Home ಜಿಲ್ಲೆಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಕೊಂಕಣದ ಅನೀಶ್‌

ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಕೊಂಕಣದ ಅನೀಶ್‌

ಸಾಧನೆಗೆ ಎಲ್ಲೆಡೆಯಿಂದ ಅಭಿನಂದನೆ : ದೇಶದ ಗೌರವ ಹೆಚ್ಚಿಸಿದ ವಿದ್ಯಾರ್ಥಿ

by Editor
0 comments

ಕುಮಟಾ : ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕೊಂಕಣ ಎಜ್ಯುಕೇಶನ್‌ ಟ್ರಸ್ಟ್ಟ್‌ನ ಸಿವಿಎಸ್‌ಕೆ ಪ್ರೌಢಶಾಲೆಯ 8ನೇ ವರ್ಗದ ವಿದ್ಯಾರ್ಥಿ, ಹೊನ್ನಾವರದ ಕೊಂಡದಕುಳಿ ಬೇರಂಕಿಯ ಕಲಾಧರ ಹಾಗೂ ಮುಕ್ತಾ ದಂಪತಿಗಳ ಸುಪುತ್ರ ಕೆ.ಬಿ.ಅನೀಶ್‌, ಮಲೇಶಿಯಾದ ಕೋಲಾಲಂಪುರದಲ್ಲಿ ನಡೆದ ವರ್ಲ್ಡ್‌ ಯೋಗಾ ಎಂಡ್‌ ಸ್ಪೋರ್ಟ್ಸ್‌ ಎಜ್ಯುಕೇಶನ್‌ ಕೌನ್ಸಿಲ್‌ ಇಂಡೋ-ಮಲೇಶಿಯಾ ಯೂಥ್‌ ಚಾಂಪಿಯನ್‌ಶಿಪ್‌ನ, ಆರ್ಟಿಸ್ಟಿಕ್‌ ಹಾಗೂ ಟ್ರೆಡಿಶನ್‌ ಈ ಎರಡೂ ವಿಭಾಗಗಳಲ್ಲಿ ಭರ್ಜರಿ ಪ್ರದರ್ಶನ ನೀಡಿ ಭಾರತಕ್ಕೆ ಚಿನ್ನದ ಪದಕವನ್ನು ಗಳಿಸಿಕೊಟ್ಟಿರುತ್ತಾನೆ.

ಕೇವಲ ನಮ್ಮ ರಾಜ್ಯ ಮಾತ್ರವಲ್ಲದೆ, ಇಡೀ ದೇಶದ ಹೆಸರನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಗಿಸಿದ ಈತನ ಸಾಧನೆಯಿಂದಾಗಿ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಹೆಸರುವಾಸಿಯಾಗಿದ್ದ ಕೊಂಕಣದ ಸಿವಿಎಸ್‌ಕೆ ಪ್ರೌಢಶಾಲೆಯು, ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಸಾಧನೆಯ ದಾಪುಗಾಲನ್ನಿಟ್ಟಂತಾಗಿದೆ.

ವಿದ್ಯಾರ್ಥಿಯ ಈ ಅಭೂತಪೂರ್ವ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಶೈಕ್ಷಣಿಕ ಸಲಹೆಗಾರರು, ಮುಖ್ಯ ಶಿಕ್ಷಕರು, ಸಮಸ್ತ ಬೋಧಕ-ಬೋಧಕೇತರ ಸಿಬ್ಬಂದಿ, ಪಾಲಕರು, ಉಪನಿರ್ದೇಶಕರು, ಕ್ಷೇತ್ರಶಿಕ್ಷಣಾಧಿಕಾರಿಗಳು, ಹಾಗೂ ಕಚೇರಿ ಸಿಬ್ಬಂದಿಗಳು ಅತೀವ ಸಂತಸ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".