ಹೊನ್ನಾವರ : ಜಿಲ್ಲೆಯ ಅಂಕೋಲಾದ ಕೇಣಿ ಬಂದರು ಹಾಗೂ ಹೊನ್ನಾವರ ಟೊಂಕಾ ಕಾಮಗಾರಿಯ ಬಗ್ಗೆ ಸ್ಥಳೀಯ ಮೀನುಗಾರರು ಪ್ರತಿಭಟನೆ ನಡೆಸುತ್ತಿದ್ದು, ನಿಷೇಧಾಜ್ಞೆಯನ್ನೂ ಜಾರಿಮಾಡಲಾಗಿದೆ. ಆದರೆ ಮೀನುಗಾರರಿಗೆ ಕೆಲವರು ತಪ್ಪು ಸಂದೇಶ ರವಾನಿಸುತ್ತಿದ್ದಾರೆ. ಜನರ ದಿಕ್ಕು ತಪ್ಪಿಸುವ ಪ್ರಯತ್ನವನ್ನು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಮಾಡುತ್ತಿದ್ದು, ಅಂತವರ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಜೊತೆಗೆ ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ್ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಬಂದರು ಕಾಮಗಾರಿಯಿಂದ ಅಷ್ಟು ಮನೆ ಹೋಗಲಿದೆ, ಇಷ್ಟು ಭೂಮಿ ಕಸಿದುಕೊಳ್ಳಲಿದ್ದಾರೆ, ಪರಿಹಾರ ಸಿಗುವುದಿಲ್ಲ ಹೀಗೆ ಇನ್ನಿತರ ಸುಳ್ಳು ಸುದ್ದಿಗಳನ್ನು ಶೋಷಿಯಲ್ ಮೀಡಿಯಾ, ವಾಟ್ಸಾಪ್ ಗ್ರೂಪ್ ಗಳಲ್ಲಿ ಹರಿಬಿಡಲಾಗುತ್ತಿದೆ ಎನ್ನಲಾಗಿದ್ದು, ಈ ಬಗ್ಗೆ ಇಲಾಖೆ ಕ್ರಮಕ್ಕೆ ಮುಂದಾಗುವ ಸೂಚನೆಯನ್ನು ಅವರು ನೀಡಿದ್ದಾರೆ.

ಪ್ರತಿಭಟನಾ ನಿರತರಿಗೆ ತಪ್ಪು ಸಂದೇಶ ನೀಡುತ್ತಿರುವುದು ಕಂಡುಬಂದಿದೆ,ಸಾಮಾಜಿಕ ಮಾಧ್ಯಮದಲ್ಲಿ ತಪ್ಪು ಸಂದೇಶ ಬಿತ್ತರಿಸಯವ, ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡುವವರಿಗೆ ಎಸ್ಪಿ ಎಂ ನಾರಾಯಣ್ ಖಡಕ್ ವಾರ್ನಿಂಗ್ ನೀಡಿದ್ದು, ಶೋಷಿಯಲ್ ಮೀಡಿಯಾ ಹಾಗೂ ಇನ್ನಿತರ ಮಾರ್ಗವಾಗಿ ತಪ್ಪು ಸಂದೇಶ ರವಾನಿಸುತ್ತಿರುವವರ ವಿರುದ್ಧ ತಕ್ಷಣ ಎಫ್ ಐ ಆರ್ ದಾಖಲಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಹಾಗೆಯೇ ಸುಳ್ಳು ಮಾಹಿತಿ ನೀಡಿ ಪ್ರತಿಭಟನೆಗೆ ಪ್ರಚೋದನೆ ನೀಡುತ್ತಿರುವ 150 ಕ್ಕೂ ಅಧಿಕ ಮಂದಿಯನ್ನು ಗುರುತಿಸಲಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.