Home ವಿಶೇಷಕುಮಟಾದ ಭೂಮಿಕಾ ಹೆಗಡೆ ರಾಜ್ಯಕ್ಕೇ ಟಾಪರ್

ಕುಮಟಾದ ಭೂಮಿಕಾ ಹೆಗಡೆ ರಾಜ್ಯಕ್ಕೇ ಟಾಪರ್

ಮರು ಮೌಲ್ಯಮಾಪನದಲ್ಲಿ ಒಂದು ಅಂಕ ಹೆಚ್ಚಳ

by News Desk
0 comments

ಕುಮಟಾ : 2024-25 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದ ಕುಮಟಾದ ಗಿಬ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಭೂಮಿಕಾ ನಾಗರಾಜ ಹೆಗಡೆ ಮರು ಮೌಲ್ಯಮಾಪನದಲ್ಲಿ ಇನ್ನೂ ಒಂದು ಅಂಕವನ್ನು ಪಡೆದುಕೊಳ್ಳುವ ಮೂಲಕ ೬೨೫ಕ್ಕೆ ೬೨೫ ಅಂಕ ಪಡೆದು ರಾಜ್ಯದ ಟಾಪರ್ ಗಳ ಪಟ್ಟಿಯಲ್ಲಿ ಸೇರ್ಪಡಗೊಳ್ಳುವ ಮೂಲಕ ಬಹುದೊಡ್ಡ ಸಾಧನೆ ಮಾಡಿದ್ದಾಳೆ.

೬೨೫ಕ್ಕೆ ೬೨೪ ಅಂಕಗಳನ್ನು ಪಡೆದಿದ್ದ ಭೂಮಿಕಾಗೆ ಇಂಗ್ಲೀಷ್ ಭಾಷೆಯಲ್ಲಿ ಒಂದು ಅಂಕ ಕಡಿಮೆಯಾಗಿತ್ತು. ಆದರೆ ನನಗೆ ಪೂರ್ಣ ಅಂಕ ಬರುವ ಎಲ್ಲಾ ಭರವಸೆ ಹೊಂದಿದ್ದ ಭೂಮಿಕಾ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದಳು. ಇದೀಗ ಅದರ ಫಲಿತಾಂಶ ಪ್ರಕಟವಾಗಿದೆ.

ಭೂಮಿಕಾಗೆ ಇಂಗ್ಲಿಷ್ ವಿಷಯದಲ್ಲಿಯೂ ಶೇ.೧೦೦ ರಷ್ಟು ಅಂಕ ಲಭಿಸಿದ್ದು,  ಶೇ.೯೯.೮೪ ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ ಹಾಗು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದ ಆಕೆಯು ಇದೀಗ ೬೨೫ಕ್ಕೆ ೬೨೫ ಅಂಕವನ್ನೂ ಪಡೆದು ಸಾಧನೆ ಮಾಡಿದ್ದಾಳೆ.

ಭೂಮಿಕಾ ಕುಮಟಾದ ಹನುಮಂತ ಬೆಣ್ಣೆ ಸರ್ಕಾರಿ ಪಿಯು ಕಾಲೇಜ್ ಉಪನ್ಯಾಸಕ ನಾಗರಾಜ್ ನಾರಾಯಣ ಹೆಗಡೆ ಮತ್ತು ರೇಣುಕಾ ಹೆಗಡೆ ದಂಪತಿಯ ಪುತ್ರಿಯಾಗಿದ್ದು, ಚಿಕ್ಕಂದಿನಿಂದಲೂ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಳು. ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಭೂಮಿಕಾ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಲ್.ಭಟ್ಟ, ಮುಖ್ಯಾಧ್ಯಾಪಕ ವಿನಾಯಕ ಶಾನಭಾಗ, ಸಹಶಿಕ್ಷಕರು, ಸಿಬ್ಬಂದಿ ವರ್ಗ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".