Home ಜಿಲ್ಲೆಬುಡಸಮೇತ ಕಿತ್ತು ಕಾರಿನ ಮೇಲೆ ಬಿದ್ದ ಮರ

ಬುಡಸಮೇತ ಕಿತ್ತು ಕಾರಿನ ಮೇಲೆ ಬಿದ್ದ ಮರ

ಮಹಿಳೆ ಸಾವು : ಸೊಸೆಯನ್ನು ಕರೆತಂದ ಮಹಿಳೆ ಸೇರಿದಳು ಯಮಲೋಕ

by News Desk
0 comments

ಕಾರವಾರ : ಉತ್ತರ ಕನ್ನಡದಲ್ಲಿ ಕಳೆದ ಎರಡು ದಿನಗಳಿಂದ ಎಡಬಿಡದೆ ಮಳೆ ಸುರೆಯುತ್ತಿದ್ದು, ಮಳೆಯ ಅವಗಡಗಳು ನಡೆಯುತ್ತದೆ. ಮಳೆಯಿಂದಾಗಿ ಭೂಮಿ ಸಡಿಲವಾಗಿದ್ದು, ಮರಗಳು ಧರೆಗೆ ಉರುಳುತ್ತಿದೆ.

ಗರ್ಭಿಣಿಯಾದ ಸೊಸೆಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ಮಹಿಳೆಯೋರ್ವಳು ಕುಳಿತಿದ್ದ ಕಾರಿನ ಮೇಲೆ, ಬುಡ ಸಮೇತ ಕಿತ್ತು ಬಿದ್ದ ಬೃಹತ್ ಮರವೊಂದರಿಂದಾಗಿ ಮಹಿಳೆ ಸಾವನ್ನಪ್ಪಿದ ಘಟನೆ ವರದಿಯಾಗಿದೆ.

ಕಾರವಾರ ನಗರದ ಪಿಕಳೆ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಕಾರವೊಂದರ ಮೇಲೆ ಮರ ಉರುಳಿದೆ. ಇದರಿಂದಾಗಿ ಮಲ್ಲಾಪುರ ಗ್ರಾಮದ ಲಕ್ಷ್ಮೀ ನಾರಾಯಣ ಮಮ್ತೆಕರ (55) ಕೊನೆಯುಸಿರೆಳೆದಿದ್ದಾಳೆ.

ಘಟನೆಯಿಂದಾಗಿ ಲಕ್ಷ್ಮೀ ಮಮ್ತೆಕರ ಕಾರಿನೊಳಗೆ ಸಿಲುಕಿದರು. ಸ್ಥಳಕ್ಕೆ ಅಗ್ನಿಶಾಮಕದಳ ಹಾಗೂ ಕಾರವಾರ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಧಾವಿಸಿ, ಮರವನ್ನು ತೆರವುಗೊಳಿಸಿ ಗಾಯಗೊಂಡಿದ್ದ ಅವರನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರು. ಆದರೆ ಆಸ್ಪತ್ರೆಗೆ ಸಾಗಿಸುವಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಯಲ್ಲಿ ವೈದ್ಯರು ಸಾವನ್ನು ದೃಢಪಡಿಸಿದರು.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".