505
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಆರ್ಟಿಸಿ)ದ ಬಸ್ಗಳ ಮೇಲಿನ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಕೂಡಲೇ ಸಂಪೂರ್ಣ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಸೂಚನೆ ನೀಡಿದೆ.
ಸಿಎಂ ಕಚೇರಿ ಸೂಚನೆ ಮೇರೆಗೆ ಕೆಎಸ್ ಆರ್ ಟಿಸಿ, ಸಂಬಂಧಪಟ್ಟ ಜಾಹೀರಾತು ಪರವಾನಗಿದಾರರಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು, ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಕ್ರಮಕೈಗೊಳ್ಳಲಾಗಿದೆ.

ನಾಗರಿಕರೊಬ್ಬರು ಸಾಮಾಜಿಕ ಮಾಧ್ಯಮದ ಮೂಲಕ ಬಸ್ ಗಳಲ್ಲಿ ತಂಬಾಕು ಜಾಹೀರಾತಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಸಂಬಂಧ ಏಪ್ರಿಲ್ 8 ರಂದು ಮುಖ್ಯಮಂತ್ರಿಗೆ ವಿಶೇಷ ಕರ್ತವ್ಯ ಅಧಿಕಾರಿಯನ್ನು ಟ್ಯಾಗ್ ಮಾಡಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಸಿರಾಜ್ ಎಂಬುವವರು, ಯುವಜನರಲ್ಲಿ ಜನಪ್ರಿಯವಾಗಿರುವ ಹೊಗೆರಹಿತ ತಂಬಾಕು ಉತ್ಪನ್ನದ ಜಾಹೀರಾತನ್ನು ಪ್ರದರ್ಶಿಸುವ ಹಿಂಭಾಗದ ಫಲಕದೊಂದಿಗೆ ಕೆಎಸ್ಆರ್ಟಿಸಿ ಬಸ್ನ ಫೋಟೋವನ್ನು X ನಲ್ಲಿ ಹಂಚಿಕೊಂಡಿದ್ದರು.