Home ಜಿಲ್ಲೆರಾಜ್ಯ ಮಟ್ಟದ ಗೀತಗಾಯನ ಸ್ಪರ್ಧೆಗೆ ಸಂಧ್ಯಾ ವಿನಾಯಕ ಆಯ್ಕೆ

ರಾಜ್ಯ ಮಟ್ಟದ ಗೀತಗಾಯನ ಸ್ಪರ್ಧೆಗೆ ಸಂಧ್ಯಾ ವಿನಾಯಕ ಆಯ್ಕೆ

by News Desk
0 comments

ಕುಮಟಾ: ರಾಷ್ಟ್ರಕವಿ ಡಾ.ಜಿ.ಎಸ್.ಎಸ್. ಪ್ರತಿಷ್ಠಾನ (ರಿ.) ಶಿವಮೊಗ್ಗ ವತಿಯಿಂದ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಕುಮಟಾದ ಕೂಜಳ್ಳಿಯ ಸಂಧ್ಯಾ ವಿನಾಯಕ ಹೆಗಡೆ ಆಯ್ಕೆಯಾಗಿದ್ದಾರೆ. ಈ ಸ್ಪರ್ಧೆಯಲ್ಲಿ ಕರ್ನಾಟಕದ ವಿವಿಧ ಭಾಗದ 83 ಸ್ಪರ್ಧಾಳುಗಳು ಭಾಗವಹಿಸಿದ್ದರು.

ಅಂತಿಮ ಸುತ್ತಿನ ಸ್ಪರ್ಧೆಯು ಫೆಬ್ರವರಿ 10 ರಂದು ಶಿವಮೊಗ್ಗದಲ್ಲಿ ನಡೆಯಲಿದೆ. ಆತ್ಮಸಂತೋಷದ ಹವ್ಯಾಸಕ್ಕಾಗಿ ತಡವಾಗಿ ಹಾಡಲು ಆರಂಭಿಸಿದ ಇವರು ಈಗಾಗಲೇ ಹಲವು ಹಾಡುಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಅಭಿಮಾನಿಗಳನ್ನು ಪಡೆದಿದ್ದಾರೆ. ಪ್ರಸ್ತುತ ಗೋಕರ್ಣದ ಸ್ವರಾತ್ಮ ಗುರುಕುಲದ ಪಂ. ಹರೀಶ ಹೆಗಡೆ ಅವರಲ್ಲಿ ಸಂಗೀತದ ಅಭ್ಯಾಸ ಮುಂದುವರಿಸಿದ್ದಾರೆ.

ಸಿ.ಎ. ವಿನಾಯಕ ಹೆಗಡೆ ಅವರ ಧರ್ಮಪತ್ನಿಯಾದ ಇವರು ಗಂಡನಿಗೆ ಕಚೇರಿ ಕೆಲಸದಲ್ಲಿ ಸಹಾಯ ಮಾಡುತ್ತ, ಮನೆವಾರ್ತೆಯ ಎಲ್ಲ ಕೆಲಸಗಳನ್ನು ನಿಭಾಯಿಸುತ್ತ, ಮಹಿಳಾ ಸಬಲೀಕರಣಕ್ಕೆ ಸಂಘಟನೆಗಳಿಗೆ ನೆರವಾಗುತ್ತ ಸಂಗೀತ ಸಾಧನೆಯನ್ನೂ ಮಾಡುತ್ತಿರುವುದು ವಿಶೇಷ.

ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುವುದಕ್ಕೆ ಅವರ ಅಭಿಮಾನಿ ಶೋತೃ ಬಳಗ ಸಂತಸ ವ್ಯಕ್ತಪಡಿಸಿದ್ದಾರೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".