Home HONNAVAR ಆಕಳು ತಪ್ಪಿಸಲು ಹೋಗಿ ಬಿದ್ದು ಬೈಕ್ ಸವಾರ ಸಾವು.

ಆಕಳು ತಪ್ಪಿಸಲು ಹೋಗಿ ಬಿದ್ದು ಬೈಕ್ ಸವಾರ ಸಾವು.

ಹೊನ್ನಾವರ : ತಾಲೂಕಿನ ಕರ್ಕಿ ತೊಪ್ಪಲಕೇರಿ ಸಮೀಪ ಯುವಕನ ಬೈಕ್ ಚಲಾಯಿಸಿಕೊಂಡು ಬಂದು ರಸ್ತೆಯ ಮಧ್ಯೆ ಬಂದ ಆಕಳನ್ನು ತಪ್ಪಿಸಲು ಹೋಗಿ ರಸ್ತೆ ಮೇಲೆ ಬಿದ್ದ ಘಟನೆ ಸಂಭವಿಸಿದೆ.

ಈ ಅಪಘಾತದ ತೀವ್ರತೆಗೆ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಕೂಡಲೇ ತಾಲೂಕು ಆಸ್ಪತ್ರೆಗೆ ದಾಖಲಿಸಿದರು.ಹೆಚ್ಚಿನ ಚಿಕಿತ್ಸೆಗಾಗಿ ನೆರೆ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತಪಟ್ಟವರು ಕರ್ಕಿ ತೊಪ್ಪಲಕೇರಿಯ ರಾಘವೇಂದ್ರ ಗಣೇಶ ಮೇಸ್ತ ಎಂದು ತಿಳಿದುಬಂದಿದೆ. ಈ ಕುರಿತಾಗಿ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.