Home State News ತೆಲಂಗಾಣದ ನೂತನ ಸಿಎಂ : ಕೆ.ಚಂದ್ರಶೇಖರ ರಾವ್ ಪ್ರಮಾಣ ವಚನ ಸ್ವೀಕಾರ.

ತೆಲಂಗಾಣದ ನೂತನ ಸಿಎಂ : ಕೆ.ಚಂದ್ರಶೇಖರ ರಾವ್ ಪ್ರಮಾಣ ವಚನ ಸ್ವೀಕಾರ.

ಹೈದರಾಬಾದ್: ಹೈದರಾಬಾದ್ ನ ರಾಜಭವನದಲ್ಲಿ ತೆಲಂಗಾಣದ ನೂತನ ಸಿಎಂ ಆಗಿ ತೆಲಂಗಾಣ ರಾಷ್ಟ್ರ ಸಮಿತಿಯ (ಟಿಆರ್ ಎಸ್) ಅಧಿನಾಯಕ ಕೆ ಚಂದ್ರಶೇಖರ ರಾವ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಹೈದರಾಬಾದ್ ನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆ ಚಂದ್ರಶೇಖರ ರಾವ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ಕೆ .ಚಂದ್ರಶೇಖರ ರಾವ್ ಅವರಿಗೆ ರಾಜ್ಯಪಾಲ ನರಸಿಂಹನ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಅಲ್ಲದೇ, ಚಂದ್ರಶೇಖರ ರಾವ್ ಅವರೊಂದಿಗೆ ಟಿಆರ್ ಎಸ್ ಹಿರಿಯ ಶಾಸಕ ಮಹಮದ್ ಅಲಿ ಅವರೂ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ ಡಿಸೆಂಬರ್ 18ರಂದು ಸಂಪೂರ್ಣ ಪ್ರಮಾಣದ ಮಂತ್ರಿಮಂಡಲವನ್ನು ರಚಿಸುವುದಾಗಿಯೂ ಅಂದೇ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಟಿಆರ್ ಎಸ್ ತಿಳಿಸಿದೆ ಎಂದು ವರದಿಯಾಗಿದೆ.

ವಿಧಾನಸಭೆ ಚುನಾವಣೆಯಲ್ಲಿ ತೆಲಂಗಾಣವು ಟಿಆರ್ ಎಸ್ ಪಕ್ಷದಿಂದ 88 ಸ್ಥಾನಗಳಲ್ಲಿ ಜಯಭೇರಿ ಭಾರಿಸುವ ಮೂಲಕ ಎರಡನೇ ಬಾರಿಗೆ ಅಧಿಕಾರದ ಗದ್ದುಗೆ ಏರಿದೆ ಎನ್ನಲಾಗಿದೆ.