2.4K
ಕಾರವಾರ : ಗೋವಾಕಡೆಯಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ಅಲ್ಟೋ ಕಾರು ಚಾಲಕನ ನಿಯಂತ್ರಣ ತಪ್ಪಿ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ, ನಗರದ ಹೆದ್ದಾರಿಯಲ್ಲಿರುವ ಸುರಂಗ ಮಾರ್ಗದಲ್ಲಿ ತಡರಾತ್ರಿ ನಡೆದಿದೆ.
ಚಾಲಕ ಎದುರಿಗೆ ಇದ್ದ ಇನ್ನೊಂದು ವಾಹನವನ್ನು ಓವರ್ ಟೆಕ್ ಮಾಡಲು ಪ್ರಯತ್ನಿಸಿದ್ದ ಎನ್ನಲಾಗಿದ್ದು, ಈ ವೇಳೆ ಅಪಘಾತವಾಗಿದ್ದು, ಈ ದುರಂತದಲ್ಲಿ ಕಾರು ಚಲಾಯಿಸುತ್ತಿದ್ದ ಪುತ್ತೂರು ಮೂಲದ ರಂಜಿತ್ ವಿಶ್ವನಾಥ ನಾಯ್ಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತ ವ್ಯಕ್ತಿ ಗೋವಾ ಕಡೆಯಿಂದ ಪುತ್ತೂರಿನತ್ತ ಪ್ರಯಾಣಿಸುತ್ತಿದ್ದ. ಅಪಘಾತ ತಡರಾತ್ರಿ ಸುಮಾರು 2.30ರ ಸಮಯದಲ್ಲಿ ಕಾರವಾರ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.