Home ಜಿಲ್ಲೆಲೋಕೇಶ ಅರಿಷಿಣಗುಪ್ಪಿ ಅವರಿಗೆ ‘ಕರ್ನಾಟಕ ಸೇವಾ ರತ್ನ’ ಪ್ರಶಸ್ತಿ ಗರಿ

ಲೋಕೇಶ ಅರಿಷಿಣಗುಪ್ಪಿ ಅವರಿಗೆ ‘ಕರ್ನಾಟಕ ಸೇವಾ ರತ್ನ’ ಪ್ರಶಸ್ತಿ ಗರಿ

by Editor
0 comments
ಕುಮಟಾ : ಕುಮಟಾ ಪೊಲೀಸ್ ಠಾಣೆಯ ಸಿಬ್ಬಂದಿಯಾಗಿರುವ  ಲೋಕೇಶ ಅರಿಷಿಣಗುಪ್ಪಿ ಅವರು 2026ನೇ ಸಾಲಿನ ಪ್ರತಿಷ್ಠಿತ ‘ಕರ್ನಾಟಕ ಸೇವಾ ರತ್ನ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿನ ಇವರ ದಕ್ಷ ಸೇವೆ ಹಾಗೂ ಸಮಾಜ ಸೇವೆಯನ್ನು ಗುರುತಿಸಿ, ಬೆಂಗಳೂರಿನ ಕರ್ನಾಟಕ ಪ್ರೆಸ್ ಕ್ಲಬ್ ಇವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಕನ್ನಡ ನಾಡು, ನುಡಿ ಮತ್ತು ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಮಾದರಿ ಸೇವೆ ಸಲ್ಲಿಸುತ್ತಿರುವ ಸಾಧಕರನ್ನು ಗುರುತಿಸಿ ಕರ್ನಾಟಕ ಪ್ರೆಸ್ ಕ್ಲಬ್ ಪ್ರತಿವರ್ಷ ಗೌರವಿಸುತ್ತದೆ. ಲೋಕೇಶ ಅವರು ತಮ್ಮ ವೃತ್ತಿ ಬದುಕಿನ ಜೊತೆಗೆ ಸಾಮಾಜಿಕ ಕಳಕಳಿಯೊಂದಿಗೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ, ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ ಎಂದು ಕ್ಲಬ್‌ನ ರಾಜ್ಯಾಧ್ಯಕ್ಷ ರಮೇಶ ಎಸ್.ಜಿ ತಮ್ಮ ಆಯ್ಕೆ ಪತ್ರದಲ್ಲಿ ತಿಳಿಸಿದ್ದಾರೆ.
ಇದೇ ಜನವರಿ 13, 2026 ರ ಮಂಗಳವಾರ ಸಂಜೆ 4 ಗಂಟೆಗೆ ಬೆಂಗಳೂರಿನ ನಾಗರಭಾವಿಯಲ್ಲಿರುವ ಕಲಾಗ್ರಾಮದಲ್ಲಿ ನಡೆಯಲಿರುವ ‘ಸಾಧಕರ ಸಮಾಗಮ’ ಕಾರ್ಯಕ್ರಮದಲ್ಲಿ ಲೋಕೇಶ ಅರಿಷಿಣಗುಪ್ಪಿ ಅವರಿಗೆ ‘ಕರ್ನಾಟಕ ಸೇವಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಇವರ ಈ ಸಾಧನೆಗೆ ಇಲಾಖೆಯ ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು ಹಾಗೂ ಸಾರ್ವಜನಿಕ ವಲಯದಿಂದ ಅಭಿನಂದನೆಗಳು ವ್ಯಕ್ತವಾಗಿವೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".