Home SIRSI ಟಿಎಸ್ಎಸ್ ಗೆ ಆಡಳಿತಾಧಿಕಾರಿ ನೇಮಕಕ್ಕೆ ತಡೆಯಾಜ್ಞೆ.

ಟಿಎಸ್ಎಸ್ ಗೆ ಆಡಳಿತಾಧಿಕಾರಿ ನೇಮಕಕ್ಕೆ ತಡೆಯಾಜ್ಞೆ.

ಶಿರಸಿ : ಟಿಎಸ್ಎಸ್ ಗೆ ಆಡಳಿತಾಧಿಕಾರಿ ನೇಮಿಸಿ ಜಿಲ್ಲಾ ಸಹಕಾರ ನ್ಯಾಯಾಲಯ ಹೊರಡಿಸಿದ್ದ ಆದೇಶಕ್ಕೆ ಜಂಟೀ ರಿಜಿಸ್ಟ್ರಾರ್ ತಡೆಯಾಜ್ಞೆ ನೀಡಿ‌ದ್ದಾರೆ. ಇದರಿಂದಾಗಿ ಟಿಎಸ್ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯರ ಬಣದ ಕೈ ಮೇಲಾಗಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ ಎಂದೇ ಹೇಳಲಾಗಿದೆ.

ಟಿಎಸ್ಎಸ್ ಎದುರು ಸಾರ್ವಜನಿಕರು ಜಮಾಯಿಸಿದ್ದು, ಚಟುವಟಿಕೆಗಳ ಕೇಂದ್ರ ಸ್ಥಾನವಾಗಿದೆ. ಇದೀಗ ಹಲವು ದಿನಗಳಿಂದ ಟಿಎಸ್ಎಸ್ ಸುದ್ದಿಯಾಗುತ್ತಿದ್ದು, ಹಿಂದಿನ ಆಡಳಿತ ಮಂಡಳಿ ಹಾಗೂ ಈಗಿನ ಆಡಳಿತ ಮಂಡಳಿಯ ನಡುವೆ ಹಗ್ಗ ಜಗ್ಗಾಟ ಮುಂದುವರೆದಿದೆ.