1.8K
ಕುಮಟಾ : ತಾಲೂಕಿನ ಸುವರ್ಣಗದ್ದೆಯ ಸ್ವರ್ಣಾ ಲೆಟೆಕ್ಸ್ನ ಮಾಲಿಕ ಮಂಜುನಾಥ ಜಿ. ಭಟ್ಟ ಅವರಿಗೆ ಸಣ್ಣ ಕೈಗಾರಿಕೆಗಳ ವಿಭಾಗದಲ್ಲಿ ಉದ್ಯಮಿ ರತ್ನ ಪ್ರಶಸ್ತಿ ಲಭಿಸಿದೆ. ಇವರು ಕೈಗವಸು ತಯಾರಿಕೆಯಲ್ಲಿ ಈಗಾಗಲೇ ಪ್ರಸಿದ್ಧರಾಗಿದ್ದಾರೆ.
ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಆಶ್ರಯದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಐಮೆಕ್ಸ್-2025 ಇಂಡಸ್ಟ್ರೀ ಮತ್ತು ಮ್ಯಾನ್ಯುಫ್ಯಾಕ್ಟರಿಂಗ್ ಪ್ರದರ್ಶನದಲ್ಲಿ ಇವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ್ ಅವರು ಉದ್ಯಮಿ ರತ್ನ ಪ್ರಶಸ್ತಿ ಪ್ರದಾನ ಮಾಡಿದರು. ಸಂಘದ ಅಧ್ಯಕ್ಷ ಗಿರೀಶ ನಲವಡೆ, ಜಿ.ಸಿ. ಮಠದ, ನಂದು ಕೆಮಿಕಲ್ಸ್ನ ಉಷಾ ರಾಮನಾಥ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.

ಮಂಜುನಾಥ ಭಟ್ಟ ಸುವರ್ಣಗದ್ದೆಯವರು ಯುವ ಉದ್ಯಮಿಯಾಗಿ ಗುರುತಿಸಿಕೊಳ್ಳುವ ಜೊತೆಗೆ ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಕೊಂಡಿದ್ದಾರೆ.