Home ದೇಶಸರ್ಕಾರಿ ಆದೇಶ-ಸುತ್ತೋಲೆ ಒಂದೇ ವೇದಿಕೆಗೆ ತರಲು ಸರ್ಕಾರ ಕ್ರಮ

ಸರ್ಕಾರಿ ಆದೇಶ-ಸುತ್ತೋಲೆ ಒಂದೇ ವೇದಿಕೆಗೆ ತರಲು ಸರ್ಕಾರ ಕ್ರಮ

by Editor
0 comments

ಬೆಂಗಳೂರು: ಸರ್ಕಾರಿ ಆದೇಶ, ಸುತ್ತೋಲೆ, ಯೋಜನೆ ಹಾಗೂ ವಿವಿಧ ಸೇವೆಗಳ ಕುರಿತು ಜನರಿಗೆ ಒಂದೇ ವೇದಿಕೆಯಲ್ಲಿ ಮಾಹಿತಿ ಸಿಗುವಂತೆ ಮಾಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದ್ದು, ಇದಕ್ಕಾಗಿ ಕೃತಕ ಬುದ್ಧಿಮತ್ತೆ (ಎಐ) ನೆರವು ಪಡೆಯಲು ಮುಂದಾಗಿದೆ.

ಬಹುತೇಕ ಸರ್ಕಾರಿ ಇಲಾಖೆಗಳು, ವಿಶೇಷವಾಗಿ ಸಾರ್ವಜನಿಕರೊಂದಿಗೆ ನೇರವಾಗಿ ಸಂವಹನ ನಡೆಸುವ ಇಲಾಖೆಗಳು, ಕಾಲಕಾಲಕ್ಕೆ ಸರ್ಕಾರಿ ಆದೇಶಗಳು, ಸುತ್ತೋಲೆಗಳು, ಅಧಿಸೂಚನೆಗಳು ಮತ್ತು ಇತರ ದಾಖಲೆಗಳನ್ನು ನೀಡುತ್ತಲೇ ಇರುತ್ತವೆ. ಇವುಗಳು ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡಲು ಸರ್ಕಾರ ಮುಂದಾಗಿದೆ.

ಆರಂಭಿಕ ಯೋಜನೆಯಾಗಿ ಇ-ಆಡಳಿತ ಕೇಂದ್ರ (ಸಿಇಜಿ) ಕಂದಾಯು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸೇರಿದಂತೆ ನಾಲ್ಕರಿಂದ ಐದು ಇಲಾಖೆಗಳನ್ನು ಆಯ್ಕೆ ಮಾಡಿದ್ದು. ಎಐ ನೆರವಿನ ಮೂಲಕ ಈ ಇಲಾಖೆಗಳ ಸುತ್ತೋಲೆ. ಆದೇಶ ಹಾಗೂ ಇತರೆ ಮಾಹಿತಿಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲು ಮುಂದಾಗಿದೆ.

ಸಿಇಜಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಶ್ ಶಶಿ ಅವರು ಮಾತನಾಡಿ, ಈ ದಾಖಲೆಗಳನ್ನು ಪ್ರತಿಯೊಂದು ಇಲಾಖೆಯ ವೆಬ್‌ಸೈಟ್‌ನಲ್ಲಿ ಕೀವರ್ಡ್‌ಗಳನ್ನು ಬಳಸಿಕೊಂಡು ಹುಡುಕಬಹುದು ಎಂದು ಹೇಳಿದ್ದಾರೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".