Home ANKOLA ಕುಸಿದು ಬಿತ್ತು ಸೇತುವೆ : ಮುಳುಗಿದೆ ವಾಹನ..? ಮಳೆಯ ಅವಾಂತರಕ್ಕೆ ಹೆದ್ದಾರಿ ಬಂದ್..!

ಕುಸಿದು ಬಿತ್ತು ಸೇತುವೆ : ಮುಳುಗಿದೆ ವಾಹನ..? ಮಳೆಯ ಅವಾಂತರಕ್ಕೆ ಹೆದ್ದಾರಿ ಬಂದ್..!

ಕಾರವಾರ : ಇಲ್ಲಿನ ಸದಾಶಿವಘಡ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸುಮಾರು 45 ವರ್ಷಗಳ ಹಿಂದೆ ನಿರ್ಮಿತವಾದ ಕಾಳಿ ಸೇತುವೆ ಕುಸಿದು ಬಿದ್ದು, ಲಾರಿ ಮುಳುಗಡೆಯಾಗಿರುವ ಘಟನೆ ನಡೆದಿದೆ.

ಗೋವಾದಿಂದ ಮಂಗಳೂರು ಕಡೆ ಚಲಿಸುತ್ತಿದ್ದ ಲಾರಿ ಕಾಳಿ ನದಿಯಲ್ಲಿ ಮುಳುಗಡೆಯಾಗಿದ್ದು, ಲಾರಿ ಚಾಲಕನ ರಕ್ಷಣೆ ಮಾಡಲಾಗಿದೆ. ಚಾಲಕ‌ನ ಸ್ಥಿತಿ ಗಂಭೀರವಾಗಿದೆ. ಸದ್ಯ ಆತನಿಗೆ ಕಾರವಾರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರವಾರದ ಮೂಲಕ ಹರಿಯುವ ಕಾಳಿ ನದಿಗೆ.1983ರಲ್ಲಿ ಈ ನದಿಯ ಮೇಲೆ ನಿರ್ಮಿಸಲಾದ ಸೇತುವೆಯು ಕರ್ನಾಟಕವನ್ನು ಗೋವಾದೊಂದಿಗೆ ಸಂಪರ್ಕಿಸುವ ಸೇತುಗೆ ಇದಾಗಿತ್ತು. ನದಿ ಮತ್ತು ಸಮುದ್ರದ ಸಂಗಮ ಸ್ಥಳದ ಮೇಲೆ ಸೇತುವೆಯನ್ನು ನಿರ್ಮಿಸಿರುವುದರಿಂದ ಇದು ಪ್ರವಾಸಿಗರ ಅಚ್ಚುಮೆಚ್ಚಿನ ಸ್ಥಳ ಸಹ ಆಗಿತ್ತು.‌ಈ ಸೇತುವೆಯ ಮೇಲೆ ಅನೇಕ ಕನ್ನಡ ಹಾಗೂ ಹಿಂದಿ ಸಿನಿಮಾಗಳು ಸಹ ಚಿತ್ರೀಕರಣ ಮಾಡಲಾಗಿತ್ತು. ನದಿಯು ಸಮುದ್ರವನ್ನು ಸೇರುವ ಸ್ಥಳವು ಸ್ಪಷ್ಟವಾಗಿ ಗೋಚರಿಸುವ ಕೆಲವು ಸ್ಥಳಗಳಲ್ಲಿ ಇದು ಒಂದಾಗಿದೆ.

ಇನ್ನು ಜಿಲ್ಲೆಯ ಕಾರವಾರ ನಗರದ ರಾಷ್ಟ್ರೀಯ ಹೆದ್ದಾರಿ 66 ರ ಗೋವಾ- ಕಾರವಾರ ಹೆದ್ದಾರಿ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾರವರು ಆದೇಶಿಸಿದ್ದಾರೆ.

ಇದಲ್ಲದೇ ಈ ಆದೇಶ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ IRB ಕಂಪನಿ ಕಾಳಿ ನದಿ ಸೇತುವೆ ಭದ್ರತೆ ಕುರಿತು ವರದಿ ನೀಡುವ ವರೆಗೆ ಸಂಪೂರ್ಣ ಬಂದ್ ಇರಲಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಐ.ಆರ್.ಬಿ ಕಂಪನಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿಯಲ್ಲಿ ದುರಂತ ನಡೆಯುತ್ತಿದೆ. ಇದಲ್ಲದೇ ಹೊಸ ಸೇತುವೆ ನಿರ್ಮಿಸುವ ಬದಲು ಒಂದುಭಾಗದಲ್ಲಿ ಮಾತ್ರ ಹೊಸ ಸೇತುವೆ ನಿರ್ಮಿಸಿ ಇನ್ನೊಂದು ಭಾಗದಲ್ಲಿ 41 ವರ್ಷದ ಹಿಂದೆ ನಿರ್ಮಿಸಿರುವ ಸೇತುವೆಯಲ್ಲಿ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದು ಸೇತುವೆ ಭದ್ರವಾಗಿರದಿದ್ದರೂ ಇನ್ನೊಂದು ಸೇತುವೆ ನಿರ್ಮಿಸದೇ ನಿರ್ಲಕ್ಷ ವಹಿಸಿ ಇಂದಿನ ದುರಂತಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕಾರವಾರ ನಗರ ಠಾಣೆಯಲ್ಲಿ BNS ಕಲಂ 110, 125 ,285 ನಡಿ ಪ್ರಕರಣ ದಾಖಲು ಮಾಡಲಾಗಿದೆ.