Home ಜಿಲ್ಲೆಚಿತ್ರಸಂತೆ ವರ್ಷದ ಕನ್ನಡಿಗ ೨೦೨೫ ಪ್ರಶಸ್ತಿಗೆ ಸಾಹಿತಿ ಸ್ವರಸಂಯೋಜಕ ಉಮೇಶ ಮುಂಡಳ್ಳಿ ಹೆಸರು ಘೋಷಣೆ

ಚಿತ್ರಸಂತೆ ವರ್ಷದ ಕನ್ನಡಿಗ ೨೦೨೫ ಪ್ರಶಸ್ತಿಗೆ ಸಾಹಿತಿ ಸ್ವರಸಂಯೋಜಕ ಉಮೇಶ ಮುಂಡಳ್ಳಿ ಹೆಸರು ಘೋಷಣೆ

by News Desk
0 comments

ಬೆಂಗಳೂರು: “ಚಿತ್ರಸಂತೆ” ಸಿನಿಮಾ ಪತ್ರಿಕೆ ಕಳೆದ ಹದಿಮೂರು ವರ್ಷಗಳಿಂದ ಸ್ಯಾಂಡಲ್ ವುಡ್ ನ ಅನೇಕ ಸೂಪರ್ ಸ್ಟಾರ್ ಗಳು ಚಿತ್ರರಂಗದ ಅನೇಕ ಗಣ್ಯರು ನಟ ನಟಿ ಸಂಗೀತ ರಂಗದ ಪ್ರತಿಭಾನ್ವಿತರನ್ನು ಗುರುತಿಸಿ ಉತ್ತಮ ನಟನಟಿ ಪೋಷಕ ನಟ ಹೀಗೆ ಅನೇಕ ವಿಧಗಳಲ್ಲಿ ಅವರನ್ನು ಗುರುತಿಸಿ ಗೌರವಿಸಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಿಕೊಂಡು ಬರುತ್ತಿದ್ದು ಜೊತೆಗೆ ರಾಜ್ಯದಲ್ಲಿ ಬೇರೆ ಬೇರೆ ರಂಗಗಳಲ್ಲಿ ಗುರುತಿಸಿಕೊಂಡ ಪ್ರತಿಭಾನ್ವಿತರನ್ನು ಗುರುತಿಸಿ ಇದೇ ವೇದಿಕೆಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ ನೀಡುತ್ತಾ ಬರುತ್ತಿದೆ.

೨೦೨೫ ರ “”ವರ್ಷದ ಕನ್ನಡಿಗ”” ಪ್ರಶಸ್ತಿ ಗೆ ಉತ್ತರ ಕನ್ನಡ ಜಿಲ್ಲೆಯ ಪ್ರತಿಭಾನ್ವಿತ ಬರಹಗಾರ ಲೇಖಕ ,ಸ್ವರ ಸಂಯೋಜಕ ಗಾಯಕ ಉಮೇಶ ಮುಂಡಳ್ಳಿ ಅವರನ್ನು ಆಯ್ಕೆ ಮಾಡಿದೆ.
ಎಂದು ಚಿತ್ರಸಂತೆ ಪತ್ರಿಕೆ ಮುಖ್ಯಸ್ಥ ಪ್ರಧಾನ ಸಂಪಾದಕ ಗಿರೀಶಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯವರಾದ ಉಮೇಶ ಮುಂಡಳ್ಳಿ ಅವರು ಕಳೆದ ಇಪ್ಪತೈದು ವರ್ಷಗಳಿಂದ ಸಾಹಿತ್ಯ ಸಂಗೀತ ಸೇವೆಯನ್ನು ಜೊತೆಜೊತೆ ನಡೆಸಿಕೊಂಡು ಬರುತ್ತಿದ್ದು ಮೌನಗೀತೆ, ಭಾವಸುಮ, ಕರುನಾಡ ಕುಡಿಗಳು,ನಾನೂ ಶಿಲ್ಪವಾಗಬೇಕು, ಹಾಗೂ ತಿಂಗಳ ಬೆಳಕು ( ಹನಿಕವನ) ಎನ್ನುವ ಕವನ ಸಂಕಲನಗಳನ್ನು, ಬೆಂಕಿ ಬಿದ್ದಿದೆ ಹೊಳೆಗೆ ಮಕ್ಕಳ ಕಥಾ ಸಂಕಲನ, ಉತ್ತರ ಕನ್ನಡಕ್ಕೆ ಒಂದು ಸುತ್ತು ಪ್ರವಾಸಿ ಲೇಖನ, ಮಾತಾ ಮಹಿಮಾ ಹಾಗೂ ಹನುಮಾಮೃತ ಎನ್ನುವ ಭಕ್ತಿ ಪ್ರಧಾನ ಕೃತಿಗಳನ್ನು ಕನ್ನಡ ಸಾಹಿತ್ಯಕ್ಕೆ ನೀಡಿರುತ್ತಾರೆ. ರಾಜ್ಯದ ಪ್ರತಿಷ್ಠಿತ ಪತ್ರಿಕೆಗಳಲ್ಲಿ ಅನೇಕ ಮೌಲ್ಯಭರಿತ ಲೇಖನಗಳನ್ನು ಬರೆಯುತ್ತಾ ಬರುತ್ತಿದ್ಸಾರೆ.

ಸಂಗೀತ ಕ್ಷೇತ್ರದಲ್ಲಿಯೂ ಇವರ ಸಾದನೆ ವಿಶಿಷ್ಟ ವಾದದ್ದು, ತಮ್ಮದೇ ಸ್ವರಚಿತ ಭಾವಗೀತೆ ಭಕ್ತಿಗೀತೆ ಹಾಗೂ ದೇಶಭಕ್ತಿ ಗೀತೆಗಳ ಜೊತೆ ರಾಜ್ಯದ ಅನೇಕ ಹಿರಿ ಹಿರಿಯ ಕವಿತೆಗಳ ನ್ನು ಇವರು ಸ್ವತಃ ಸ್ವರ ಸಂಯೋಜನೆ ಮಾಡಿ ಹಾಡಿರುತ್ತಾರೆ.

ಇವರ ಮೊದಲ ಧ್ವನಿಸುರುಳಿ “ಭರವಸೆಯ ಛಾಯೆ” ೨೦೧೧ ರಲ್ಲಿ ಹಿರಿಯ ಸಾಹಿತಿ ಪಾಟಿಲ್ ಪುಟ್ಟಪ್ಪನರು ಲೋಕಾರ್ಪಣೆ ಮಾಡಿದ್ದರು. ಇದುವರೆಗೆ ಮುಂಡಳ್ಳಿ ಅವರು ಸುಮಾರು ಮೂವತ್ತೈದಕ್ಕೂ ಹೆಚ್ಚಿನ ಗೀತೆಗಳಿಗೆ ಸ್ವರ ಸಙಯೋಜನೆ ಮಾಡಿ ತಾವು ಮತ್ತು ಇತರೆ ಗಾಯಕರಿಂದ ಹಾಡಿಸಿರುತ್ತಾರೆ. ನಿನಾದ ಯೂಟ್ಯೂಬ್ ಚಾನೆಲ್ ನಲ್ಲಿ ಅವುಗಳನ್ನು ನೋಡಬಹುದಾಗಿದೆ.

ಈ ಎಲ್ಲ ಸಾಧನೆಗಳನ್ನು ಪರಿಗಣಿಸಿ ಸಂಗೀತ ಸಾಹಿತ್ಯ ಒಟ್ಟಿಗೆ ಮೇಳೈಸಿರುವ ಜಿಲ್ಲೆಯ ಅಪ್ಪಟ ಗ್ರಾಮೀಣ ಪ್ರತಿಭೆ ಉಮೇಶ ಮುಂಡಳ್ಳಿಯವರನ್ನು ಬೆಂಗಳೂರಿನ ಸ್ಯಾಂಡಲ್ ವುಡ್ ಪತ್ರಿಕೆ ಚಿತ್ರಸಂತೆ ಗುರುತಿಸಿ ವರ್ಷದ ಕನ್ನಡಿಗ ಪ್ರಶಸ್ತಿ ನೀಡುತ್ತಿದೆ.

ಕನ್ನಡ ಚಿತ್ರರಂಗದ ಅನೇಕ ಗಣ್ಯರ ಉಪಸ್ಥಿತಿ ಯಲ್ಲಿ ಮೇ ೩೧ ರಂದು ಬೆಂಗಳೂರು ಅರಮನೆ ನಗರದಲ್ಲಿರುವ ಹೈಡ್ ಪಾರ್ಕ್ ಹೊಟೆಲ್ ನಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ ಎಂದು ಚಿತ್ರಸಂತೆಯ ಮುಖ್ಯಸ್ಥ ಗಿರೀಶ್ ವಿ ಗೌಡ ತಿಳಿಸಿದ್ದಾರೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".