Satwadhara News

ಬಹುಬಗೆಯ ಆರಾಧನೆಯೊಂದಿಗೆ ದೊಡ್ಡಬ್ಬ ಸಂಪನ್ನ.

ಕುಮಟಾ : ಬೆಳಕಿನ ಹಬ್ಬ ದೀಪಾವಳಿ ಹಲವು ವೈಶಿಷ್ಟ್ಯಗಳನ್ನು ಕಟ್ಟಿಕೊಡುತ್ತದೆ. ಮೂರು ದಿನಗಳ ಕಾಲ ಅತ್ಯಂತ ವಿಜ್ರಂಬಣೆಯಿಂದ ನಡೆದ ದೀಪಾವಳಿ ಹಬ್ಬವು ಸಂಪನ್ನವಾಗಿದ್ದು, ಬಲಿಂದ್ರನನ್ನು ಕಳುಹಿಸಿ ಕೊಡುವುದರ ಮೂಲಕ ಹಬ್ಬಕ್ಕೆ ಮಂಗಲ ಹಾಡಲಾಯಿತು.

ಇನ್ನು ಭಾರತೀಯ ಸಂಸ್ಕೃತಿಯಲ್ಲಿ ಗೋವಿಗೆ ತುಂಬಾ ಮಹತ್ವವಿದ್ದು. ಹಬ್ಬದಲ್ಲಿ ಮರೆಯದೇ ಗೋವನ್ನು ಪೂಜಿಸುವ ಸಂಪ್ರದಾಯವಿದೆ. ಅಂತೆಯೇ ಹಬ್ಬದ ಪಾಡ್ಯದ ದಿನದಂದು ಬಹು ವಿಶೇಷವಾಗಿ ಗೋ ಪೂಜೆ ಸಂಪನ್ನಗೊಂಡಿತು. ಗೋವುಗಳಿಗೆ ವಿಶೇಷ ಅಲಂಕಾರ ಮಾಡಿ, ಪೂಜಿಸಿ, ದನಗಳನ್ನು ಬೆಚ್ಚಿಸುವ ಪಾರಂಪರಿಕ ಆಚರಣೆಗಳೂ ಬಹು ವಿಶೇಷವಾಗಿ ನಡೆದವು.

ಸಾಂಪ್ರದಾಯಿಕ ಪೂಜೆ ಪುನಸ್ಕಾರಗಳ ಜೊತೆಯಲ್ಲಿ ಹಬ್ಬದ ಅಡುಗೆ ಮಾಡಿ ಸಂಭ್ರಮಿಸುವ ಜೊತೆಗೆ, ಯುವಕರು ಹಾಗೂ ಹುಡುಗರು ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದರು.

ಒಟ್ಟಿನಲ್ಲಿ ದೀಪಾವಳಿಯ ಹಬ್ಬವು ಬಹು ವಿಶೇಷವಾಗಿ ನಡೆದಿದ್ದು, ತಾಲೂಕಿನಲ್ಲಿ ಅತ್ಯಂತ ವಿಜ್ರಂಭಣೆಯಿಂದ ಮೂರು ದಿನಗಳ ಕಾಲ ಹಬ್ಬ ಆಚರಿಸಲ್ಪಟ್ಟಿತು. ಊರಿನ ಹಾಗೂ ಪರ ಊರಿನ ಅನೇಕರು ವಿವಿಧ ಸಂಪ್ರದಾಯಗಳು, ಪೂಜೆ ಪುನಸ್ಕಾರದಲ್ಲಿ ಭಾಗವಹಿಸಿ ಹಬ್ಬದೂಟವನ್ನು ಸವಿದು ಸಂತಸ ಪಟ್ಟರು.