Home SIRSI ಶಾಸಕ ಭೀಮಣ್ಣ ನಾಯ್ಕ ಮೇಲೆ ದಾಳಿಮಾಡಿದ ಜೇನು.

ಶಾಸಕ ಭೀಮಣ್ಣ ನಾಯ್ಕ ಮೇಲೆ ದಾಳಿಮಾಡಿದ ಜೇನು.

ಶಿರಸಿ: ತಾಲೂಕಿನ ಕೆಂಗ್ರೆಹೊಳೆ ಬಳಿ ನೀರಿನ ಮಟ್ಟ ಪರಿಶೀಲನೆ ಮಾಡುತ್ತಿರುವ ಸಂದರ್ಭದಲ್ಲಿ ಶಾಸಕ ಭೀಮಣ್ಣ ನಾಯ್ಕ ಹಾಗೂ ನಗರಸಭೆ ಪೌರಾಯುಕ್ತ ಕಾಂತರಾಜ ಹಾಗೂ ನಗರಸಭೆ ಸದಸ್ಯ ಖಾದರ ಆನವಟ್ಟಿ ಮೇಲೆ ಏಕಾಏಕಿ ಜೇನು ಹುಳುಗಳು ದಾಳಿ ನಡೆಸಿವೆ. ಜೇನು ದಾಳಿಯಿಂದ ಮೂವರೂ ಸಣ್ಣಪುಟ್ಟ ಗಾಯಗೊಂಡಿದ್ದು, ತಕ್ಷಣ ಅವರನ್ನು ಶಿರಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದ್ದು, ಯಾರೂ ಆತಂಕಪಡುವ ಅವಶ್ಯಕತೆಯಿಲ್ಲ. ಎಲ್ಲರೂ ಆರೋಗ್ಯದಿಂದ ಇದ್ದಾರೆ ಎಂಬ ಮಾಹಿತಿ ಲಭಿಸಿದೆ.