Home Special News ರಸ್ತೆಯಲ್ಲಿ ಹೋಗುತ್ತಿರುವವರನ್ನು ಅಡ್ಡಗಟ್ಟಿ ಬೆದರಿಸಿ ದರೋಡೆ ನಡೆಸುತ್ತಿದ್ದ ಇಬ್ಬರು ದರೋಡೆಕೋರರನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು.

ರಸ್ತೆಯಲ್ಲಿ ಹೋಗುತ್ತಿರುವವರನ್ನು ಅಡ್ಡಗಟ್ಟಿ ಬೆದರಿಸಿ ದರೋಡೆ ನಡೆಸುತ್ತಿದ್ದ ಇಬ್ಬರು ದರೋಡೆಕೋರರನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು.

ಸಿದ್ದಾಪುರ: ತಾಲೂಕಿನ ನಿಲ್ಕುಂದ ಸಮೀಪದ ಕಂಚಿಕೈ ಹತ್ತಿರ ರಸ್ತೆಯಲ್ಲಿ ಹೋಗುತ್ತಿರುವವರನ್ನು ಅಡ್ಡಗಟ್ಟಿ ಬೆದರಿಸಿ ದರೋಡೆ ನಡೆಸುತ್ತಿದ್ದ ಇಬ್ಬರು ದರೋಡೆಕೋರನ್ನು ಸಾರ್ವಜನಿಕರು ಥಳಿಸಿ ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ನಡೆದಿದೆ. ಶಿರಸಿ ತಾಲೂಕಿನ ಬನವಾಸಿ ರಸ್ತೆಯ ಶಹೀದ್ ಇಸ್ಮಾಯಿಲ್ ಮತ್ತು ಶಿವಮೊಗ್ಗ ಟಿಪ್ಪು ನಗರದ ಇರ್ಫಾನ್ ಪಾಷಾ ಪೊಲೀಸ್ ವಶದಲ್ಲಿರುವ ದರೋಡೆಕೋರರಾಗಿದ್ದಾರೆ.

ಇವರಿಬ್ಬರು ಶಿರಸಿಯಲ್ಲಿ ಬೈಕ್ ಕಳ್ಳತನ ಮಾಡಿ ಕುಮಟಾ – ಶಿರಸಿ ರಸ್ತೆಯ ದೇವಿಮನೆ ಘಾಟ್ ನಲ್ಲಿ ಕೋಳಿ ತುಂಬಿಕೊಂಡು ಬರುತ್ತಿದ್ದ ಬೊಲೆರೋ ವಾಹನ ತಡೆದು ಚಾಕು ತೋರಿಸಿ ಹಣ ವಸೂಲಿ ಮಾಡಿ , ನಂತರ ಕಂಚಿಕೈ ಹತ್ತಿರ ಉಂಚಳ್ಳಿ ಜಲಪಾತ ಭೀಮನ ಗುಡ್ಡ ವೀಕ್ಷಿಸಿ ವಾಪಾಸ್ ಮನೆಗೆ ತೆರಳುತ್ತಿದ್ದ ಸುಬ್ರಮಣ್ಯ ಎನ್ನುವವರು ಮೂತ್ರವಿಸರ್ಜನೆ ಗೆ ಬೈಕ್ ನಿಲ್ಲಿಸಿದ್ದ ವೇಳೆ ಹಣ ವಸೂಲಿಗೆ ಯತ್ನಿಸಿದ್ದಾರೆ ವಿಷಯ ತಿಳಿದ ಸಾರ್ವಜನಿಕರು ದರೋಡೆಕೋರರಿಗೆ ಸರಿಯಾಗಿ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.