Home ಅಪರಾಧದಾಳಿಯಲ್ಲಿ ಬಲಿಯಾದ ಪ್ರತಿಯೊಬ್ಬರ ಸಾವಿಗೂ ಪ್ರತೀಕಾರ ತೀರಿಸಿಕೊಳ್ಳುತ್ತೇವೆ.

ದಾಳಿಯಲ್ಲಿ ಬಲಿಯಾದ ಪ್ರತಿಯೊಬ್ಬರ ಸಾವಿಗೂ ಪ್ರತೀಕಾರ ತೀರಿಸಿಕೊಳ್ಳುತ್ತೇವೆ.

ಗೃಹ ಸಚಿವ ಅಮಿತ್ ಶಾ ಖಡಕ್ ಎಚ್ಚರಿಕೆ

by News Desk
0 comments

ನ್ಯೂಸ್ ಡೆಸ್ಕ್ : ಪಹಲ್ಗಾಮ್ ದಾಳಿಯಲ್ಲಿ ಬಲಿಯಾದ ಪ್ರತಿಯೊಬ್ಬರ ಸಾವಿಗೂ ಪ್ರತೀಕಾರ ತೀರಿಸಿಕೊಳ್ಳುತ್ತೇವೆ. ಅಲ್ಲಿಯವರೆಗೂ ನಾವು ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವು ಪ್ರತಿಯೊಂದು ಭಯೋತ್ಪಾದನಾ ಕೃತ್ಯಕ್ಕೂ ಸೂಕ್ತ ಮತ್ತು ನಿಖರವಾದ ಪ್ರತಿಕ್ರಿಯೆಯನ್ನು ನೀಡುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ.

ಹೇಡಿತನದ ದಾಳಿಯನ್ನು ತಮ್ಮ ಗೆಲುವು ಎಂದು ಯಾರಾದರೂ ಭಾವಿಸಿದರೆ, ಇದು ನರೇಂದ್ರ ಮೋದಿಯವರ ಭಾರತ ಎಂಬುದನ್ನು ಅವರು ನೆನಪಿನಲ್ಲಿಟ್ಟುಕೊಳ್ಳಬೇಕು .ಅವರ ಈ ಕೃತ್ಯಗಳಿಗೆ ಹುಡುಕಿ ಹುಡುಕಿ, ಒಂದೊಂದಾಗಿ ಸೇಡು ತೀರಿಸಿಕೊಳ್ಳಲಾಗುವುದು ಎಂದು ಶಪಥ ಮಾಡಿದ್ದಾರೆ.

ದೇಶದ ಪ್ರತಿಯೊಂದು ಇಂಚಿನಿಂದಲೂ ಭಯೋತ್ಪಾದನೆಯನ್ನು ಬೇರುಸಹಿತ ಕಿತ್ತುಹಾಕುವುದು ನಮ್ಮ ಸಂಕಲ್ಪವಾಗಿದೆ ಮತ್ತು ಅದು ಸಾಧಿಸಲ್ಪಡುತ್ತದೆ ಎಂದು ಖಡಕ್ ಸಂದೇಶ ನೀಡಿದ್ದಾರೆ.

ಭಯೋತ್ಪಾದನೆ ನಿರ್ಮೂಲನೆಯಾಗುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ ಮತ್ತು ಅದನ್ನು (ಭಯೋತ್ಪಾದಕ ಕೃತ್ಯಗಳನ್ನು) ಮಾಡಿದವರಿಗೆ ಖಂಡಿತವಾಗಿಯೂ ಸೂಕ್ತ ಶಿಕ್ಷೆ ನೀಡಲಾಗುವುದು ಎಂಬ ಸಂಕಲ್ಪವನ್ನು ನಾನು ಪುನರುಚ್ಚರಿಸಲು ಬಯಸುತ್ತೇನೆ ಎಂದರು.

ಈ ಹೋರಾಟದಲ್ಲಿ 140 ಕೋಟಿ ಭಾರತೀಯರು ಮಾತ್ರವಲ್ಲ, ಇಡೀ ಜಗತ್ತು ಭಾರತದ ಜೊತೆ ನಿಂತಿದೆ. ಭಯೋತ್ಪಾದನೆಯ ವಿರುದ್ಧದ ಈ ಹೋರಾಟದಲ್ಲಿ ವಿಶ್ವದ ಎಲ್ಲಾ ದೇಶಗಳು ಒಗ್ಗೂಡಿ ಭಾರತದ ಜನರೊಂದಿಗೆ ನಿಂತಿವೆ ಎಂದಿದ್ದಾರೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".