Home BHATKAL ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣ : ಭಟ್ಕಳದಲ್ಲಿ ಎನ್‌ಐಎ ತಂಡದಿಂದ ಶೋಧ ಕಾರ್ಯ

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣ : ಭಟ್ಕಳದಲ್ಲಿ ಎನ್‌ಐಎ ತಂಡದಿಂದ ಶೋಧ ಕಾರ್ಯ

ಕಾರವಾರ : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣ ದಲ್ಲಿ ಶಂಕೆಯ ಆಧಾರದ ಮೇಲೆ ಭಟ್ಕಳದಲ್ಲಿ ಎನ್‌ಐಎ ತಂಡದಿಂದ ಶೋಧ ಕಾರ್ಯ ಕೈಗೊಳ್ಳಲಾಯಿತು. ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧ ಶಂಕಿತ ವ್ಯಕ್ತಿ, ಕೆಫೆ ಬ್ಲಾಸ್ಟ್‌ನ ಬಾಂಬರ್ ವಯಸ್ಸು ಭಟ್ಕಳದ ವ್ಯಕ್ತಿಗೆ ಹೋಲಿಕೆಯಾಗುವ ಹಿನ್ನಲೆ ಬೆಂಗಳೂರಿನ ಎನ್‌ಐಎ ತಂಡ ಹಾಗೂ ಸ್ಥಳೀಯ ಪೊಲೀಸರ ಸಹಕಾರದಿಂದ ಶಂಕಿತನ‌ ಮನೆಯಲ್ಲಿ ವಿಚಾರಣೆ ನಡೆಸಿದ್ದು ಗುರುವಾರ ಎನ್‌ಐಎ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸುವಂತೆ ಸೂಚನೆ ನೀಡಲಾಗಿದೆ.

ಮೂರು ಜನ ಅಧಿಕಾರಿಗಳು ಇರುವ ತಂಡವು ತಲೆಮರೆಸಿಕೊಂಡಿರುವ ಶಂಕಿತ ಉಗ್ರ, ಇಕ್ಬಾಲ್ ಭಟ್ಕಳ್ ಮನೆಗೆ ಭೇಟಿ ನೀಡಿದೆ. ಭಟ್ಕಳದ ತಕಿಯಾ ಸ್ಟ್ರೀಟ್ ನಲ್ಲಿರುವ ಇಕ್ಬಾಲ್ ಭಟ್ಕಳ ಮನೆಗೆ ಭೇಟಿ ನೀಡಿದ್ದು, ಇಕ್ಬಾಲ್ ಭಟ್ಕಳ್ ಮಗನನ್ನು ವಿಚಾರಿಸಿದ ಎನ್ಐಎ ಅಧಿಕಾರಿಗಳು ವಿಚಾರಣೆ ಸಂಬಂಧ ಬೆಂಗಳೂರಿಗೆ ಬರುವಂತೆ ನೋಟಿಸ್ ನೀಡಿ ತೆರಳಿದೆ.

ಬಾಂಬ್ ಸ್ಫೋಟ ನಂತರ ಬೆಂಗಳೂರಿನ ಸುಜಾತ ಸರ್ಕಲ್‌ನಲ್ಲಿ ಬಾಂಬರ್ ಬಸ್ ಹತ್ತಿ ತುಮಕೂರಿನಲ್ಲಿ ಇಳಿದಿದ್ದ. ನಂತರ ತುಮಕೂರಿನಿಂದ ಬಳ್ಳಾರಿಗೆ ಬಸ್‌ನಲ್ಲಿ ಬಂದು ತದ ನಂತರ ಮಂತ್ರಾಲಯ- ಗೋಕರ್ಣ ಬಸ್‌ ಹತ್ತಿ ಭಟ್ಕಳಕ್ಕೆ ತೆರಳಿರುವ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಎನ್ಐಎ ತಂಡ ಭಟ್ಕಳಕ್ಕೆ ಬಂದಿತ್ತು ಎಂದು ಮೂಲಗಳು ತಿಳಿಸಿವೆ.