ಶಿರಸಿ: ಸಮಾಜ ಅಭಿವೃದ್ಧಿ ಯಾಗಬೇಕಾದರೆ ಪ್ರತಿಯೊಬ್ಬರೂ ವಿದ್ಯಾವಂತರಾಗಬೇಕು. ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. ತಾಲೂಕಾಡಳಿತ, ನಗರಸಭೆ ಹಾಗೂ ತಾಲೂಕಾ ಪಂಚಾಯತ್ ಶಿರಸಿ ಮತ್ತು ಶಿರಸಿ – ತಾಲೂಕಾ ಸೇವಾಲಾಲ್ ಬಂಜಾರಾ ಸಂಘ ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಗರದ ಮಾರಿಕಾಂಬಾ ಕಲ್ಯಾಣ ಮಂಟಪದಲ್ಲಿ ೫. ಹಮ್ಮಿಕೊಂಡಿದ್ದ ಸಂತ ಸೇವಾಲಾಲ್ ರವರ 286ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂತ ಸೇವಾಲಾಲರು ಸಮಾಜಸುಧಾರಕರು. ಸಮಾಜಕ್ಕೆ ಅನೇಕ ಸಂದೇಶವನ್ನು ನೀಡಿದವರು. ಇಂತವರನ್ನು ಸ್ಮರಿಸಿ ಗೌರವಿಸಬೇಕು ಎಂಬ ಉದ್ದೇಶದಿಂದ ಇದನ್ನು ಸರ್ಕಾರಿ ಕಾರ್ಯ ಕ್ರಮವನ್ನಾಗಿ ಆಚರಿಸುತ್ತಿದ್ದೇವೆ. ಸಮಾಜದ ಬಳ್ಳೆಯನ್ನು ಬಯಸುವುದು ಪ್ರತಿಯೊಬ್ಬರ – ಜವಾಬ್ದಾರಿ ಸಮಾಜದ ಮುತ್ತಖ್ಯ ವಾಹಿನಿಗೆ ಬರಲು ಶಿಕ್ಷಣ ಆತೀ ಮುಖ್ಯವಾಗಿರುತ್ತದೆ. ಶಿಕ್ಷಣಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು 5 ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಯೋಜನೆಗಳನ್ನು ಸಮಾಜದ ಮಕ್ಕಳು ಜರ ಸದುಪಯೋಗ ಪಡಿಸಿಕೊಂಡು ಉತ್ತಮ ವಿದ್ಯಾವಂತರಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದರು.

ಮಾದನಗೇರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ, ಸಂಘದ ಅಧ್ಯಕ್ಷ ಡಾ.ಕೆ.ಬಿ ಪವಾರ, ಶಿವಾನಂದ ಇದ್ದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಡಾ.ಎಂ ಕೃಷ್ಣಮೂರ್ತಿ ಸ್ವಾಗತಿಸಿದರು. ರೂಪೇಶ್ ಚೌಹಾಣ್ ನಿರೂಪಿಸಿದರು. ಶನಿವಾರ ಮಾರಿಕಾಂಬಾ ದೇವಸ್ಥಾನದಿಂದ ನಗರದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಸೇವಾಲಾಲರ ಭಕ್ತಿಗೀತೆಗಳಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು.