Satwadhara News

ಪೇಟೆಗೆ ಹೋಗಲು ಸಿದ್ಧನಾಗುತ್ತಿದ್ದವ ಒಮ್ಮೆಲೇ ಹೌಹಾರಿದ.

ಶಿರಸಿ : ಪೇಟೆಗೆ ಹೋಗಲೆಂದು ಅಂಗಿ ತೊಟ್ಟು, ಪ್ಯಾಂಟ್ ತೊಡಲೆಂದು ಪ್ಯಾಂಟ್ ಗೆ ಕೈ ಹಾಕಿದ ಸಂದರ್ಭದಲ್ಲಿ ಹಾವೊಂದು ಸಿಕ್ಕಿ ವ್ಯಕ್ತಿ ಹೌಹಾರಿದ ಘಟನೆ ಶಿರಸಿ ನಾರಾಯಣಗುರು ನಗರದಲ್ಲಿ ನಡೆದಿದೆ.

ಇಲ್ಲಿಯ ಮಾಂತೇಶ ಅವರು ಶುಕ್ರವಾರ ಸಂಜೆ ಪೇಟೆಗೆ ಹೋಗುವವರಿದ್ದರು. ಅಂಗಿ ಧರಿಸಿದ ಅವರು ಪ್ಯಾಂಟಿಗಾಗಿ ಕೈ ಹಾಕಿದರು. ಆಗ, ಅದರೊಳಗಿದ್ದ ನಾಗರ ಬುಸ್ ಎಂದಿದ್ದು, ಮಾಂತೇಶ್ ಅವರು ಬೆಚ್ಚಿ ಬಿದ್ದಿದ್ದಾರೆ.

ತಕ್ಷಣ ಆ ಪ್ಯಾಂಟನ್ನು ನೆಲದ ಮೇಲೆ ಎಸೆದು ದೂರ ಸರಿದರು. ಕಂಗಾಲಾದ ಮಾಂತೇಶ ಅವರು ಜೋರಾಗಿ ಬೊಬ್ಬೆ ಹೊಡೆದರು. ಅದನ್ನು ಕೇಳಿ ಅಕ್ಕ-ಪಕ್ಕದವರು ಸಹ ಆಗಮಿಸಿದರು. ಬಳಿಕ ಉರಗತಜ್ಞ ಪ್ರಶಾಂತ ಹುಲೆಕಲ್ ಅವರನ್ನು ಜನ ಸ್ಥಳಕ್ಕೆ ಕರೆಯಿಸಿದರು.

ಪ್ಯಾಂಟಿನ ಒಳಗೆ ಸಿಲುಕಿಕೊಂಡಿದ್ದ ಹಾವನ್ನು ಪ್ರಶಾಂತ ಹುಲೆಕಲ್ ಹೊರತೆಗೆದರು. ನಂತರ ಅದನ್ನು ಕಾಡಿಗೆ ಬಿಟ್ಟರು. ಮಾಂತೇಶ ಕುಟುಂಬದವರು ಸಹ ಇದರಿಂದ ನೆಮ್ಮದಿಯ ನಿಟ್ಟುಸಿರು ಬಿಟ್ಟರು.