Home ವಿಹಾರಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ಶ್ರೀಗಳ ಆಶೀರ್ವಾದ ಪಡೆದ ಡಾ. ಜಿ. ಜಿ. ಹೆಗಡೆ.

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ಶ್ರೀಗಳ ಆಶೀರ್ವಾದ ಪಡೆದ ಡಾ. ಜಿ. ಜಿ. ಹೆಗಡೆ.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕುರಿತಾಗಿ ಮನವಿ ಸಲ್ಲಿಸಿದ ಡಾ. ಜಿ.ಜಿ ಹೆಗಡೆ

by News Desk
0 comments

ಕುಮಟಾ : ಸ್ವಾತಂತ್ರ್ಯ ಬಂದು 75 ವರ್ಷವಾದರೂ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಉನ್ನತ ಅಗತ್ಯತೆಗಳಿಗೆ ಬೇರೆ ಜಿಲ್ಲೆಯನ್ನು ಅವಲಂಬಿಸಬೇಕಾದ ದುಸ್ಥಿತಿಯಿಂದ ಉತ್ತರ ಕನ್ನಡ ಜಿಲ್ಲೆಯ ನಾವು ಮತ್ತು ಮುಂದಿನ ಪೀಳಿಗೆಯನ್ನು ಹೊರತರಬೇಕಾದರೆ ಕನಿಷ್ಠ ನೂರು ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಅತ್ಯಗತ್ಯ. ಈಗಾಗಲೇ ಸಾಕಷ್ಟು ಜನರು ಇದರ ಬಗ್ಗೆ ಹೋರಾಟಗಳನ್ನು ಮಾಡುತ್ತ ಬಂದಿದ್ದು ಆಸ್ಪತ್ರೆ ಕನಸು ಇಂದಿಗೂ ಕನಸಾಗೇ ಉಳಿದಿದೆ. ಇದನ್ನು ಅರಿತ ಡಾ. ಜಿ. ಜಿ ಹೆಗಡೆ ಅವರು ತಮ್ಮ ಜಿ. ಎನ್. ಹೆಗಡೆ ಟ್ರಸ್ಟ್ ಮೂಲಕ ಕಾರ್ಯ ಪ್ರಾರಂಭಿಸಿದ್ದಾರೆ.

ಈಗಾಗಲೇ ಜಿಲ್ಲೆಯ ಜನರನ್ನು ಒಂದೆಡೆ ಸೇರಿಸಿ ಅಭಿಪ್ರಾಯ ಸಂಗ್ರಹ ಮಾಡಿ ಎಲ್ಲರ ಸಹಕಾರ ಸಹಯೋಗ ಕೇಳಿದ್ದಾರೆ. 30 ಎಕರೆ ಜಾಗವನ್ನು ಸರ್ಕಾರ ಮಂಜೂರಿ ಮಾಡಿದ್ದಲ್ಲಿ ನಿಗದಿತ ಸಮಯಕ್ಕೆ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುತ್ತೇವೆ ಎಂಬ ದೃಢ ಸಂಕಲ್ಪವನ್ನು ಮಾಡಿ ಮುನ್ನುಡಿ ಇಟ್ಟಿದ್ದಾರೆ. ಜಿಲ್ಲಾ ಉಸ್ತುವಾರಿ ಮಂತ್ರಿಗಳ ಆದಿಯಾಗಿ ಸರ್ಕಾರದ ಜವಾಬ್ದಾರಿಯುತ ಸ್ಥಾನದಲ್ಲಿರುವ ಹಲವಾರು ಜನರನ್ನು ಈಗಾಗಲೇ ಸಂಪರ್ಕ ಮಾಡಿರುವ ಇವರು ಗುರುವಾರ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಅವರನ್ನು ತಾಲೂಕಿನ ಕೋನಳ್ಳಿಯ ಶ್ರೀ ವನದುರ್ಗ ದೇವಸ್ಥಾನದಲ್ಲಿ ಶ್ರೀಗಳ ಚಾತುರ್ಮಾಸ ಸಂದರ್ಭದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕುರಿತಾಗಿ ಮನವಿ ಸಲ್ಲಿಸಿದರಲ್ಲದೆ ಸಮಸ್ಯೆಗಳ ಕುರಿತಾಗಿ ವಿವರಿಸಿದರು. ಈ ಸಂದರ್ಭದಲ್ಲಿ ಚಾತುರ್ಮಾಸ ಸಮಿತಿ ಅಧ್ಯಕ್ಷ ಎಚ್ ಆರ್ ನಾಯ್ಕ, ನಾಮಧಾರಿ ಸಂಘದ ಅಧ್ಯಕ್ಷ ಮಂಜುನಾಥ ನಾಯ್ಕ ಹೊನ್ನಾವರ ನಾಮಧಾರಿ ಸಂಘದ ಅಧ್ಯಕ್ಷ ಪಿ ಟಿ ನಾಯ್ಕ ಮತ್ತಿತರರು ಹಾಜರಿದ್ದರು.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".