Home HONNAVAR ಸೂಪರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಘೋಷಣೆ

ಸೂಪರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಘೋಷಣೆ


ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಗೊಂದು ಅತ್ಯುನ್ನತ ದರ್ಜೆಯ ಆಸ್ಪತ್ರೆ ಬೇಕು ಎಂಬ ಸ್ಥಳೀಯರ ಕೂಗಿ ಇಂದು ಇನ್ನೆಯದಲ್ಲ. ಇದೀಗ ಸಿಹಿ ಸುದ್ದಿ ಲಭ್ಯವಾಗಿದ್ದು ತಾಲೂಕಿನ ಗೇರಸೊಪ್ಪೆಯ ಬಂಗಾರಮಕ್ಕಿ ಶ್ರೀ ವೀರಾಂಜನೇಯ ಕ್ಷೇತ್ರದಿಂದ ಆಧುನಿಕ ತಂತ್ರಜ್ಞಾನದ ಎಲ್ಲ ಸೌಲಭ್ಯಗಳನ್ನೊಳಗೊಂಡ ಸೂಪರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು ನೀಡಲಾಗುವುದು ಎಂದು ರಾಮನವಮಿಯಂದು ಘೋಷಿಸಲಾಗಿದೆ.
ತಾಲೂಕಿನ ಗೇರಸೊಪ್ಪೆಯ ಶ್ರೀ ಬಂಗಾರಮಕ್ಕಿ ಕ್ಷೇತ್ರದ ಶ್ರೀ ವೀರಾಂಜನೇಯ ಸಭಾಭವನದಲ್ಲಿ ನಡೆದ ಸಂಸ್ಕೃತಿ ಕುಂಭ ಮಲೆನಾಡ ಉತ್ಸವ-೨೦೨೪ ರ ಉದ್ಘಾಟಿಸಿದ ಬೆಂಗಳೂರಿನ ಸುದೀಕ್ಷ ಗ್ರೂಪ್ ಆಫ್ ಕಂಪನಿಯ ಸಿಎಂಡಿ ಡಾ. ಸುಬ್ರಹ್ಮಣ್ಯಂ ಶರ್ಮ ಗೌರವರಂ, ಶ್ರೀ ಕ್ಷೇತ್ರ ಬಂಗಾರಮಕ್ಕಿ ಮತ್ತು ತಮ್ಮ ಕಂಪನಿಯ ಸಹಯೋಗದೊದಿಗೆ ಸೂಪರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು ಆರಂಭಿಸಲಾಗುವುದು ಎಂದು ಪ್ರಕಟಿಸಿದರು.


‘ಉತ್ತರ ಕನ್ನಡ ಜಿಲ್ಲೆಯಲ್ಲಿ ಉನ್ನತ ದರ್ಜೆಯ ಆಸ್ಪತ್ರೆಯಿಲ್ಲದೇ ನೂರಾರು ಜೀವಗಳು ಆತಂಕದಿAದ ಇದ್ದು ಈ ತನಕ ಅದಕ್ಕೆ ಪರಿಹಾರ ರೂಪದ ಉತ್ತರ ಸಿಕ್ಕಿಲ್ಲ. ಜನರ ಕೂಗಿಗೆ ಬೆಲೆಯೇ ಇಲ್ಲವಾಗಿದೆ, ಜಿಲ್ಲೆಗೊಂದು ದಾರಿ ತೋರಿಸಿ’ ಎಂದು ಕ್ಷೇತ್ರದ ಶ್ರೀ ಮಾರುತಿ ಗುರೂಜಿ ಅವರು ತಮ್ಮ ಬಳಿ ನೋವಿನಿಂದ ಹೇಳಿಕೊಂಡರು. ಅವರ ನಿಷ್ಕಲ್ಮಶ ಧ್ವನಿಗೆ ಬೆಲೆ ಕೊಟ್ಟು ಉತ್ತರ ಕನ್ನಡ ಜಿಲ್ಲೆಗೆ ಈ ಸೂಪರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು ಕೊಡುಗೆಯಾಗಿ ನೀಡಲಾಗುತ್ತಿದೆ. ಜನರ ಸಹಕಾರ ಕೊಟ್ಟು ಪ್ರಯೋಜನ ಪಡೆಯುವಂತಾಗಲಿ ಎಂದು ಆಶಿಸಿದರು.


ಆಸ್ಪತ್ರೆ ಮಾತ್ರವಲ್ಲದೇ ಅತ್ಯತ್ತಮ ವ್ಯವಸ್ಥೆಯ ಇಂಜಿನಿಯರಿAಗ್ ಕಾಲೇಜನ್ನೂ ಕೂಡ ಇಲ್ಲಿ ಆರಂಭಿಸಲಾಗುವುದು. ಈ ಕಾಲೇಜು ದೇಶದ ಪ್ರತಿಷ್ಠಿತ ಕಾಲೇಜುಗಳೊಂದಿಗೆ ಸ್ಪರ್ಧೆ ಮಾಡುವ ಅರ್ಹತೆಯುಳ್ಳ ಗುಣಮಟ್ಟ ಹೊಂದಿರುತ್ತದೆ ಎಂದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಬೆಂಗಳೂರಿನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಡಾ.ಚೇತನ್ ಆರ್. ವೇದಿಕೆಯಲ್ಲಿ ಪ್ರಸ್ತಾಪಿತ ಸೂಪರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಯೋಜನೆಗೆ ತಮ್ಮ ಆಸ್ಪತ್ರೆಯಿಂದ ಎಲ್ಲ ಸಹಕಾರ ನೀಡಲಾಗುವುದು ಎಂದು ಹೇಳಿದರಲ್ಲದೇ, ಕ್ಷೇತ್ರದಿಂದ ಸಿಬಿಎಸ್‌ಸಿ ಪಠ್ಯಕ್ರಮದಡಿ ನಡೆಸುತ್ತಿರುವ ಪಿಯುಸಿ ದ್ವಿತೀಯ ವರ್ಷದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ತಮ್ಮ ತಂದೆಯವರ ಹೆಸರಿನಲ್ಲಿ ಚಿನ್ನದ ಪದಕ ನೀಡಲಾಗುವುದು ಎಂದರು.


ಇನ್ನೋರ್ವ ಮುಖ್ಯ ಅತಿಥಿ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಮಾತನಾಡಿ ಜಿಲ್ಲೆಗೆ ಉನ್ನತ ದರ್ಜೆಯ ಆಸ್ಪತ್ರೆ ಬೇಕೆಂದು ಜನ ಹಲವಾರು ವರ್ಷಗಳಿಂದ ಸರಕಾರಕ್ಕೆ ಮನವಿ ಮಾಡುತ್ತಲೇ ಬಂದಿದ್ದಾರೆ. ಆದರೆ ಈ ಕೂಗಿಗೆ ರಾಜಕೀಯ ಬಣ್ಣ ಬಳಿದು ಚುನಾವಣಾ ಸಮಯದ ಸರಕನ್ನಾಗಿ ಕೆಲವರು ಮಾಡಿಕೊಂಡು ಆಸ್ಪತ್ರೆಯ ಕನಸು ಗಗನಕುಸುಮವಾಗಿಯೇ ಉಳಿದಿತ್ತು. ಇದೀಗ ಡಾ. ಸುಬ್ರಹ್ಮಣ್ಯಂ ಅವರು ಜಿಲ್ಲೆಗೊಂದು ಸೂಪರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮಾಡಿಕೊಟ್ಟರೆ ಉತ್ತರ ಕನ್ನಡ ಜಿಲ್ಲೆ ಅವರಿಗೆ ಶರಣಾಗಿರುತ್ತದೆ ಎಂದರು.


ವೇದಿಕೆಯಲ್ಲಿ ದಿವ್ಯಸಾನಿಧ್ಯ ವಹಿಸಿದ್ದ ಶ್ರೀ ಮಾರುತಿ ಗುರೂಜಿ ಅವರು ‘ಉತ್ತರ ಕಾಣದ ಜಿಲ್ಲೆ’ ಎಂದು ವಿಡಂಬನಾತ್ಮಕವಾಗಿ ಕರೆಯಲ್ಪಡುವ ಈ ಜಿಲ್ಲೆಗೆ ಅತಿ ಸನಿಹದಲ್ಲಿಯೇ ಸೂಪರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ಉತ್ತಮ ದರ್ಜೆಯ ಇಂಜಿನಿಯರಿAಗ್ ಕಾಲೇಜು ಬರುತ್ತಿರುವುದರ ಜೊತೆಗೆ ದಿವ್ಯಾಂಗರ ವಿಶ್ವ ವಿದ್ಯಾಲಯ ಕೂಡ ಕ್ಷೇತ್ರದ ವತಿಯಿಂದ ಆಗಲಿದೆ. ಇದು ದೇಶ ಮಾತ್ರವಲ್ಲ, ಜಾಗತಿಕವಾಗಿಯೂ ವಿಶಿಷ್ಟವಾಗಲಿದೆ ಎಂದರು.


ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರದ ಆಡಳಿತಾಧಿಕಾರಿ ಎಂ.ಎನ್. ಮಂಜುನಾಥ್ ಬಂಗಾರಮಕ್ಕಿ ಕ್ಷೇತ್ರ ಯಾವತ್ತೂ ಜನಪರವಾಗಿ ಸ್ಪಂದಿಸುತ್ತದೆ. ಇದೀಗ ಡಾ. ಸುಬ್ರಹ್ಮಣ್ಯಂ ಶರ್ಮ ಅವರು ಕ್ಷೇತ್ರದ ಅಭಿಲಾಷೆಗೆ ಬೆನ್ನೆಲುಬಾದದ್ದು ಜಿಲ್ಲೆಯ ಅದೃಷ್ಟ. ಎಂದರು. ವೇದಿಕೆಯಲ್ಲಿ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆಯ ಕಾರ್ಯದರ್ಶಿ ಅರ್ಪಿತಾ ಮಾರುತಿ ಗುರೂಜಿ ಅವರು ಉಪಸ್ಥಿತರಿದ್ದರು. ಗಣಪತಿ ಹೆಗಡೆ ಸ್ವಾಗತಿಸಿದರು. ಶಿಕ್ಷಕ ದಯಾನಂದ ನಾಯ್ಕ ವಂದಿಸಿದರು. ಗೋಪಾಲಕೃಷ್ಣ ನಾಯ್ಕ ಮತ್ತು ಕವಿತಾ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.