Home ANKOLA ತೋಟದ ಮನೆಯಲ್ಲಿ ನೇಣಿಗೆ ಶರಣಾದ ಕ್ಲಾಸ್ ೧ ಗುತ್ತಿಗೆದಾರ.

ತೋಟದ ಮನೆಯಲ್ಲಿ ನೇಣಿಗೆ ಶರಣಾದ ಕ್ಲಾಸ್ ೧ ಗುತ್ತಿಗೆದಾರ.

ಅಂಕೋಲಾ : ಪ್ರಥಮ ದರ್ಜೆಯ ಗುತ್ತಿಗೆದಾರನೋರ್ವ ಮನೆಯ ಹಿಂಬದಿಯಲ್ಲಿರುವ ತೋಟದ ಮನೆಯಲ್ಲಿ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಗಸೂರು ಗ್ರಾಮದಲ್ಲಿ ನಡೆದಿದೆ.

ಬಾಲಚಂದ್ರ ನಾಯಕ (55)ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರರಾಗಿದ್ದಾರೆ. ಮೂಲತಃ ಶೆಟಗೇರಿಯವರಾದ ಇವರು ಸದ್ಯ ಆಗಸೂರನಲ್ಲಿ ವಾಸವಾಗಿದ್ದರು. ಕ್ರೀಯಾಶೀಲ ವ್ಯಕ್ತಿತ್ವದ ಬಾಲಚಂದ್ರ ನಾಯಕ ಅವರು ಎಲ್ಲರೊಂದಿಗೂ ಚೆನ್ನಾಗಿದ್ದು ಆತ್ಮೀಯ ವ್ಯಕ್ತಿತ್ವಕ್ಕೆ ಹೆಸರಾಗಿದ್ದ. ಪ್ರಥಮ ದರ್ಜೆಯ ಗುತ್ತಿಗೆದಾರನಾಗಿ ತನ್ನ ವೃತ್ತಿಯನ್ನು ಕಂಡು ಕೊಂಡ ಬಾಲಚಂದ್ರ ನಾಯಕ ಕ್ಯಾಂಟೀನ ಬಾಬು ಎಂದೆ ಪ್ರಖ್ಯಾತಿಯಾಗಿದ್ದರು.

ಅಗಸೂರು ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ, ಅಗಸೂರಿನ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷನಾಗಿ ಪ್ರಸ್ತುತವಾಗಿ ಸೇವೆ ಸಲ್ಲಿಸುತ್ತ ಜನಪ್ರೀಯನಾಗಿದ್ದ. ಅಗಸೂರು ಅಧ್ಯಕ್ಷನಾಗಿಯೂ ಗ್ರಾ.ಪಂ ಸಮರ್ಥವಾಗಿ ಕಾರ್ಯನಿರ್ವಹಿಸಿ ಮಾದರಿ ಆಡಳಿತ ನೀಡಿದ ಕೀರ್ತಿಯು ಬಾಲಚಂದ್ರ ನಾಯಕ ಅವರದ್ದಾಗಿದೆ.