Home State News ರಾಜ್ಯ ಕ್ರೀಡಾಪಟುಗಳಿಗೆ ಬಂಪರ್ ಗಿಫ್ಟ್

ರಾಜ್ಯ ಕ್ರೀಡಾಪಟುಗಳಿಗೆ ಬಂಪರ್ ಗಿಫ್ಟ್

BANGALORE, OCTOBER 02, 2013 : Karnataka Chief Minister Siddaramaiah is seen in a Walk the Talk shoot with the chief editor of Indian Express, Shekhar Gupta at the Vidhana Soudha, Bangalore, for NDTV. (PHOTO BY JYOTHY KARAT)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ರಾಜ್ಯ ವಾರ್ಷಿಕ ಬಜೆಟ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ. ಅದರಂತೆ ಬೆಂಗಳೂರಿನಲ್ಲಿ ಕ್ರೀಡಾ ನಗರ, ಬೆಂಗಳೂರಿನ ನಾಲ್ಕು ಸ್ಥಳಗಳಲ್ಲಿ ಕ್ರೀಡಾ ಸಂಕೀರ್ಣಗಳು, ಪ್ಯಾರಿಸ್ ಒಲಿಂಪಿಕ್ಸ್, ಏಷ್ಯನ್ ಮತ್ತು ಕಾಮನ್‌ವೆಲ್ತ್ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಬಹುಮಾನ ಸೇರಿದಂತೆ ವಿವಿಧ ಅನುದಾನಗಳನ್ನು ಕ್ರೀಡಾ ಕ್ಷೇತ್ರಕ್ಕೆ ಮೀಸಲಿಟ್ಟಿದ್ದಾರೆ. ಹಾಗಾದರೆ ಸಿದ್ದರಾಮಯ್ಯನವರ ಬಜೆಟ್‌ನಲ್ಲಿ ರಾಜ್ಯ ಕ್ರೀಡಾಳುಗಳಿಗೆ ಸಿಕ್ಕಿದ್ದೇನು ಎಂಬುದನ್ನು ನೋಡುವುದಾದರೆ..

  • ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಬೆಂಗಳೂರು ಉತ್ತರ ತಾಲೂಕಿನಲ್ಲಿ 70 ಎಕರೆ ಜಾಗದಲ್ಲಿ ಆಧುನಿಕ ಹಾಗೂ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾ ನಗರಿ ನಿರ್ಮಿಸಲಾಗುವುದು.
  • ಬೆಂಗಳೂರಿನ ನಾಲ್ಕು ಸ್ಥಳಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಬಹು-ಕ್ರೀಡಾ ಸೌಲಭ್ಯಗಳು ಸೇರಿದಂತೆ ಅಂತರರಾಷ್ಟ್ರೀಯ ಗುಣಮಟ್ಟದ ಅತ್ಯಾಧುನಿಕ ಕ್ರೀಡಾ ಸಂಕೀರ್ಣಗಳನ್ನು ನಿರ್ಮಿಸಲಾಗುವುದು.
  • ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ ಸಿದ್ದರಾಮಯ್ಯ ಬಂಪರ್ ಬಹುಮಾನ ಘೋಷಣೆ ಮಾಡಿದ್ದಾರೆ. ಅದರಂತೆ ಒಲಿಂಪಿಕ್ಸ್​ನಲ್ಲಿ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕ ವಿಜೇತರಿಗೆ ಕ್ರಮವಾಗಿ 6 ಕೋಟಿ ರೂ., 4 ಕೋಟಿ ರೂ., ಹಾಗೂ 3 ಕೋಟಿ ರೂ.ಗಳನ್ನು ಬಹುಮಾನವಾಗಿ ನೀಡಲಾಗುವುದು.
  • ಇದಲ್ಲದೆ ಏಷ್ಯನ್ ಮತ್ತು ಕಾಮನ್‌ವೆಲ್ತ್ ಕ್ರೀಡಾಕೂಟಗಳಲ್ಲಿ ಚಿನ್ನ, ಬೆಳ್ಳಿ ಅಥವಾ ಕಂಚಿನ ಪದಕಗಳನ್ನು ಗೆಲ್ಲುವ ಕ್ರೀಡಾಪಟುಗಳಿಗೆ ಕ್ರಮವಾಗಿ 35 ಲಕ್ಷ, 25 ಲಕ್ಷ, 15 ಲಕ್ಷ ರೂ.ಗಳನ್ನು ಬಹುಮಾನವಾಗಿ ನೀಡಲಾಗುವುದು.
  • ಅತ್ಯುತ್ತಮ ಸ್ಪರ್ಧಾತ್ಮಕ ಅವಕಾಶಗಳನ್ನು ಒದಗಿಸಲು ಪ್ರತಿ ವರ್ಷ ಕ್ರೀಡಾಪಟುಗಳಿಗೆ ರಾಜ್ಯ ಮಟ್ಟದ ಒಲಿಂಪಿಕ್ಸ್ ಮತ್ತು 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಕ್ರೀಡಾಪಟುಗಳಿಗೆ ಮಿನಿ ಒಲಿಂಪಿಕ್ಸ್ ಆಯೋಜಿಸಲಾಗುವುದು.
  • ಮುಂದಿನ ಎರಡು ವರ್ಷಗಳಲ್ಲಿ 35 ಕೋಟಿ ವೆಚ್ಚದಲ್ಲಿ ರಾಜ್ಯದ 14 ಸ್ಥಳಗಳಲ್ಲಿ ಮಹಿಳಾ ಕ್ರೀಡಾ ಹಾಸ್ಟೆಲ್‌ಗಳನ್ನು ನಿರ್ಮಿಸಲಾಗುವುದು.
  • ರಾಷ್ಟ್ರೀಯ ಅಥವಾ ಅಂತರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಗಾಯಗೊಂಡ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದಿಂದ ಆರೋಗ್ಯ ವಿಮೆ ಸೌಲಭ್ಯವನ್ನು ಒದಗಿಸುವುದು.