ ದಿನ ಆಚರಿಸಿಕೊಂಡಿದ್ದ ಭರತ ಭೂಷಣ ಅವರು ಮೂರು ವರ್ಷದ ಮಗು ಹಾಗೂ ಪತ್ನಿ ಸುಜಾತ ಜೊತೆ ಕಾಶ್ಮೀರಕ್ಕೆ ತೆರಳಿದ್ದರು. ಮೃತದೇಹವನ್ನು ನಗರಕ್ಕೆ ಕರೆತರುವ ಸಲುವಾಗಿ ಸಿದ್ದತೆ ನಡೆಸಲಾಗುತ್ತಿದೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".