ಕಾರವಾರ: ಕೈಗಾ ಅಣು ವಿದ್ಯುತ್ ನಿಗಮದಲ್ಲಿ ಕೆಲಸ ಕೊಡಿಸುತ್ತೇವೆ ಎಂದು ಕೆಲವು ಅಪರಿಚಿತ ವ್ಯಕ್ತಿಗಳು ಅಮಾಯಕರಿಂದ ಹಣ ಪಡೆದು ವಂಚಿಸುತ್ತಿರುವುದು ಸಂಸ್ಥೆಯ ಗಮನಕ್ಕೆ ಬಂದಿರುತ್ತದೆ. ಕೈಗಾ ಅಣು ವಿದ್ಯುತ್ ನಿಗಮವು ಕೇಂದ್ರ ಸರ್ಕಾರದ ಸಂಸ್ಥೆಯಾಗಿದ್ದು, ಸಂಸ್ಥೆಯಲ್ಲಿ ಪ್ರಸ್ತುತ ಕೆಲವು ವಿಭಾಗದಲ್ಲಿ ಉದ್ಯೋಗ ನೇಮಕ ಕುರಿತ ಪ್ರಕ್ರಿಯೆಗಳು ನಡೆಯುತ್ತಿದ್ದು, ಎಲ್ಲಾ ಪ್ರಕ್ರಿಯೆಗಳು ಕೇಂದ್ರ ಮಾರ್ಗಸೂಚಿಯಂತೆ ಸರ್ಕಾರದ ಮತ್ತು ಸಂಸ್ಥೆಯ ಮಾರ್ಗಸೂಚಿಯಂತೆ ಅತ್ಯಂತ ಪಾರದರ್ಶಕವಾಗಿ ವಿಶೇಷ ಪ್ರಮಾಣಿತ ಕಾರ್ಯಾಚರಣೆ ವಿಧಾನಗಳಡಿಯಲ್ಲಿ ಮೆರಿಟ್ ಆಧಾರದಲ್ಲಿ ನಡೆಯುತ್ತಿದ್ದು, ಈ ಬಗ್ಗೆ ಸಂಸ್ಥೆಯ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ಯಾವುದೇ ಅಪರಿಚಿತ ವ್ಯಕ್ತಿಗಳಿಂದ ಕೈಗಾದಲ್ಲಿ ಉದ್ಯೋಗ ಪಡೆಯಲು ಹಣ ನೀಡಿ ವಂಚನೆಗೊಳಗಾಗದೆ ಎಚ್ಚರಿಕೆಯಿಂದ ಇರುವಂತೆ ತಿಳಿಸುತ್ತಾ, ಈ ರೀತಿಯ ವಂಚನೆಗೆ ಒಳಗಾಗಿ ಹಣ ಕಳೆದುಕೊಂಡ ಅದಕ್ಕೆ ಕೈಗಾ ಸಂಸ್ಥೆ ಜವಾಬ್ದಾರಿಯಲ್ಲ ಎಂದು ಕೈಗಾದ ಸೈಟ್ ಡೈರೆಕ್ಟರ್ ಪ್ರಮೋದ್ ಜಿ ರಾಯಚೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
NEWS UPDATE
ಮತ್ತೊಂದು ಡಿಜಿಟಲ್ ಕಾರ್ಯಾಚರಣೆ : ಗೂಗಲ್ ಪ್ಲೇ ಸ್ಟೋರ್ನಿಂದ 119 ಅಪ್ಲಿಕೇಶನ್ ಡಿಲೀಟ್
satwawriter - 0
ನವದೆಹಲಿ : ಗೂಗಲ್ ಪ್ಲೇ ಸ್ಟೋರ್ನಿಂದ 119 ಚೀನೀ ಅಪ್ಲಿಕೇಶನ್ಗಳನ್ನು ತೆಗೆದುಹಾಕಲು ಸೂಚನೆ ನೀಡುವ ಮೂಲಕ ಸರ್ಕಾರವು ಮತ್ತೊಂದು ಡಿಜಿಟಲ್ ಕಾರ್ಯಾಚರಣೆ ಪ್ರಾರಂಭಿಸಿದೆ.
ಈ ಅಪ್ಲಿಕೇಶನ್ಗಳು ಚೀನಾ ಮತ್ತು ಹಾಂಗ್ ಕಾಂಗ್ನ ಡೆವಲಪರ್ಗಳ ಜೊತೆ...
KUMTA NEWS
ಶಾಲೆಗೆ ೭ ಲಕ್ಷ ರೂ. ಗಳಿಗೂ ಹೆಚ್ಚು ಮೌಲ್ಯದ ಶೈಕ್ಷಣಿಕ ಉಪಕರಣ ಕೊಡುಗೆ.
satwawriter - 0
ಕುಮಟಾ : ತಾಲೂಕಿನ ಕರ್ಕಿಮಕ್ಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೊವೊ ನೊರ್ಡಿಸ್ಕ ಕಂಪನಿಯ ಸಿಎಸ್ಆರ್ ನಿಧಿಯಿಂದ ಕೊಡುಗೆಯಾಗಿ ನೀಡಿದ ೭ ಲಕ್ಷ ರೂ. ಗಳಿಗೂ ಹೆಚ್ಚು ಮೌಲ್ಯದ ವಿಜ್ಞಾನ ಮತ್ತು ಇತರ...
HONNAVAR NEWS
ಶಿಕ್ಷಕ ಪಿ.ಆರ್. ನಾಯ್ಕರಿಗೆ ಶಿಶು ಸಂಗಮೇಶ ದತ್ತಿ ಪ್ರಶಸ್ತಿ
ಹೊನ್ನಾವರ: ಶಿಶು ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ ಶಿಶು ಸಂಗಮೇಶ ದತ್ತಿ ಪ್ರಶಸ್ತಿಯು ಶಿಕ್ಷಕ ಪಿ.ಆರ್.ನಾಯ್ಕರವರ ಮಕ್ಕಳ ಕೃತಿ ಪಾಟಿಚೀಲ ಕವನ ಸಂಕಲನಕ್ಕೆ ಸಂದಿವೆ.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ ಸಾಲಿನ...
ಫೇ. 20 ರಿಂದ ಹೊನ್ನಾವರ ಉತ್ಸವ
ಹೊನ್ನಾವರ: ಫೆಬ್ರವರಿ ೨೦ ರಿಂದ ೨೩ರವರೆಗೆ ಪಟ್ಟಣದ ಸೇಂಟ್ ಅಂತೋನಿ ಮೈದಾನದಲ್ಲಿ ಸಿಂಚನ ಕಲೆ ಮತ್ತು ಗ್ರಾಮೀಣ ಅಭಿವೃದ್ದಿ ಟ್ರಸ್ಟ್ ಹಾಗೂ ಹೊನ್ನಾವರ ಉತ್ಸವ ಸಮಿತಿಯ ಆಶ್ರಯದಲ್ಲಿ ಹೊನ್ನಾವರ ಉತ್ಸವ - ೨೦೨೫...
ಹಿರಿಯ ಪತ್ರಕರ್ತ ಕೆಕ್ಕಾರ ನಾಗರಾಜ ಭಟ್ಟರಿಗೆ ಹವ್ಯಕ ಸಾಧಕ ರತ್ನ ಪ್ರಶಸ್ತಿ
ಸಿದ್ದಾಪುರ: ತಾಲೂಕಿನ ಹಿರಿಯ ಪತ್ರಕರ್ತ ಕೆಕ್ಕಾರ ನಾಗರಾಜ ಭಟ್ಟರಿಗೆ ಬೆಂಗಳೂರಿನಲ್ಲಿ ಡಿ.27 ರಿಂದ ಜರುಗುತ್ತಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಹವ್ಯಕ ಸಾಧಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಸಿದ್ದಾಪುರ ತಾಲೂಕು ಕನ್ನಡ...
ಹವ್ಯಕ ಎನ್ನುವುದೇ ಒಂದು ಆತ್ಮೀಯತೆ : ಶಿವಾನಂದ ಹೆಗಡೆ ಕಡತೋಕಾ.
ಹೊನ್ನಾವರ : ಹವ್ಯಕ ಎಂಬುದೇ ಒಂದು ಆತ್ಮೀಯತೆ. ಹವ್ಯಕ ಎಂಬುದು ಸ್ವಾಭಿಮಾನ. ಹವ್ಯಕ ಎಂಬುದು ಒಂದು ಒಂದು ಶಕ್ತಿ. ನಾವು ಹವ್ಯಕರು ಎಂಬುದೇ ನಮ್ಮ ಹೆಮ್ಮೆ ಎಂದು ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ...
ಯಕ್ಷಗಾನವು ಸಂಸ್ಕಾರ ನೀಡುವ ಕಲೆ : ಕಾಗೇರಿ
ಹೊನ್ನಾವರ : ನಮ್ಮ ಶ್ರೀಮಂತಿಕೆಯನ್ನು ಹಣದಿಂದ ಅಳೆಯಬಾರದು. ಸಾಂಸ್ಕೃತಿಕ ವಾತಾವರಣ ನಿರ್ಮಾಣ ಮಾಡುವುದರಿಂದ ವ್ಯಕ್ತಿತ್ವ ಶ್ರೀಮಂತಗೊಳ್ಳುವುದು. ಯಕ್ಷಗಾನದಂತಹ ಕಲೆಯು ಮನರಂಜನೆಯ ಜೊತೆಗೆ ನಮ್ಮ ಸಂಸ್ಕೃತಿಯನ್ನು ಪರಿಚಯಿಸಿ ನಮಗೆ ಸಂಸ್ಕಾರವನ್ನು ನೀಡುತ್ತದೆ' ಎಂದು ಸಂಸದ...