Home ANKOLA ವಿಭೂತಿ ಜಲಪಾತದ ನೀರಿನಲ್ಲಿ ಮುಳುಗುತ್ತಿದ್ದ ಪ್ರವಾಸಿಗನ ರಕ್ಷಣೆ

ವಿಭೂತಿ ಜಲಪಾತದ ನೀರಿನಲ್ಲಿ ಮುಳುಗುತ್ತಿದ್ದ ಪ್ರವಾಸಿಗನ ರಕ್ಷಣೆ

ಅಂಕೋಲಾ: ಅಂಕೋಲಾ ತಾಲೂಕಿನ ವಿಭೂತಿ ಜಲಪಾತದ ನೀರಿನಲ್ಲಿ ಮುಳುಗುತ್ತಿದ್ದ ಪ್ರವಾಸಿಗನ ರಕ್ಷಣೆ ಮಾಡಿದ ಘಟನೆ ನಡೆದಿದೆ. ತಮಿಳುನಾಡು ಮೂಲದ ಮೊಹಮ್ಮದ್ ತಾಜುದ್ದೀನ್ (19) ರಕ್ಷಣೆಗೊಳಗಾದ ಪ್ರವಾಸಿಗನಾಗಿದ್ದು, ಈತ ನೀರಿನಲ್ಲಿ ಈಜುತ್ತಿದ್ದ ವೇಳೆ ಮುಳುಗುವ ಹಂತದಲ್ಲಿದ್ದ ಸಮಯದಲ್ಲಿ ಲೈಫ್‌ಗಾರ್ಡ್‌ ಸಿಬ್ಬಂದಿ ವಿಜಯ ನಾಯ್ಕ ರಕ್ಷಣೆ ಮಾಡಿದ್ದಾರೆ.

Udaya Bazar Sports

65 ವಿದ್ಯಾರ್ಥಿಗಳ ತಂಡ ವಿಭೂತಿ ಜಲಪಾತಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ದಾಂಡೇಲಿ ಪ್ರವಾಸ ಮುಗಿಸಿ ವಿಭೂತಿ ಫಾಲ್ಸ್‌ಗೆ ಬಂದಿದ್ದ ತಂಡಕ್ಕೆ ನೀರಿನಲ್ಲಿ ಇಳಿಯದಂತೆ ಮೊದಲೇ ಎಚ್ಚರಿಕೆ ನೀಡಿದ್ದರೂ ನೀರಿನಲ್ಲಿ ಇಳಿದ ಪರಿಣಾಮ ಈ ಘಟನೆ ನಡೆದಿದೆ.

Disha Enterprise