ಗೋಕರ್ಣ: ಕಟ್ಟಡದ ಕಾಂಕ್ರಿಟ್ ಕೆಲಸ ಮುಗಿಸಿ ಬರುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕಟ್ಟಡದಿಂದ ಬಿದ್ದು ಮಹಿಳೆ ಸಾವನಪ್ಪಿರುವ ಘಟನೆ ಗೋಕರ್ಣದಲ್ಲಿ ನಡೆದಿದೆ. ಕುಡ್ಲೆ ಬೀಚ್ನ ಬಳಿ ಖಾಸಗಿ ವ್ಯಕ್ತಿಯ ಕಟ್ಟಡ ನಿರ್ಮಾಣಕ್ಕೆ ಕಾಂಕ್ರಿಟ್ ಕೆಲಸ ಮುಗಿಸಿ ಬರುತ್ತಿರುವ ವೇಳೆ ಮಂಕಾಳಿ ಗೌಡ ಹೆಗ್ಡೆ ಎಂಬ ಮಹಿಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸ್ಥಳದಲ್ಲೇ ಸಾವನಪ್ಪಿದ್ದಾಳೆ. ಈ ಬಗ್ಗೆ ಮೃತಳ ತಮ್ಮ ಪೊಲೀಸರಿಗೆ ದೂರನ್ನು ನೀಡಿದ್ದು ಈ ಬಗ್ಗೆ ಗೋಕರ್ಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.