Home ಮಾಹಿತಿಇಂಧನ ದರ ಏರಿಕೆ: ಜನಸಾಮಾನ್ಯರಿಗೆ ಮತ್ತೊಂದು ಶಾಕ್

ಇಂಧನ ದರ ಏರಿಕೆ: ಜನಸಾಮಾನ್ಯರಿಗೆ ಮತ್ತೊಂದು ಶಾಕ್

ಜನಸಾಮಾನ್ಯರ ಬದುಕಿನ ಮೇಲೆ ಮತ್ತಷ್ಟು ಆರ್ಥಿಕ ಒತ್ತಡ ಹೆಚ್ಚಾಗುವ ಸಾಧ್ಯತೆ

by News Desk
0 comments

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ಹಿನ್ನೆಲೆ, ದೇಶದ ಜನಸಾಮಾನ್ಯರಿಗೆ ಮತ್ತೊಂದು ಆರ್ಥಿಕ ಹೊರೆ ತಂದೊಡ್ಡುವ ಸುದ್ದಿಯೊಂದು ಹೊರಬಿದ್ದಿದೆ. ಪ್ರಮುಖ ಖಾಸಗಿ ಇಂಧನ ಕಂಪನಿಯಾದ ಪೆಟ್ರೋಲ್ ಹಾಗೂ ಡೀಸೆಲ್ ದರಗಳನ್ನು ಏರಿಕೆ ಮಾಡಿರುವುದಾಗಿ ಘೋಷಿಸಿದೆ.

ಕಂಪನಿಯ ನಿರ್ಧಾರ ಪ್ರಕಾರ, ಪೆಟ್ರೋಲ್ ದರದಲ್ಲಿ ಪ್ರತಿ ಲೀಟರ್‌ಗೆ ₹5.30 ಮತ್ತು ಡೀಸೆಲ್ ದರದಲ್ಲಿ ₹3ರಷ್ಟು ಏರಿಕೆ ಮಾಡಲಾಗಿದೆ. ಈ ದಿಢೀರ್ ಬೆಲೆ ಏರಿಕೆಯಿಂದ ಜನಸಾಮಾನ್ಯರಲ್ಲಿ ಆತಂಕ ಹೆಚ್ಚಾಗಿದೆ.

ಇಂಧನ ಕೊರತೆಯ ಭೀತಿ ನಡುವೆ ದೇಶದ ವಿವಿಧ ರಾಜ್ಯಗಳಲ್ಲಿ ವಾಹನ ಸವಾರರು ಪೆಟ್ರೋಲ್ ಬಂಕ್‌ಗಳ ಮುಂದೆ ಮುಗಿಬಿದ್ದು, ಉದ್ದ ಸಾಲುಗಳಲ್ಲಿ ನಿಲ್ಲುತ್ತಿರುವ ದೃಶ್ಯಗಳು ಸಾಮಾನ್ಯವಾಗಿವೆ. ಇನ್ನೊಂದೆಡೆ, ಎಲ್‌ಪಿಜಿ (LPG) ಕೊರತೆಯ ಪರಿಣಾಮವಾಗಿ ಫಿಲ್ಲಿಂಗ್ ಸ್ಟೇಷನ್‌ಗಳು ಹಾಗೂ ಡಿಪೋಗಳ ಹೊರಗೆ ಸಹ ದೀರ್ಘ ಸಾಲುಗಳು ಕಂಡುಬರುತ್ತಿವೆ.

ದೇಶದ ಪ್ರಮುಖ ಖಾಸಗಿ ಇಂಧನ ಮಾರಾಟ ಸಂಸ್ಥೆಯಾದ ಗುರುವಾರ ಈ ಬೆಲೆ ಏರಿಕೆಯನ್ನು ಘೋಷಿಸಿದ್ದು, ಇದು ಹಣದುಬ್ಬರದ ಒತ್ತಡವನ್ನು ಇನ್ನಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಕಂಪನಿಯು ದೇಶಾದ್ಯಂತ ಸುಮಾರು 6,500ಕ್ಕೂ ಹೆಚ್ಚು ಪೆಟ್ರೋಲ್ ಪಂಪ್‌ಗಳನ್ನು ಹೊಂದಿದ್ದು, ಖಾಸಗಿ ವಲಯದಲ್ಲಿ ಎರಡನೇ ಅತಿದೊಡ್ಡ ತೈಲ ಸಂಸ್ಕರಣಾ ಹಾಗೂ ರೀಟೇಲ್‌ ಜಾಲವಾಗಿದೆ.

ಮಧ್ಯಪ್ರಾಚ್ಯದ ಯುದ್ಧ ಪರಿಸ್ಥಿತಿಯ ನಡುವೆ ಈ ದರ ಏರಿಕೆ ನಡೆದಿರುವುದು ಮತ್ತಷ್ಟು ಆತಂಕ ಮೂಡಿಸಿದೆ. ಇದಕ್ಕೂ ಮೊದಲು (IOC) ಹಾಗೂ ಸಂಸ್ಥೆಗಳು ಪ್ರೀಮಿಯಂ ಪೆಟ್ರೋಲ್ ದರಗಳನ್ನು ಏರಿಕೆ ಮಾಡಿದ್ದವು.

ಇದರ ಜೊತೆಗೆ ಕೈಗಾರಿಕಾ ಡೀಸೆಲ್ ದರಗಳೂ ಏರಿಕೆಯಾಗಿದ್ದು, ಕೈಗಾರಿಕೆಗಳ ಉತ್ಪಾದನಾ ವೆಚ್ಚ ಹೆಚ್ಚುವ ಸಾಧ್ಯತೆಯಿದೆ. ಪರಿಣಾಮವಾಗಿ ವಸ್ತುಗಳ ಬೆಲೆ ಏರಿಕೆಯೂ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಪ್ರಸ್ತುತ ನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ ರೂ.102.92 ಇದ್ದು, ಇದು ರೂ.107ಕ್ಕೆ ಏರಿಕೆಯಾಗಲಿದೆ. ಡೀಸೆಲ್ ದರ ರೂ. 90.99ರಿಂದ ರೂ.93.99ಕ್ಕೆ ಹೆಚ್ಚಲಿದೆ. ನಲ್ಲಿ ಪೆಟ್ರೋಲ್ ದರ ರೂ.107.46ಕ್ಕೆ ತಲುಪಿದೆ. ಮತ್ತು ನಗರಗಳಲ್ಲಿಯೂ ಪೆಟ್ರೋಲ್ ದರ ರೂ.100 ಗಡಿ ದಾಟಿದೆ.

ಒಟ್ಟಾರೆ, ಇಂಧನ ದರ ಏರಿಕೆಯ ಪರಿಣಾಮವಾಗಿ ದೇಶದ ಜನಸಾಮಾನ್ಯರ ಬದುಕಿನ ಮೇಲೆ ಮತ್ತಷ್ಟು ಆರ್ಥಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".