Satwadhara News

ಮುರ್ಡೇಶ್ವರದ ಕಡಲ ತೀರದಲ್ಲಿ ಕುಸಿದು ಬಿದ್ದು ಮೃತಳಾದ ವಿದೇಶಿ ಪ್ರಜೆ.

ಭಟ್ಕಳ: ಭಾರತ ಪ್ರವಾಸಕ್ಕೆಂದು ಬಂದಿದ್ದ ರಷ್ಯಾದ ಪ್ರಜೆಯೋರ್ವರು ಮುರ್ಡೇಶ್ವರದ ಕಡಲ ತೀರದಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡು ಬಳಿಕ ಆಸ್ಪತ್ರೆ ಸೇರಿದರೂ ಚೇತರಿಸಿಕೊಳ್ಳದೆ ಮೃತಪಟ್ಟಿದ್ದಾರೆ. ರಷ್ಯಾ ದೇಶದ ಅಲೆಗ್ಸಾಂಡರ್ ತನೆಗಾ( ೭೧) ಮೃತ ಪಟ್ಟ ವ್ಯಕ್ತಿ. ಇವರು ರಷ್ಯಾ ದೇಶದಿಂದ ತಂಡವನ್ನು ಕಟ್ಟಿಕೊಂಡು ಗೋವಾ ರಾಜ್ಯಕ್ಕೆ ಬಂದಿಳಿದಿದ್ದರು. ಗೋವಾದ ಪ್ರದೇಶಗಳನ್ನು ಸುತ್ತಾಡಿ ಗುರುವಾರ ಮುರ್ಡೇಶ್ವರಕ್ಕೆ ಬಂದಿದ್ದರು.

ಮುರುಡೇಶ್ವರ ದೇವಸ್ಥಾನದ ಬಳಿಯಲ್ಲಿ ತೆರಳುವಾಗ ಇವರು ಹಠಾತನೆ ಕುಸಿದು ಬಿದ್ದಿದ್ದರು. ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡದ ಬಳಿಕ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ವೈದ್ಯರು ನೀಡಿದ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಕುರಿತು ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.