2.6K
ಶಿರಸಿ : ತಾಲೂಕಿನ ಇಸಳೂರಿನಲ್ಲಿ ವಿದ್ಯಾರ್ಥಿನಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಪ್ರಥಮ ವರ್ಷದ ವಿಜ್ಞಾನ ವಿಷಯವನ್ನು ಅಧ್ಯಯನ ಮಾಡುತ್ತಿದ್ದ ಸ್ನೇಹಾ, ಚೀಟಿ ಬರೆದಿಟ್ಟು, ಸಾವಿಗೆ ಶರಣಾಗಿದ್ದಾಳೆ. ಮೃತಳ ಸ್ನೇಹಾ ತಂದೆ ಪೋಲಿಸ್ ಇಲಾಖೆಯ ಡಿಆರ್ ನಲ್ಲಿ ಎಆರ್ಐ ಆಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇಸಳೂರು ಕೆರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ. ಸ್ಥಳಕ್ಕೆ ಗ್ರಾಮೀಣ ಠಾಣೆಯ ಪಿಎಸ್ಐ ಸಂತೋಷಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.
