Home Special News ಕುಮಟಾ ಕಾಂಗ್ರೆಸಿಗರ ಒಗ್ಗಟ್ಟೇ ಚುನಾವಣೆಗೆ ಬಹುದೊಡ್ಡ ಬಲ : ಇಲ್ಲ ಸಲ್ಲದ ಸುದ್ದಿ ಹಬ್ಬಿಸಿ ಗೊಂದಲ‌ಸೃಷ್ಟಿ...

ಕುಮಟಾ ಕಾಂಗ್ರೆಸಿಗರ ಒಗ್ಗಟ್ಟೇ ಚುನಾವಣೆಗೆ ಬಹುದೊಡ್ಡ ಬಲ : ಇಲ್ಲ ಸಲ್ಲದ ಸುದ್ದಿ ಹಬ್ಬಿಸಿ ಗೊಂದಲ‌ಸೃಷ್ಟಿ ಯತ್ನ : ನಾವೆಲ್ಲಾ ಒಂದೇ ಎಂದೆಂದ ಕುಮಟಾ ಕಾಂಗ್ರೇಸಿಗರು.

Oplus_131072

ಕಾರವಾರ : ಚುನಾವಣೆ ಸಮೀಪಿಸುತ್ತಿರುವ ಈ ಹೊತ್ತಿನಲ್ಲಿ ಪ್ರತಿಯೊಂದು ದಿನ ದಿನವೂ ಕ್ಷಣ ಕ್ಷಣವೂ ಚುನಾವಣಾ ಪ್ರಚಾರದ ಅಂಶಗಳು ಪ್ರಮುಖವೆನಿಸುತ್ತದೆ. ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಗೆಲುವಿಗಾಗಿ ಶತಾಯಗತಾಯ ಪ್ರಯತ್ನ ನಡೆಸುತ್ತಿರುವ ಕಾಂಗ್ರೆಸ್‌ ಪ್ರಮುಖರು ಒಗ್ಗಟ್ಟಾಗಿ ಎಲ್ಲೆಡೆ ಪ್ರಯತ್ನ ನಡೆಸುತ್ತಿದ್ದಾರೆ. ಇದರಲ್ಲಿ ಕುಮಟಾ ಕಾಂಗ್ರೆಸ್ ಮುಖಂಡರ ಒಗ್ಗಟ್ಟಿನ ಪ್ರಯತ್ನವೂ ಈ ಕ್ಷೇತ್ರದಲ್ಲಿ ಚುನಾವಣೆಗೆ ಬಹುದೊಡ್ಡ ಬಲವಾಗಿದೆ. ಕುಮಟಾದಲ್ಲಿ ಪ್ರತಿಯೊಂದು ಹಂತದಲ್ಲಿ ಎಲ್ಲಾ ಮುಖಂಡರು ಚರ್ಚಿಸಿ, ಹಿರಿಕಿರಿಯ ಕಾಂಗ್ರೆಸ್ ಕಾರ್ಯಕರ್ತರ ಅಭಿಪ್ರಾಯವನ್ನು ಪಡೆದು ಮುಂದುವರೆಯುತ್ತಿರುವುದು ಕಾಂಗ್ರೆಸ್ ಗೆಲುವಿಗೆ ಪೂರಕವಾಗಲಿದೆ ಎಂಬ ಮಾತು ಎಲ್ಲೆಡೆಯಿಂದ ಕೇಳಿ ಬರುತ್ತಿದೆ.

ಇನ್ನು ತಾಲೂಕಿನಲ್ಲಿ ಕಾಂಗ್ರೆಸಿಗರ ಒಗ್ಗಟ್ಟು ಹಾಗೂ ಅವರ ಪ್ರಚಾರದ ಬಿರುಸಿಗೆ ತಲೆಕೆಡಿಸಿಕೊಂಡಿರುವ ಇತರ ಪಕ್ಷದವರು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರದ ಹಾದಿ ಹಿಡಿದಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ನಲ್ಲಿ ಒಳ ಜಗಳ ಪ್ರಾರಂಭವಾಗಿದೆ, ಒಬ್ಬರಿಗೊಬ್ಬರಿಗೆ ವೈಮನಸ್ಸು ಉಂಟಾಗಿದೆ ಎಂಬಲ್ಲಾ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗಳು ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರವಾದದ್ದು ಎಂದು ಬಹುತೇಕ ಕಾಂಗ್ರೆಸ್ಸಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಪ್ರಮುಖರ ಭಿನ್ನಾಭಿಪ್ರಾಯಗಳ ಕುರಿತಾಗಿ ಹಾಗೂ ಇಲ್ಲಸಲ್ಲದ ವಿಷಯಗಳ ಕುರಿತಾಗಿ ಅಪಪ್ರಚಾರಕ್ಕೆ ಮುಂದಾಗಿರುವ ನೆಟ್ಟಿಗರ ವಿರುದ್ಧ ಕುಮಟಾದ ಹಲವು ಕಾಂಗ್ರೆಸ್ ಮುಖಂಡರು ಆಕ್ಷೇಪ ವ್ಯಕ್ತಪಡಿಸುವುದರ ಜೊತೆಗೆ, ಇಂತಹ ಕೃತ್ಯಯಿಂದ ಕಾಂಗ್ರೆಸ್‌ ದೃಢತೆಯನ್ನು ಕುಗ್ಗಿಸಲು ಸಾಧ್ಯವಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿ ಮುನ್ನಡೆಯುತ್ತಿದ್ದು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಸತತ ಪ್ರಯತ್ನ ಮುಂದುವರಿಸುವುದಾಗಿ ಅಭಿಪ್ರಾಯ ಯಾವ ವ್ಯಕ್ತಪಡಿಸಿದ್ದಾರೆ.

ಕುಮಟಾ ಕಾಂಗ್ರೆಸ್ ನಲ್ಲಿ ಒಳ ಜಗಳ ನಡೆಯುತ್ತಿದೆ, ಹಲವು ಪ್ರಮುಖರ ನಡುವೆ ಭಿನ್ನಾಭಿಪ್ರಾಯ ಏರ್ಪಟ್ಟಿದೆ. ಹಲವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ ಎಂಬೆಲ್ಲಾ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ವಿವಿಧ ಸುದ್ದಿ ವಾಹಿನಿಗಳಲ್ಲಿ ಪ್ರಸಾರ ಮಾಡುವುದರ ಮೂಲಕ ಕೀಳು ಮಟ್ಟದ ರಾಜಕೀಯವನ್ನು ಮಾಡಲಾಗುತ್ತಿದೆ. ಇದು ಸತ್ಯಕ್ಕೆ ದೂರವಾಗಿದ್ದು, ಕಾಂಗ್ರೆಸ್ಸಿಗರೆಲ್ಲರೂ ಒಗ್ಗಟ್ಟಿನ ಮಂತ್ರ ಜಪಿಸುವುದರ ಜೊತೆಗೆ ಪ್ರಾಮಾಣಿಕವಾಗಿ ತಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತಿದ್ದಾರೆ ಎಂಬುದು ಬಹುತೇಕ ಕುಮಟಾ ಕಾಂಗ್ರೆಸ್ಸಿಗರ ಅಭಿಪ್ರಾಯವಾಗಿದೆ.

ಈ ಹಿಂದೆ ಕುಮಟಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗುರುತಿಸಿಕೊಂಡ ನಿವೇದಿತ್ ಆಳ್ವಾ, ಸಕ್ರಿಯ ರಾಜಕಾರಣಕ್ಕೆ ಮರಳಿ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯರಾದ ಶಾರದಾ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭುವನ್ ಭಾಗ್ವತ್, ನಿಕಟಪೂರ್ವ ಅಧ್ಯಕ್ಷ ಹೊನ್ನಪ್ಪ ನಾಯಕ, ವಿ. ಎಲ್. ನಾಯ್ಕ ಹಾಗೂ ಪಕ್ಷದ ಪ್ರಮುಖರಾದ ರತ್ನಾಕರ ನಾಯ್ಕ, ಭಾಸ್ಕರ ಪಟಗಾರ, ಪ್ರದೀಪ ನಾಯಕ ಸೇರಿದಂತೆ ಪ್ರತೀ ಗ್ರಾ.ಪಂ ಮಟ್ಟದ ಎಲ್ಲಾ ಮುಖಂಡರೂ ನಿತ್ಯವೂ ಚುನಾವಣಾ ಚಿಂತನೆ ಹಾಗೂ ಪಕ್ಷ‌ ನೀಡಿದ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ. ಜನರು ಇಲ್ಲ ಸಲ್ಲದ ಅಪಪ್ರಚಾರಕ್ಕೆ ಕಿವಿಗೊಡುವುದು ಬಿಟ್ಟು, ಕಾಂಗ್ರೆಸ್ ಗೆ ಬೆಂಬಲಿಸುವಂತೆ ಎಲ್ಲಾ ಕಾಂಗ್ರೇಸಿಗರೂ ಒಗ್ಗಟ್ಟಾಗಿ ಕುಮಟಾದಾದ್ಯಂತ ಒಕ್ಕೊರಲ ದನಿ ಹೊರಡಿಸಿದ್ದಾರೆ.