Satwadhara News

ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿ : ಹಲವರಿಗೆ ಪೆಟ್ಟು

ಹೊನ್ನಾವರ : ಮಹಾರಾಷ್ಟ್ರ ಮೂಲದ ಪ್ರವಾಸಿಗರು ಮೈಸೂರಿನಿಂದ ಮುರುಡೇಶ್ವರ ಪ್ರವಾಸಕ್ಕೆ ಬಸ್ ಬರುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಪ್ರವಾಸಿಗರು ಗಾಯಗೊಂಡ ಘಟನೆ ಗೇರುಸೊಪ್ಪದ ಬಳಿ ನಡೆದಿದೆ.

ಮೈಸೂರು ಪ್ರವಾಸಕ್ಕೆ ಹೋಗಿದ್ದ ಮಹಾರಾಷ್ಟ್ರ ಮೂಲದ ,51 ಮಂದಿ ಪ್ರವಾಸಿಗರು ಮೈಸೂರು ಪ್ರವಾಸ ಮುಗಿಸಿ ಗೆರಸೊಪ್ಪ ಮಾರ್ಗವಾಗಿ ಮಹಾರಾಷ್ಟ್ರ ಮೂಲದ ಚಾಲಕ ಅಶೋಕ ಚಲಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿ ಪಲ್ಟಿಯಾಗಿದೆ.

ಇದರಿಂದಾಗಿ 51ಜನ ಪ್ರವಾಸಿಗರ ಪೈಕಿ 14ರಿಂದ 17ಜನರಿಗೆ ಸಣ್ಣಪುಟ್ಟ ಗಾಯವಾಗಿದ್ದು, 13ಜನ ಗಾಯಾಳುಗಳಿಗೆ ಹೊನ್ನಾವರ 108 ವಾಹನದ ಹೊನ್ನಾವರ ಸರಕಾರಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.