ಅಂಜುಮನ್ ತಾಂತ್ರಿಕ ಮಹಾವಿದ್ಯಾಲಯ ಭಟ್ಕಳದ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ. ಚಿದಾನಂದ ಗಣಪತಿ ನಾಯ್ಕ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯವು Geotechnical Engineering ವಿಭಾಗದಲ್ಲಿ “Evaluation of shear strength and dilatancy parameters of different granular materials” ಎಂಬ ವಿಷಯದ ಮೇಲೆ ಸಂಶೋಧನೆ ನಡೆಸಿ ಸಿದ್ಧಪಡಿಸಿ ಸಲ್ಲಿಸಲಾದ ಮಹಾಪ್ರಬಂಧಕ್ಕೆ ಪಿ.ಎಚ್.ಡಿ. ಪದವಿ ಪ್ರಧಾನ ಮಾಡಿದೆ. ಪ್ರೊ. ಚಿದಾನಂದ ನಾಯ್ಕ ರವರು ಡಾ. ಕೆ.ವಿ.ಬಿ.ಎಸ್ ರಾಜು ಇವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದರು. ಚಿದಾನಂದರವರು ಕುಮಟಾ ತಾಲೂಕಿನ ಕಲಭಾಗ ಗ್ರಾಮದ ಗಣಪತಿ ಹೊನ್ನಪ್ಪ ನಾಯ್ಕ್ ಹಾಗೂ ಕುಮುದಾ ಗಣಪತಿ ನಾಯ್ಕ್ ರ ದ್ವಿತೀಯ ಪುತ್ರರಾಗಿದ್ದಾರೆ. ಅವರ ಈ ಸಾಧನೆಯನ್ನು ಅಂಜುಮನ್ ಮ್ಯಾನೇಜ್ಮೆಂಟ್, ಪ್ರಾಂಶುಪಾಲರಾದ ಡಾ. ಫಜಲುರ್ ರೆಹಮಾನ್, ರಿಜಿಸ್ಟ್ರಾರರಾದ ಪ್ರೊ. ಜಾಹೀದ್ ಖರೂರಿ ಹಾಗೂ ಅಂಜುಮನ್ ಎಂಜಿನಿಯರಿಂಗ್ ಹಾಗೂ ಮ್ಯಾನೇಜ್ಮೆಂಟ್ ಸಿಬ್ಬಂದಿ ವರ್ಗದವರು ಶ್ಲಾಘಿಸಿದ್ದಾರೆ.
NEWS UPDATE
ಖ್ಯಾತ ವೈದ್ಯ ಡಾ. ಡಿ.ಪಿ ರಮೇಶ ಅವರಿಂದ ‘ವಿಶೇಷ ಪಂಚಗವ್ಯ ಚಿಕಿತ್ಸಾ ಶಿಬಿರ’.
satwawriter - 0
ಹೊಸಾಡದ ಅಮೃತಧಾರಾ ಗೋ ಶಾಲೆಯಲ್ಲಿ ಆಯೋಜನೆ : ಸಾರ್ವಜನಿಕರು ಇದರ ಸದುಪಯೋಗ ಪಡೆಯಲು ಕರೆ.
ಕುಮಟಾ : ವೈಜ್ಞಾನಿಕ ಯುಗದಲ್ಲಿಯೂ ಜನರನ್ನು ಕಿತ್ತು ತಿನ್ನುವ ಮಾರಕ ಖಾಯಿಲೆಗಳಿಂದ ಮುಕ್ತಿ ಪಡೆಯಲು ಹರ ಸಾಹಸವನ್ನೇ ಮಾಡಬೇಕು....
KUMTA NEWS
ನಾಳೆಯಿಂದ ಹೊಸಾಡದಲ್ಲಿ ಆಲೆಮನೆ ಹಬ್ಬ ಪ್ರಾರಂಭ : ಮಾ. ೧ ರಂದು ಗೋ ಸಂಧ್ಯಾ.
satwawriter - 0
ಕುಮಟಾ : ತಾಲೂಕಿನ ಮೂರೂರಿನ ಹೊಸಾಡಿನಲ್ಲಿರುವ ಅಮೃತಧಾರಾ ಗೋ ಶಾಲೆಯ ಆವಾರದಲ್ಲಿ ಫೇ. ೨೭ ರಿಂದ ಮಾ.೨ ರವರೆಗೆ "ಆಲೆಮನೆ ಹಬ್ಬ" ಹಮ್ಮಿಕೊಳ್ಳಲಾಗಿದೆ ಎಂದು ಗೋಶಾಲೆ ಸಮಿತಿ ಹಾಗೂ ಗೋ ಸಂಧ್ಯಾ ಸಮಿತಿಯವರು...
HONNAVAR NEWS
ಕಿರಣ ಭಟ್ ಅವರ ಹೌಸ್ ಫುಲ್ ಕೃತಿ ಬಿಡುಗಡೆ
ಹೊನ್ನಾವರ: ಸದ್ದಿಲ್ಲದೆ ಸಂವಿಧಾನವನ್ನು ಬದಲಿಸಲು ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ವಿಚಾರವಂತಿಕೆಯನ್ನು ರಕ್ಷಿಸಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಹಿರಿಯ ಪತ್ರಕರ್ತರಾದ ಜಿ ಯು ಭಟ್ ಅವರು ಅಭಿಪ್ರಾಯಪಟ್ಟರು.
ಚಿಂತನ ಉತ್ತರಕನ್ನಡ, ಚಿಂತನ ರಂಗ ಅಧ್ಯಯನ ಕೇಂದ್ರ ಹಾಗೂ...
ತಪ್ಪು ಸಂದೇಶ ರವಾನಿಸಿದರೆ ಬೀಳಲಿದೆ ಕೇಸ್ : ಸಾಮಾಜಿಕ ಸ್ವಾಸ್ಥ್ಯ ಕೆಡಿಸದಿರಿ – ಎಸ್.ಪಿ ಎಚ್ಚರಿಕೆ.
ಹೊನ್ನಾವರ : ಜಿಲ್ಲೆಯ ಅಂಕೋಲಾದ ಕೇಣಿ ಬಂದರು ಹಾಗೂ ಹೊನ್ನಾವರ ಟೊಂಕಾ ಕಾಮಗಾರಿಯ ಬಗ್ಗೆ ಸ್ಥಳೀಯ ಮೀನುಗಾರರು ಪ್ರತಿಭಟನೆ ನಡೆಸುತ್ತಿದ್ದು, ನಿಷೇಧಾಜ್ಞೆಯನ್ನೂ ಜಾರಿಮಾಡಲಾಗಿದೆ. ಆದರೆ ಮೀನುಗಾರರಿಗೆ ಕೆಲವರು ತಪ್ಪು ಸಂದೇಶ ರವಾನಿಸುತ್ತಿದ್ದಾರೆ. ಜನರ...
ಕಡಲಿಗೆ ಇಳಿದು ಪ್ರತಿಭಟನೆ ನಡೆಸಿದ ಮೀನುಗಾರರು
ಹೊನ್ನಾವರ : ನಿನ್ನೆ ಅಂಕೋಲಾ ತಾಲೂಕಿನ ಕೇಣಿ ಗ್ರಾಮದಲ್ಲಿ ಬಂದರು ನಿರ್ಮಾಣ ವಿರೋಧಿಸಿ ಮೀನುಗಾರರ ತೀವ್ರ ಹೋರಾಟ ನಡೆಸಿದ್ದು, ಇಂದು ಹೊನ್ನಾವರ ತಾಲೂಕಿನ ಕಾಸರಕೋಡಿನಲ್ಲಿ ಬಂದರು ನಿರ್ಮಾಣದ ಸರ್ವೆ ಕಾರ್ಯ ವಿರೋಧಿಸಿ ಮೀನುಗಾರರು...
ಶಿಕ್ಷಕ ಪಿ.ಆರ್. ನಾಯ್ಕರಿಗೆ ಶಿಶು ಸಂಗಮೇಶ ದತ್ತಿ ಪ್ರಶಸ್ತಿ
ಹೊನ್ನಾವರ: ಶಿಶು ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ ಶಿಶು ಸಂಗಮೇಶ ದತ್ತಿ ಪ್ರಶಸ್ತಿಯು ಶಿಕ್ಷಕ ಪಿ.ಆರ್.ನಾಯ್ಕರವರ ಮಕ್ಕಳ ಕೃತಿ ಪಾಟಿಚೀಲ ಕವನ ಸಂಕಲನಕ್ಕೆ ಸಂದಿವೆ.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ ಸಾಲಿನ...
ಫೇ. 20 ರಿಂದ ಹೊನ್ನಾವರ ಉತ್ಸವ
ಹೊನ್ನಾವರ: ಫೆಬ್ರವರಿ ೨೦ ರಿಂದ ೨೩ರವರೆಗೆ ಪಟ್ಟಣದ ಸೇಂಟ್ ಅಂತೋನಿ ಮೈದಾನದಲ್ಲಿ ಸಿಂಚನ ಕಲೆ ಮತ್ತು ಗ್ರಾಮೀಣ ಅಭಿವೃದ್ದಿ ಟ್ರಸ್ಟ್ ಹಾಗೂ ಹೊನ್ನಾವರ ಉತ್ಸವ ಸಮಿತಿಯ ಆಶ್ರಯದಲ್ಲಿ ಹೊನ್ನಾವರ ಉತ್ಸವ - ೨೦೨೫...