Home BHATKAL ಫೈರ್ ಬ್ರಾಂಡ್ ಆಗಿ ಗುರುತಿಸಿಕೊಂಡ ಅನಂತಕುಮಾರ ಹೆಗಡೆಗೆ ಟಿಕೆಟ್ ಕೈ ತಪ್ಪಲು ಕಾರಣವೇನು? ಅವರ ಮುಂದಿನ...

ಫೈರ್ ಬ್ರಾಂಡ್ ಆಗಿ ಗುರುತಿಸಿಕೊಂಡ ಅನಂತಕುಮಾರ ಹೆಗಡೆಗೆ ಟಿಕೆಟ್ ಕೈ ತಪ್ಪಲು ಕಾರಣವೇನು? ಅವರ ಮುಂದಿನ ನಡೆ ಏನಿರಬಹುದು?

ಬೆಂಗಳೂರು : ಕಳೆದ ಮೂವತ್ತು ವರ್ಷಗಳಿಂದ ಸಂಸದರಾಗಿದ್ದ ಅನಂತಕುಮಾರ‌ ಹೆಗಡೆ ಅವರನ್ನ ಕೈ ಬಿಟ್ಟು ಮಾಜಿ ಸ್ವೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಉತ್ತಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಲಾಗಿದೆ. ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಉ.ಕ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆ ಕೊನೆಗೂ ಮುಗಿದಿದ್ದು, ಕಾಗೇರಿ ಟಿಕೆಟ್ ಪಡೆದುಕೊಂಡಿದ್ದಾರೆ.

ಕಳೆದ ಮೂರು ದಶಕಗಳ ಕಾಲ ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಅನಂತಕುಮಾರ ಹೆಗಡೆ ಸಂಸದರಾಗಿದ್ದವರು. ಅವರು ಏಳು ಬಾರಿ ಈ ಕ್ಷೇತ್ರವನ್ನ ಪ್ರತಿನಿಧಿಸಿ ಒಮ್ಮೆ ಮಾತ್ರ ಸೊತ್ತಿದ್ದರು. ಆದರೆ ಸದಾ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಸುದ್ದಿಯಾಗುತ್ತಿದ್ದ ಅನಂತಕುಮಾರ ಹೆಗಡೆಗೆ ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದೆ.

ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶಿರಸಿ ಕ್ಷೇತ್ರದಿಂದ ಮೂರು ಹಾಗೂ ಅಂಕೋಲಾ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿದ್ದರು, ಇನ್ನೂ ಕಳೆದ ವರ್ಷದ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಭೀಮಣ್ಣ ನಾಯ್ಕ ವಿರುದ್ಧ ಕಾಗೇರಿ ಅವರು ಸೋಲುವಂತಾಗಿತ್ತು.

ಅನಂತ ಕುಮಾರ್ ಹೆಗಡೆ ಅವರ ಸಂವಿಧಾನ ಬದಲಾವಣೆ ಹೇಳಿಕೆಗಳು ಪಕ್ಷಕ್ಕೆ ದೊಡ್ಡ ಹೊಡೆತಕೊಟ್ಟಿದೆ ಎಂದು ಹೇಳಲಾಗುತ್ತಿದೆ. ಇನ್ನು ಆಯ್ಕೆ ಆದ ನಂತರದಲ್ಲಿ ಇವರು ಜನರ ಕೈಗೆ ಸಿಗದೆ ದೂರವೆ ಉಳಿದುಕೊಳ್ಳುತ್ತಿದ್ದು, ಚುನಾವಣೆ ಹತ್ತಿರ ಇರುವಾಗ ಕ್ಷೇತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದರು‌ ಎಂಬ ಆರೋಪವೂ ಇದೆ. ಇನ್ನೂ ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಎರಡರಿಂದ ಮೂರು ಶಾಸಕ ಸೋಲಿಗೆ ನೇರವಾಗಿ ಇವರೆ ಕಾರಣ ಎನ್ನುವುದು ಬಿಜೆಪಿ ನಾಯಕರ ಆರೋಪವೂ ಆಗಿತ್ತು.

ಅಷ್ಟೆ ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರೆ ಈ ಜಿಲ್ಲೆಗೆ ಬಂದರೂ ಅವರಿಗೂ ತಮ್ಮಗೂ ಯಾವುದೇ ಸಂಬಂಧವಿಲ್ಲ. ಮೋದಿ ಯಾರೋ ಎನ್ನುವ ರೀತಿಯಲ್ಲಿ ಕಾರ್ಯಕ್ರಮದ ಕಡೆ ಸುಳಿಯದೆ ದೂರವೆ ಉಳಿದುಕೊಂಡು ಒಂದು ರೀತಿಯಲ್ಲಿ ಪ್ರಧಾನ ಮೋದಿ ಅವರಿಗೆ ಸವಾಲು ಹಾಕಿರುವಂತಿತ್ತು. ಇವೇಲ್ಲವೂ ಕೂಡ ಈ ಭಾರಿ ಸಿಗಬಹುದಾಗಿದ್ದ ಟಿಕೆಟ್ ಕೈ ತಪ್ಪುವಂತಾಗಿದೆ.

ಅನಂತ ಕುಮಾರ್ ತಮ್ಮದೇ ಅಪಾರ ಅಭಿಮಾನಿಗಳನ್ನು ಹೊಂದಿದ್ದು, ಅವರ ಅಪಾರ ಬೆಂಬಲಿಗರಿಗೆ ಇಂದಿನ ದಿನ ಬಹು ಆಘಾತ ಉಂಟಾಗಿದೆ. ಆದರೆ ಅನಂತಕುಮಾರ್ ಮುಂದಿನ ನಡೆ ಏನು ಎಂಬುದು ಮಾತ್ರ ಕಾದು ನೋಡಬೇಕಾದ ಸಂಗತಿ.