ಭಟ್ಕಳ : ಭಟ್ಕಳ ಬಂದರಿನಲ್ಲಿ ನಿಲ್ಲಿಸಿಟ್ಟಿದ್ದ ಬೋಟ್ ಗೆ ಆಕಸ್ಮಿಕ ಬೆಂಕಿ ತಗಲಿ ಸುಟ್ಟುಹೋದ ಘಟನೆ ನಡೆದಿದೆ. ಈ ಬೋಟ್ ನರಸಿಂಹ ಗೋವಿಂದ ಖಾರ್ವಿ ಎಂಬುವವರಿಗೆ ಸೇರಿದ್ದು ಎನ್ನಲಾಗಿದೆ. ಕಳೆದ ಮೂರು ವರ್ಷದಿಂದ ರಿಪೇರಿ ಕೆಲಸಕ್ಕಾಗಿ ಬಂದರಿನಲ್ಲಿ ನಿಲ್ಲಿಸಲಾಗಿತ್ತು. ಆದರೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಉರಿದು ಹೋಗಿದೆ. ಯಾರೋ ಕಿಡಿಗೇಡಿಗಳು ಮಾಡಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ. ಅಗ್ನಿ ಅವಘಡದಲ್ಲಿ 2ಲಕ್ಷಕ್ಕೂ ಹೆಚ್ಚು ನಷ್ಟವಾಗಿದ್ದು ಈ ಘಟನೆ
ಸಂಬಂಧ ಭಟ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಲ್ಲಿಸಿಟ್ಟಿದ್ದ ಬೋಟ್ ಗೆ ಆಕಸ್ಮಿಕ ಬೆಂಕಿ ತಗಲಿ ಅವಘಡ : ಸುಟ್ಟು ಕರಕಲಾದ ಬೋಟ್.
