ನವದೆಹಲಿ: ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದ ಬಡವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10 ರಷ್ಟು ಮೀಸಲಾತಿ ತರಲು ಮುಂದಾಗಿರುವ ಕೇಂದ್ರದ ನಿರ್ಧಾರ ಸಂಬಂಧ ಸುಪ್ರೀಂಕೋರ್ಟ್​ ಮೋದಿ ಸರ್ಕಾರಕ್ಕೆ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ.

ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನ ವಿರೋಧಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿತ್ತು. ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠ, ಅರ್ಜಿ ವಿಚಾರಣೆಯನ್ನ ನಡೆಸಲು ಕೋರ್ಟ್​ ಒಪ್ಪಿಕೊಂಡಿದೆ ಎನ್ನಲಾಗಿದೆ.

ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ನೋಟಿಸ್​ ನೀಡುತ್ತಿದ್ದು, ನಾಲ್ಕು ವಾರದೊಳಗೆ ವಿವರಣೆ ನೀಡಬೇಕು ಅಂತಾ ಸೂಚಿಸಿದೆ ಎಂದು ವರದಿಯಾಗಿದೆ.