Home Uttara Kannada ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಎನ್.ಎಸ್ ಹೆಗಡೆ ಕರ್ಕಿ.

ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಎನ್.ಎಸ್ ಹೆಗಡೆ ಕರ್ಕಿ.

ಕುಮಟಾ : ರಾಜ್ಯಾದ್ಯಂತ ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಉತ್ತರಕನ್ನಡ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಎನ್.ಎಸ್ ಹೆಗಡೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.ಎನ್.ಎಸ್ ಹೆಗಡೆ ಅವರು ಅನೇಕ ವರ್ಷಗಳಿಂದ ಬಿಜೆಪಿಯ ವಿವಿಧ ಸಂಘಟನಾ ಕಾರ್ಯವನ್ನು ನಿರ್ವಹಿಸಿದ್ದು, ಇದೀಗ ಅವರಿಗೆ ಜಿಲ್ಲಾಧ್ಯಕ್ಷ ಸ್ಥಾನ ಲಭಿಸಿದೆ.

ಈ ಮೊದಲು ಕುಮಟಾದ ವೆಂಕಟೇಶ ನಾಯ್ಕ ಅವರು ಬಿಜೆಪಿ ಸಂಘಟನೆಯಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದರು. ಅವರ ಅಧಿಕಾರ ಅವಧಿ ಮುಕ್ತಾಯವಾಗಿದ್ದು, ಇದೀಗ ನೂತನ ಜಿಲ್ಲಾಧ್ಯಕ್ಷರಾಗಿ ಎನ್ ಎಸ್ ಹೆಗಡೆ ಅವರನ್ನ ನೇಮಕ ಮಾಡಲಾಗಿದೆ.