Home ಜಿಲ್ಲೆಮಳೆಯ ಕಾರಣ ನಾಳೆಯೂ ಉ.ಕ ದ ಹಲವು ತಾಲೂಕುಗಳ ಶಾಲಾ ಕಾಲೇಜಿಗೆ ರಜೆ

ಮಳೆಯ ಕಾರಣ ನಾಳೆಯೂ ಉ.ಕ ದ ಹಲವು ತಾಲೂಕುಗಳ ಶಾಲಾ ಕಾಲೇಜಿಗೆ ರಜೆ

by News Desk
0 comments

ಭಾರತೀಯ ಹವಾಮಾನ ಇಲಾಖೆ (IMD), ಬೆಂಗಳೂರು ರವರು ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನಾಂಕ 19-08-2025 ರಿಂದ 20-08-2025 ರ ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ (ಅರೆಂಜ್ ಅಲರ್ಟ್) ನ್ನು ನೀಡಿರುತ್ತಾರೆ. ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಜಿಲ್ಲೆಯ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ದಾಂಡೇಲಿ, ಜೋಯಿಡಾ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜು ಮಕ್ಕಳಿಗೆ ರಜೆ ಘೋಷಿಸುವ ಬಗ್ಗೆ ಆಯಾ ವಿಭಾಗದವರು ಕೋರಿರುತ್ತಾರೆ.

 

ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜು ಮಕ್ಕಳಿಗೆ ಅನಾನುಕೂಲವಾಗದಂತೆ ಹಾಗೂ ಅವಘಡಗಳು ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ದಾಂಡೇಲಿ, ಜೋಯಿಡಾ, ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜು ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ದಿನಾಂಕ: 20-8-2025 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿರುತ್ತಾರೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".