Home BHATKAL ಕಿರಣ ಶಾನಭಾಗ ಅವರಿಗೆ phD

ಕಿರಣ ಶಾನಭಾಗ ಅವರಿಗೆ phD

ಭಟ್ಕಳದ ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್‌ನ (ಎಐಟಿಎಂ) ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಕಿರಣ್ ವಿನಾಯಕ ಶಾನಭಾಗ್ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿಯನ್ನು ಪಡೆದಿದ್ದಾರೆ. ಅವರು ಮಂಗಳೂರಿನ ಸೇಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕಿ ಮತ್ತು ಮುಖ್ಯಸ್ಥರಾದ ಡಾ. ದಯಾಕ್ಷಿಣಿ ಎಸ್. ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “5G ಉಪಯುಕ್ತತೆ ಕಡೆಗೆ ಬಹುವಾಹಕ ಸಮನ್ವಯತೆ ಯೋಜನೆಗಳಲ್ಲಿ ಸಂಭಾವ್ಯ ವರ್ಧನೆಗಳು” (“Potential Enhancements in Multicarrier Modulation Schemes Towards 5G Applications”) ಎಂಬ ಪ್ರಬಂಧವನ್ನು ಮನ್ನಿಸಿ ಜುಲೈ 18, 2024 ರಂದು ಬೆಳಗಾವಿಯಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 24 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಅವರಿಗೆ ಡಾಕ್ಟರೇಟ್ ಪದವಿಯನ್ನು ನೀಡಲಾಗಿದೆ.

ಹೊನ್ನಾವರದ ವಿನಾಯಕ ಶಾನಭಾಗ್ ಹಾಗೂ ವಿನಯಾ ಶಾನಭಾಗ್ ಅವರ ಪುತ್ರರಾದ ಕಿರಣ್ ಅವರು ಎಐಟಿಎಂನಲ್ಲಿ ಇಂಜಿನಿಯರಿಂಗ್ ಶಿಕ್ಷಣವನ್ನು ಮುಗಿಸಿ ಸುರತ್ಕಲ್‌ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ) ದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದಾರೆ. 2005 ರಿಂದ ಎಐಟಿಎಂನಲ್ಲಿ ಸೇವೆ ಸಲ್ಲಿಸುತ್ತಿರುವ ಅವರು ಆಗಸ್ಟ್ 2023 ರಿಂದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿದ್ದಾರೆ.

ಈ ಮಹತ್ವದ ಸಾಧನೆಗಾಗಿ ಎಐಟಿಎಂನ ಆಡಳಿತ ಮಂಡಳಿ, ಪ್ರಾಂಶುಪಾಲ ಡಾ. ಕೆ. ಫಜಲುರ್ ರೆಹಮಾನ್, ರಿಜಿಸ್ಟ್ರಾರ್ ಪ್ರೊ. ಜಾಹಿದ್ ಖರೂರಿ, ಉಪನ್ಯಾಸಕ ಹಾಗೂ ಸಿಬ್ಬಂದಿವರ್ಗ ಡಾ. ಕಿರಣ್ ಶಾನಭಾಗ್ ಅವರನ್ನು ಅಭಿನಂದಿಸಿದ್ದಾರೆ.