487
ಬೆಂಗಳೂರು: ವಾಯುಭಾರ ಕುಸಿತದ ಪ್ರಭಾವದಿಂದ ಕರ್ನಾಟಕದ ಹಲವೆಡೆ ಮಳೆಯಾಗುತ್ತಿದೆ. ವೀಕೆಂಡ್ ಸೇರಿದಂತೆ ಮುಂದಿನ ವಾರವೂ ರಾಜ್ಯದಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ?
ಮುಂದಿನ 3 ಗಂಟೆಯಲ್ಲಿ ಮೈಸೂರು, ತುಮಕೂರು, ಚಿಕ್ಕಬಳ್ಳಾಪುರಕ್ಕೆ ಭಾರೀ ಮಳೆ -ಗುಡುಗು ಬರಲಿದೆ ಎಂದು ಹವಾಮಾನ ಇಲಾಖೆ ನೌಕಾಸ್ಟ್ ವರದಿ ನೀಡಿದೆ. ಹೀಗಾಗಿ ಪ್ರಯಾಣ ಮಾಡದಂತೆ, ನೀರಿನ ಆಶಯಗಳಲ್ಲಿ ಎಚ್ಚರದಿಂದ ಇರುವಂತೆ ಮುನ್ಸೂಚನೆ ಕೊಡಲಾಗಿದೆ.

ಇಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ, ಯಾದಗಿರಿ, ಬೀದರ್, ಕಲಬುರ್ಗಿ, ಗದಗ, ರಾಯಚೂರು ಜಿಲ್ಲೆಗಳಲ್ಲಿ, ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಕೋಲಾರ, ಬಳ್ಳಾರಿ, ದಾವಣಗೆರೆ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ.