ಭಟ್ಕಳ: ಮುಂದಿನ CET ಪರೀಕ್ಷೆಯನ್ನು ಎದುರಿಸಲು ಸಿದ್ಧರಾಗುತ್ತಿರುವ ವಿದ್ಯಾರ್ಥಿಗಳಿಗೆ AITM ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಫಜ್ಲುರ್ ರಹಮಾನ್ ಅವರು ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, CET ಪರೀಕ್ಷೆ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಮಹತ್ವದ ಹಂತವಾಗಿದ್ದು, ಪರಿಶ್ರಮ, ನಿಷ್ಠೆ ಹಾಗೂ ಆತ್ಮವಿಶ್ವಾಸವು ಯಶಸ್ಸಿಗೆ ದಾರಿಯಾಗುತ್ತದೆ ಎಂದು ತಿಳಿಸಿದ್ದಾರೆ. ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಾಂತ ಮನೋಭಾವವನ್ನು ಕಾಪಾಡಿಕೊಂಡು, ಏಕಾಗ್ರತೆಯಿಂದ ಉತ್ತರಿಸುವಂತೆ ಅವರು ಸಲಹೆ ನೀಡಿದ್ದಾರೆ.

ಯಶಸ್ಸು ಫಲಿತಾಂಶದಲ್ಲೇ ಅಲ್ಲ, ಪರೀಕ್ಷೆಗೆ ಹಾಕಿದ ಪರಿಶ್ರಮದಲ್ಲೂ ಇದೆ ಎಂಬುದನ್ನು ವಿದ್ಯಾರ್ಥಿಗಳು ಮನಗಾಣಬೇಕು ಎಂದು ಹೇಳಿದರು. ತಮ್ಮ ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟು ಉತ್ತಮ ಪ್ರದರ್ಶನ ನೀಡುವಂತೆ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಎಲ್ಲ ವಿದ್ಯಾರ್ಥಿಗಳು ತಮ್ಮ ಶ್ರೇಷ್ಠ ಸಾಮರ್ಥ್ಯವನ್ನು ಪ್ರದರ್ಶಿಸಿ ಉತ್ತಮ ಫಲಿತಾಂಶಗಳನ್ನು ಸಾಧಿಸಲಿ ಎಂದು ಹಾರೈಸಿದ ಅವರು, CET ಪರೀಕ್ಷೆಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದರು.