Home ದೇಶಭಾರತಕ್ಕೆ ಇರಾನ್ ಅಭಯ : ಯುದ್ಧದ ನಡುವೆಯೂ ಭಾರತದ ಹಡಗುಗಳ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್

ಭಾರತಕ್ಕೆ ಇರಾನ್ ಅಭಯ : ಯುದ್ಧದ ನಡುವೆಯೂ ಭಾರತದ ಹಡಗುಗಳ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್

by News Desk
0 comments

ತೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಜಯ ಸಿಕ್ಕಿದೆ. ಜಗತ್ತಿನ ಅತಿ ದೊಡ್ಡ ತೈಲ ಸಾಗಾಣಿಕಾ ಮಾರ್ಗದಲ್ಲಿ ಒಂದಾದ ‘ಹಾರ್ಮುಜ್ ಜಲಸಂಧಿ’ಯನ್ನು (Strait of Hormuz) ಭಾರತದ ಹಡಗುಗಳ ಸಂಚಾರಕ್ಕೆ ಇಡುವುದಾಗಿ ಇರಾನ್ ಪ್ರಕಟಿಸಿದೆ.

ಕಳೆದ ತಿಂಗಳು ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ಯುದ್ಧ ಸಾರಿದ ನಂತರ, ಇರಾನ್ ಈ ಆಯಕಟ್ಟಿನ ಜಲಮಾರ್ಗದ ಮೇಲೆ ನಿರ್ಬಂಧ ವಿಧಿಸಿತ್ತು. ಇದರಿಂದಾಗಿ ಜಾಗತಿಕ ತೈಲ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿತ್ತು.

 

ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರು ಇರಾಣಿನ ಸರ್ಕಾರಿ ದೂರದರ್ಶನದ ಜೊತೆ ಮಾತನಾಡಿ, ಪಾಶ್ಚಿಮಾತ್ಯ ಮಾಧ್ಯಮಗಳ ವರದಿಯನ್ನು ತಳ್ಳಿಹಾಕಿದ್ದಾರೆ. “ಹಾರ್ಮುಜ್ ಜಲಸಂಧಿ ಸಂಪೂರ್ಣವಾಗಿ ಮುಚ್ಚಲ್ಪಟ್ಟಿಲ್ಲ. ಭಾರತ ಸೇರಿದಂತೆ ನಮ್ಮೊಂದಿಗೆ ಉತ್ತಮ ಸಂಬಂಧ ಹೊಂದಿರುವ ಮಿತ್ರ ರಾಷ್ಟ್ರಗಳ ಹಡಗುಗಳ ಸುರಕ್ಷಿತ ಸಂಚಾರಕ್ಕೆ ನಮ್ಮ ಸಶಸ್ತ್ರ ಪಡೆಗಳು ಸಂಪೂರ್ಣ ಸಹಕಾರ ನೀಡುತ್ತಿವೆ,” ಎಂದು ಅವರು ತಿಳಿಸಿದ್ದಾರೆ.
ವರದಿಯ ಪ್ರಕಾರ, ಕಳೆದ ಕೆಲವು ದಿನಗಳಲ್ಲಿ ಭಾರತದ ಎರಡು ಬೃಹತ್ ಹಡಗುಗಳು ಈ ಮಾರ್ಗದ ಮೂಲಕ ಯಶಸ್ವಿಯಾಗಿ ಸಂಚರಿಸಿವೆ. ಭಾರತದ ಜೊತೆಗೆ ರಷ್ಯಾ, ಚೀನಾ, ಪಾಕಿಸ್ತಾನ ಮತ್ತು ಇರಾಕ್ ದೇಶಗಳಿಗೂ ಇರಾನ್ ಈ ವಿನಾಯಿತಿ ನೀಡಿದೆ.

ಒಂದೆಡೆ ಮಿತ್ರ ರಾಷ್ಟ್ರಗಳಿಗೆ ಅವಕಾಶ ನೀಡುತ್ತಿರುವ ಇರಾನ್, ತನ್ನ ಶತ್ರುಗಳ ವಿರುದ್ಧ ಕಠಿಣ ನಿಲುವು ತಳೆದಿದೆ. “ನಾವು ಯುದ್ಧದ ಸ್ಥಿತಿಯಲ್ಲಿದ್ದೇವೆ. ಹೀಗಾಗಿ ಅಮೆರಿಕ, ಇಸ್ರೇಲ್ ಮತ್ತು ಯುದ್ಧದಲ್ಲಿ ಅವರಿಗೆ ಸಾಥ್ ನೀಡುತ್ತಿರುವ ಕೆಲವು ಗಲ್ಫ್ ರಾಷ್ಟ್ರಗಳ ಹಡಗುಗಳಿಗೆ ಈ ಮಾರ್ಗದಲ್ಲಿ ಪ್ರವೇಶವಿಲ್ಲ,” ಎಂದು ಅರಾಗ್ಚಿ ಸ್ಪಷ್ಟಪಡಿಸಿದ್ದಾರೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".