Home Health ರಾಜ್ಯದಲ್ಲಿ ಆತಂಕ ಸೃಷ್ಟಿಸಿರುವ ಮದ್ರಾಸ್‌ ಐ : ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಮಾರ್ಗಸೂಚಿ

ರಾಜ್ಯದಲ್ಲಿ ಆತಂಕ ಸೃಷ್ಟಿಸಿರುವ ಮದ್ರಾಸ್‌ ಐ : ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಮಾರ್ಗಸೂಚಿ

ರಾಜ್ಯದಲ್ಲಿ ಆತಂಕ ಸೃಷ್ಟಿಸಿರುವ ಮದ್ರಾಸ್‌ ಐʼ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಲಾಗಿದೆ. ಕಂಜಕ್ಟಿವ ಉತ್ಪತ್ತಿ (ಕಾಂಜಂಕ್ಟಿವಿಟಿಸ್) ಎಂದು ಕರೆಯಲಾಗುವ ಮದ್ರಾಸ್ ಐ ಅಥವಾಕಣ್ಣು’ ವೈರಾಣುಗಳಿಂದ ಹರಡುವ ಕಣ್ಣಿನ ಸಮಸ್ಯೆ. ವಾತಾವರಣದಲ್ಲಿ ತೇವಾಂಶ ಹೆಚ್ಚಾದಾಗ ಅಥವಾ ಚಳಿ ವಾತಾವರಣದಲ್ಲಿ ಹುಟ್ಟಿಕೊಳ್ಳುವ ವೈರಾಣುಗಳು ನೇರವಾಗಿ ಕಣ್ಣಿನ ಮೇಲೆ ಪರಿಣಾಮ ಬೀರುತ್ತದೆ. ಈ ಬಾರಿ ರಾಜ್ಯದಲ್ಲಿ ಮಳೆಗಾಲಕ್ಕೂ ಮುನ್ನವೇ ಮದ್ರಾಸ್‌ ಐ ಪ್ರಕರಣ ಕಾಲಿಟ್ಟಿತ್ತು. ಈ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.

ಈ ರೋಗದ ಲಕ್ಷಣಗಳು:
1.ಕಣ್ಣು ಕೆಂಪಾಗುವುದು, ನೀರು ಸೋರುವಿಕೆ
2.ಅತಿಯಾದ ಕಣ್ಣೀರು
3.ಕಣ್ಣಿನಲ್ಲಿ ತುರಿಕೆ
4.ಸತತ ಕಣ್ಣು ನೋವು ಮತ್ತು ಚುಚ್ಚುವಿಕೆ
5.ಬೆಳಕನ್ನು ನೋಡಲು ಸಾಧ್ಯವಾಗುವುದು
6.ದೃಷ್ಟಿ ಮಂಜಾಗುವುದು
7.ಕಣ್ಣಿನ ಎರಡು ರೆಪ್ಪೆಗಳು ಕೀವು ಮಿಶ್ರಿತದಿಂದ ಕೂಡಿರುವುದು

ಮುಜಾಗ್ರತೆ ವಹಿಸುವುದು ಹೇಗೆ ?
1.ವೈಯಕ್ತಿಕವಾಗಿ ಮಾನ್ಯತೆಗೆ ಆದ್ಯತೆ ಕೊಡಿ
2.ಆರೋಗ್ಯವಂತ ಸೋಂಕು ಇರುವ ವ್ಯಕ್ತಿಯ ಕಣ್ಣಿನ ನೇರ ಸಂಪರ್ಕದಿಂದ ದೂರವಿರುವುದು

  1. ಸೋಂಕಿತ ವ್ಯಕ್ತಿ ಬಳಸಿದ ಕರವಸ್ತ್ರ ಮತ್ತು ಇತರ ವಸ್ತುಗಳನ್ನು ಬಳಸಬಾರದು
    4.ಆಗಾಗ ಸೋಪು ನೀರಿನಿಂದ ಕೈಗಳನ್ನು ತೊಳೆಯಬೇಕು
    5.ಸೋಂಕಿತ ವ್ಯಕ್ತಿಗಳಿಗೆ ಶೀತ, ಜ್ವರ, ಕೆಮ್ಮು ಇದ್ದಲ್ಲಿ ತಕ್ಷಣ ಚಿಕಿತ್ಸೆ ಪಡೆಯಬೇಕು
  2. ತೀವ್ರ ಸೋಂಕು ಉಂಟಾದರೆ ತಕ್ಷಣವೇ ನೇತ್ರ ಅನಾರೋಗ್ಯಕ್ಕೆ ಭೇಟಿ ನೀಡಬೇಕು.

ಏನು ಮಾಡಬೇಕು ?
1.ಸ್ಪಚ್ಫವಾದ ನೀರಿನಿಂದ ಕಣ್ಣುಗಳನ್ನು ಶುಚಿಗೊಳಿಸಿ
2.ಸೋಂಕು ಕಂಡು ಬಂದ ತಕ್ಷಣ ವೈದ್ಯರಿಂದ ಚಿಕಿತ್ಸೆ ಪಡೆಯಿರಿ
3.ಸೋಂಕಿತ ವ್ಯಕ್ತಿಗಳಿಗೆ ಪೌಷ್ಟಿಕ ಆಹಾರ ಕೊಡಬೇಕು

  1. ಸೋಂಕಿತ ವ್ಯಕ್ತಿಗಳು ಬಳಸಿದ ಕರ, ಇತರ ವಸ್ತುಗಳನ್ನು ಸಂಸ್ಕರಿಸಿ ಬಳಸಿರಿ

ಏನು ಮಾಡಬಾರದು ?
1.ಕೈಗಳಿಂದ ಪದೇ ಪದೇ ಕಣ್ಣುಗಳನ್ನು ಮುಟ್ಟಬೇಡಿ
2.ಸ್ವಯಂ ಚಿಕಿತ್ಸಾ ವಿಧಾನಗಳನ್ನು ಮಾಡಬಾರದು
3.ಸೋಂಕಿತ ವ್ಯಕ್ತಿಯ ಸನಿಹದಿಂದ ದೂರವಿರಿ
4.ಸೋಂಕಿತ ವ್ಯಕ್ತಿಗಳು ಬಳಸಿದ ವಸ್ತುಗಳನ್ನು ಮುಟ್ಟಬೇಡಿ

Source : Samagra smachar