Satwadhara News

Category: DANDELI

ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನಲ್ಲಿ ನಡೆದ ಕಾರ್ಯಕ್ರಮಗಳ ವರದಿ ಮತ್ತು ಇನ್ನಿತರ ಘಟನಾವಳಿಗಳ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.

  • ಮನೆಗೆ ಕ್ಯೂರಿಂಗ್‌ ಮಾಡುತ್ತಿರುವ ಸಂದರ್ಭದಲ್ಲಿ ವಿದ್ಯುತ್‌ ಶಾಕ್ ತಗುಲಿ ಸಾವು

    ಮನೆಗೆ ಕ್ಯೂರಿಂಗ್‌ ಮಾಡುತ್ತಿರುವ ಸಂದರ್ಭದಲ್ಲಿ ವಿದ್ಯುತ್‌ ಶಾಕ್ ತಗುಲಿ ಸಾವು

    ದಾಂಡೇಲಿ : ನಗರದ ಹಳಿಯಾಳ ರಸ್ತೆಯ ಅಲೈಡ್ ಏರಿಯಾದಲ್ಲಿ ನಿರ್ಮಾಣ ಹಂತದ ಮನೆಗೆ ಕ್ಯೂರಿಂಗ್‌ ಮಾಡುತ್ತಿರುವ ಸಂದರ್ಭದಲ್ಲಿ ವಿದ್ಯುತ್‌ ಶಾಕ್ ತಗುಲಿದ ಪರಿಣಾಮ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

    ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು ಜಾರ್ಖಂಡ್ ಮೂಲದ ಅಲಿ ಅನ್ಸಾರಿ (40) ಎಂಬಾತ ಸಾವನ್ನಪ್ಪಿದ್ದಾರೆ. ಕಳೆದ ಹತ್ತು ವರ್ಷಗಳಿಂದ ನಗರದಲ್ಲಿ ಟೈಲ್ಸ್ ಫಿಟ್ಟಿಂಗ್ ಗುತ್ತಿಗೆದಾರರಾಗಿರುವ ಅಲಿ ಅನ್ಸಾರಿ ಅಲೈಡ್ ಪ್ರದೇಶದಲ್ಲಿ ನೂತನವಾಗಿ ಮನೆ ನಿರ್ಮಿಸುತ್ತಿದ್ದರು. ಮನೆಗೆ ಕ್ಯೂರಿಂಗ್ ಮಾಡುವ ಸಲುವಾಗಿ ನೀರು ಹಾಕುತ್ತಿರುವಾಗ ಕರೆಂಟ್ ಶಾಕ್ ಹೊಡೆದು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

    ಸ್ಥಳಕ್ಕೆ ದಾಂಡೇಲಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

  • ಉತ್ತರಕನ್ನಡದಲ್ಲಿ ತಂಪೆರೆದ ಮಳೆರಾಯ.

    ಉತ್ತರಕನ್ನಡದಲ್ಲಿ ತಂಪೆರೆದ ಮಳೆರಾಯ.

    ಕುಮಟಾ : ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಜಿಲ್ಲೆಯ ಕುಮಟಾ, ಅಂಕೋಲಾ,‌ ಹೊನ್ನಾವರ ಸೇರಿದಂತೆ ಕರಾವಳಿಯ ತಾಲೂಕಿನ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮಳೆ ಉಂಟಾಗಿದೆ. ಈ ಮೂಲಕ ಸುಡು ಬಿಸಿಲಿನಿಂದ ಪರಿತಪಿಸುತ್ತಿದ್ದ ಉತ್ತರಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮಳೆರಾಯ ತಂಪೆರೆದಿದ್ದಾನೆ.

    ಕಳೆದ ಎರಡು ದಿನಗಳಿಂದ ಭಾರೀ ಮೊಡಕವಿದ ವಾತಾವಣ ಇತ್ತು. ವಿಪರೀತವಾದ ಬಿಸಿಲಿನ ಧಗೆಗೆ ಕಂಗೆಟ್ಟಿದ್ದ ಜನತೆಗೆ ತಂಪಾಗಿಸಿದ ವರುಣ ತಂಪೆರೆದಿದೆ. ಕಳೆದೆರಡು ದಿನಗಳಿಂದ ಘಟ್ಟದ ಮೇಲಿನ ತಾಲ್ಲೂಕುಗಳಲ್ಲಿ ಅಬ್ಬರಿಸಿತ್ತು. ಇಂದು ಬೆಳ್ಳಂಬೆಳಿಗ್ಗೆ ಕುಮಟಾ, ಅಂಕೋಲಾ ಭಾಗದಲ್ಲಿ ಮಳೆ ಸುರಿಯುತ್ತಿದ್ದು ತಂಪೆರೆದಿದೆ.

    ಇನ್ನೂ ಜಿಲ್ಲೆಯಲ್ಲಿ ಎಪ್ರಿಲ್ 22ರ ವರೆಗೆ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿರಸಿ, ಸಿದ್ದಾಪುರ, ಮುಂಡಗೋಡ, ಹಳಿಯಾಳ ಭಾಗದಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆ ಉಂಟಾಗುತ್ತಿದೆ. ಇನ್ನೂ ಎರಡು ದಿನ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುವ ಬಗ್ಗೆ ಇಲಾಖೆ ಮಾಹಿತಿ ನೀಡಿದೆ.

  • ಕರ್ತವ್ಯಕ್ಕೆ ತೆರಳುವ ವೇಳೆ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಸಾವು.

    ಕರ್ತವ್ಯಕ್ಕೆ ತೆರಳುವ ವೇಳೆ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಸಾವು.

    ಜೋಯಿಡಾ : ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಬೈಕೊಂಡು ಸ್ಕಿಡ್ ಆಗಿ ಬಿದ್ದು ಸವಾರರೋರ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜೋಯಿಡಾ ತಾಲೂಕಿನ ಅಣಶಿಯ ನಿಗುಂದಿಯಲ್ಲಿ ನಡೆದಿದೆ.

    ಖಾನಾಪುರ ಮೂಲದ ವಿನಾಯಕ ಜಂಗ್ಲಿ ಎಂಬವರೇ ಮೃತಪಟ್ಟ ದುರ್ದೈವಿಯಾಗಿದ್ದು, ಇವರು ಕಾರವಾರ ಜೈಲಿನಲ್ಲಿ ವಾರ್ಡರ್ ಆಗಿ ಸೇವೆಯನ್ನು ಸಲ್ಲಿಸುತ್ತಿದ್ದರು. ತನ್ನೂರು ಖಾನಾಪುರಕ್ಕೆ ತನ್ನ ದ್ವಿಚಕ್ರ ವಾಹನದಲ್ಲಿ ಹೋಗಿ ಹಿಂದಿರುಗಿ ಬರುತ್ತಿದ್ದಾಗ ಅಣಶಿಯ ನಿಗುಂದಿ ಎಂಬಲ್ಲಿ ದ್ವಿಚಕ್ರ ವಾಹನ ಸ್ಕಿಡ್ ಆಗಿ‌ ಬಿದ್ದ ಪರಿಣಾಮವಾಗಿ ಗಂಭೀರ ಗಾಯಗೊಂಡ ವಿನಾಯಕ್ ಸ್ಥಳದಲ್ಲಿ ಮೃತಪಟ್ಟಿದ್ದಾರೆ.

  • ಟ್ರ್ಯಾಕ್ಟರ್ ಉರುಳಿ ಬಿದ್ದು ಚಾಲಕ ಸಾವು.

    ಟ್ರ್ಯಾಕ್ಟರ್ ಉರುಳಿ ಬಿದ್ದು ಚಾಲಕ ಸಾವು.

    ಜೋಯಿಡಾ : ತಾಲೂಕಿನ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಪಣಸೋಲಿ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಟ್ರ್ಯಾಕ್ಟರ್ ಉರುಳಿ ಬಿದ್ದು ಚಾಲಕ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

    ಜೋಯಿಡಾ ತಾಲೂಕಿನ ಪಣಸೋಲಿ ಗ್ರಾಮದ ನಿವಾಸಿ ವಿಶ್ವನಾಥ ಪುರುಷೋತ್ತಮ ಆಚಾರಿ (30)ಎಂಬಾತನೇ ಮೃತಪಟ್ಟ ದುರ್ದೈವಿ. ಪಣಸೋಲಿಯಿಂದ ಸಫಾರಿಗೆ ಹೋಗುವ ರಸ್ತೆಯ ಪಕ್ಕ ಟ್ರ್ಯಾಕ್ಟರ್ ಉರುಳಿ ಬಿದ್ದು ಅದರಡಿ ಸಿಲುಕಿಕೊಂಡಿದ್ದ ಚಾಲಕ ವಿಶ್ವನಾಥ ಪುರುಷೋತ್ತಮ ಆಚಾರಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ಇದೇ ಸಂದರ್ಭದಲ್ಲಿ ಇನ್ನೋರ್ವ ವ್ಯಕ್ತಿಗೆ ಗಾಯವಾಗಿದೆ.

    ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ, ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

  • ಅಪಘಾತದಲ್ಲಿ ಗಾಯಗೊಂಡಿದ್ದ ಒಂಬತ್ತು ವರ್ಷದ ಬಾಲಕಿ ಸಾವು.

    ಅಪಘಾತದಲ್ಲಿ ಗಾಯಗೊಂಡಿದ್ದ ಒಂಬತ್ತು ವರ್ಷದ ಬಾಲಕಿ ಸಾವು.

    ದಾಂಡೇಲಿ : ತನ್ನ ತಂದೆಯ ಜೊತೆ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಕಾರೊಂದು ತಂದೆ ಮತ್ತು ಮಗಳಿಗೆ ಹಿಂದಿನಿಂದ ಡಿಕ್ಕಿಯಾದ ಪರಿಣಾಮವಾಗಿ ಇಬ್ಬರೂ ಗಂಭೀರ ಗಾಯಗೊಂಡಿದ್ದ ಘಟನೆ ತಾಲೂಕಿನ ಬರ್ಚಿ ರಸ್ತೆಯ ಸೇತುವೆ ಪಕ್ಕದಲ್ಲಿರುವ ರಾಮನಗರ ಮಿರ್ಜಾನ ರಾಜ್ಯ ಹೆದ್ದಾರಿಯ ಸಮೀಪದ ಕಾಲುದಾರಿಯ ಮೇಲೆ ಬರ್ಚಿ ಸೇತುವೆಯ ಹತ್ತಿರ ನಡೆದಿತ್ತು.

    ಗಾಯಗೊಂಡ ಇಬ್ಬರನ್ನು ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ ಘಟನೆ ನಡೆದಿದೆ. ಅರಣ್ಯ ಇಲಾಖೆಯಲ್ಲಿ ಉಪ ವಲಯರಣ್ಯಾಧಿಕಾರಿ ಶ್ರೀಶೈಲ್‌ ಸಿದ್ದಪ್ಪ ದೇವರಮನಿ ಅವರು ತನ್ನ ಮಗಳಾದ ಒಂಬತ್ತು ವರ್ಷ ವಯಸ್ಸಿನ ಐಶ್ವರ್ಯಳ ಜೊತೆ ಕಾಲು ದಾರಿಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಹಿಂದುಗಡೆಯಿಂದ ಅತಿಯಾದ ವೇಗವಾಗಿ ಹಾಗೂ ಅಜಾಗೂರುಕತೆಯಿಂದ ಕಾರು ಚಾಲಕನ ನಿಯಂತ್ರಣ ತಪ್ಪಿ, ಶ್ರೀಶೈಲ್ ದೇವರಮನಿ ಹಾಗೂ ಐಶ್ವರ್ಯ ಇಬ್ಬರಿಗೂ ಡಿಕ್ಕಿ ಹೊಡೆದಿದೆ.

    ಈ ಸಂದರ್ಭದಲ್ಲಿ ಇಬ್ಬರಿಗೂ ಗಂಭೀರ ಗಾಯವಾಗಿದ್ದು ದಾಂಡೇಲಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ನೀಡಿ ಹೆಚ್ಚಿನ ಚಿಕಿತ್ಸೆಗೆ ಧಾರವಾಡಕ್ಕೆ ಕಳುಹಿಸಿಕೊಡಲಾಗಿತ್ತು. ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರಲ್ಲಿ ಐಶ್ವರ್ಯ ದೇವರಮನಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಾವನ್ನಪ್ಪಿದ್ದಾಳೆ.

  • ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಸಹಾಯಧನ

    ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಸಹಾಯಧನ

    ಕಾರವಾರ: ದಾಂಡೇಲಿ ನಗರಸಭೆ ವ್ಯಾಪ್ತಿಯ ಸ್ವಚ್ಛ ಭಾರತ್ ಮಿಷನ್ 2.0 ಯೋಜನೆಯಡಿ ಬಯಲು ಬಹಿರ್ದೆಸೆ ಅಭ್ಯಾಸಗಳಿಗೆ ಹಿಂತಿರುಗುವುದನ್ನು ತಡೆಯಲು ಗೃಹ ಬಳಕೆಯ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಸ್ವಂತ ಜಾಗ ಹೊಂದಿದ ಸ್ಥಳೀಯರು ಸ್ಥಳೀಯವಾಗಿ ಲಭ್ಯರುವ ಜಾಗೆಯಲ್ಲಿ ವೈಯಕ್ತಿಕ ಶೌಚಾಲಯ ಕಟ್ಟಿಕೊಳ್ಳಲು, ಕಚೇರಿಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಡಿ.10 ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ದಾಂಡೇಲಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಜಿಂಕೆ ಕೋಡು, ಕಾಡು ಬೆಕ್ಕಿನ ದವಡೆ ಹಲ್ಲನ್ನು ಸಂಗ್ರಹಿಸಿದ ವ್ಯಕ್ತಿ ಅರೆಸ್ಟ್..!

    ಜಿಂಕೆ ಕೋಡು, ಕಾಡು ಬೆಕ್ಕಿನ ದವಡೆ ಹಲ್ಲನ್ನು ಸಂಗ್ರಹಿಸಿದ ವ್ಯಕ್ತಿ ಅರೆಸ್ಟ್..!

    ಜೋಯಿಡಾ : ಇದೀಗ ಎಲ್ಲೆಡೆ ಹುಲಿ ಉಗುರಿನ ಚರ್ಚೆ ನಡೆದಿದ್ದರೆ, ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಮನೆಯಲ್ಲಿ ಇರಿಸಿದ್ದ ಜಿಂಕೆ ಕೋಡು, ಕಾಡು ಬೆಕ್ಕಿನ ದವಡೆ ಹಲ್ಲನ್ನು ವಶಪಡಿಸಿಕೊಂಡ ಘಟನೆ ಜೋಯಿಡಾದಲ್ಲಿ ನಡೆದಿದೆ.

    ಕಾಳಿ ಹುಲಿ ಸಂರಕ್ಷಿತ ಉಪ ಅರಣ್ಯ ಸಂರಕ್ಷಣಾಧಿಕಾರಿ ನಿಲೇಶ ಸಿಂಧೆ ನೇತೃತ್ವದ ಅಧಿಕಾರಿಗಳು, ಜೋಯಿಡಾದ ಶಿವಾಜಿ ವೃತ್ತದ ಹತ್ತಿರ ಇರುವ ಪ್ರಕಾಶ ಎಂಬುವವರ ಮನೆಯ ಮೇಲೆ ದಾಳಿ ನಡೆಸಿದ ಜಿಂಕೆ ಕೋಡು, ಕಾಡುಬೆಕ್ಕಿನ ದವಡೆ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಮನೆಯ ಯಜಮಾನ ಬಂಧಸಲಾಗಿದೆ.

    ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿಕೆ ಶೇಟ್ ಅವರ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಜೋಯಿಡಾ ವಲಯ ಅರಣ್ಯಾಧಿಕಾರಿ ಮಹಮ್ಮದ್ ಶಫಿ, ಬರ್ಚಿ ವಲಯ ಅರಣ್ಯಾಧಿಕಾರಿ ಅಶೋಕ್ ಶೆಳ್ಳೆನ್ನವರ, ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

  • ಅಕ್ರಮವಾಗಿ ಗೋವಾ ಸಾರಾಯಿ ಸಾಗಾಟ : ಓರ್ವ ಅರೆಸ್ಟ್..!

    ಅಕ್ರಮವಾಗಿ ಗೋವಾ ಸಾರಾಯಿ ಸಾಗಾಟ : ಓರ್ವ ಅರೆಸ್ಟ್..!

    ಜೋಯಿಡಾ : ತಾಲೂಕಿನ ಅನಮೋಡ ಚೆಕ್ ಪೋಸ್ಟ ಹತ್ತಿರ ಖಚಿತ ಮಾಹಿತಿ ಆಧಾರದ ಮೇರೆಗೆ ಅಕ್ರಮವಾಗಿ ಗೋವಾ ಸರಾಯಿ ಸಾಗಿಸುತ್ತಿದ್ದ ವೇಳೆ ಬೈಕ್ ಮತ್ತು ಸರಾಯಿಯನ್ನು ಅನಮೋಡ ಅಬಕಾರಿ ಪೋಲಿಸರು ವಶಪಡಿಸಿಕೊಂಡ ಘಟನೆ ನಡೆದಿದೆ.

    ನೆದರಲ್ಲಿ ಅಬ್ಬಾಸ್ ಅಲಿ ಮ್ಯಾಗಿನ ಮಟ್ಟಿ ಹಾವೇರಿ ತಾಲೂಕು ಎನ್ನುವವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಾಹನ ಸಂಖ್ಯೆ KA 27EK 1046 ರಲ್ಲಿ ಸುಮಾರು 54 ಲೀ ಅಂದಾಜು ಮೌಲ್ಯ 8640 ಹಾಗೂ ವಾಹನ ಸೇರಿ ಒಟ್ಟೂ ಅಂದಾಜು ಮೌಲ್ಯ 50000 ರೂ ಗಳಾಗಿದೆ.

    ಈ ಕಾರ್ಯಾಚರಣೆಯಲ್ಲಿ ಅಬಕಾರಿ ಉಪ ಆಯುಕ್ತರು ಉತ್ತರಕನ್ನಡ ಜಿಲ್ಲೆ ಹಾಗೂ ಅಬಕಾರಿ ಉಪ ಅಧಿಕ್ಷಕರು ಅವರ ಮಾರ್ಗದರ್ಶನದಲ್ಲಿ ಅಬಕಾರಿ ಉಪನಿರೀಕ್ಷಕರು ಮಂಜುಕುಮಾರ ನಾಯ್ಕ, ಅನಮೋಡ ಅಬಕಾರಿ ಪಿ.ಎಸ್.ಐ ಟಿ.ಬಿ.ಮಲ್ಲಣ್ಣನವರ ಸಿಬ್ಬಂದಿಗಳಾದ ಸದಾಶಿವ ರಾಥೋಡ,ಈರಣ್ಣ ಕುರುಬೇಟ್, ಆರ್,ಎನ್ ನಾಯಕ, ಪಾಲ್ಗೊಂಡಿದ್ದರು.

  • ಫುಟ್ಪಾತ್ ನಲ್ಲಿದ್ದ ಗೂಡಂಗಡಿಗಳನ್ನು ತೆರವುಗೊಳಿಸಿದ ತಾಲ್ಲೂಕಾಡಳಿತ ಮತ್ತು ನಗರಾಡಳಿತ.

    ಫುಟ್ಪಾತ್ ನಲ್ಲಿದ್ದ ಗೂಡಂಗಡಿಗಳನ್ನು ತೆರವುಗೊಳಿಸಿದ ತಾಲ್ಲೂಕಾಡಳಿತ ಮತ್ತು ನಗರಾಡಳಿತ.

    ದಾಂಡೇಲಿ: ನಗರದ ಹಳಿಯಾಳ ರಸ್ತೆ ಬದಿ ಪುಟ್ಪಾತ್ ನಲ್ಲಿದ್ದ ಗೂಡಂಗಡಿಗಳನ್ನು ತಾಲ್ಲೂಕಾಡಳಿತ ಮತ್ತು ನಗರಾಡಳಿತದ ಜಂಟಿ ನೇತೃತ್ವ ಹಾಗೂ ಪೊಲೀಸ್ ಇಲಾಖೆಯ ಸಹಕಾರದಲ್ಲಿ ತೆರವುಗೊಳಿಸುವ ಕಾರ್ಯಾಚರಣೆಯನ್ನು ಭಾನುವಾರ ಬೆಳಿಗ್ಗೆ ನಡೆಯಿತು.

    ಹಳಿಯಾಳ ರಸ್ತೆಯ ಪುಟ್ಪಾತ್ ನಲಿದ್ದ ಗೂಡಂಗಡಿಗಳ ತೆರವು ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೆ ಕೆಲವು ಗೂಡಂಗಡಿದಾರರು ಅಧಿಕಾರಿಗಳ ಜೊತೆ ವಾಗ್ವಾದಕ್ಕೆ ಇಳಿದರು. ಓರ್ವ ಗೂಡಂಗಡಿದಾರ ಅಧಿಕಾರಿಗಳ ಮೇಲೆರಗಿ ಹೋಗಿ ಆನಂತರ ಪೊಲೀಸರು ಮಧ್ಯ ಪ್ರವೇಶ ಮಾಡಿ ಆತನನ್ನು ತರಾಟೆಗೆ ತೆಗೆದುಕೊಂಡರು.

    ಕೆಲವು ಗೂಡಂಗಡಿದಾರರು ತಾವೇ ಸ್ವತ: ತೆರವಿಗೆ ಮುಂದಾದರು. ಬಹುತೇಕ ಗೂಡಂಗಡಿಗಳನ್ನು ನಗರ ಸಭೆಯ ಪೌರಕಾರ್ಮಿಕರ ಮೂಲಕವೆ ತೆರವುಗೊಳಿಸಲಾಯಿತು. ಆನಂತರ ಪಟೇಲ್ ವೃತ್ತದ ಕೆಳಗೆ ರಸ್ತೆ ಬದಿ ನಿಲ್ಲಿಸಲಾಗಿದ್ದ ಗುಜರಿ ವಾಹನಗಳನ್ನು ತೆರವುಗೊಳಿಸಲಾಯ್ತು.

    ಈ ಸಂದರ್ಭದಲ್ಲಿ ತಹಶೀಲ್ದಾರ್ ಶೈಲೇಶ್ ಪರಮಾನಂದ, ಪೌರಾಯುಕ್ತರಾದ ಆರ್.ಎಸ್.ಪವಾರ್, ನಗರ ಸಭಾ ಸದಸ್ಯೆ ಪ್ರೀತಿ ನಾಯರ್, ಪಿಎಸೈಗಳಾದ ಐ.ಆರ್.ಗಡ್ಡೇಕರ್, ಯಲ್ಲಪ್ಪ.ಎಸ್, ಆರ್.ಟಿ.ಓ ನಿರೀಕ್ಷಕ ಎನ್.ಜಿ.ಪಠಾಣ್, ಎಎಸೈಗಳಾದ ನಾರಾಯಣ ರಾಥೋಡ್, ಬಸವರಾಜ ಒಕ್ಕುಂದ, ನಗರ ಸಭೆಯ ಅಧಿಕಾರಿಗಳಾದ ಬಾಲು ಗವಾಸ್, ಶುಭಂ ರಾಯ್ಕರ್, ವಿಲಾಸ್ ದೇವಕರ್ ಹಾಗೂ ಇನ್ನಿತರ ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿಗಳು ಮತ್ತು ಪೌರಕಾರ್ಮಿಕರು ಉಪಸ್ಥಿತರಿದ್ದರು.

  • ಲಾರಿ ಸಾಗುವಾಗ ಕುಸಿದ ಕಿರು ಸೇತುವೆ

    ಲಾರಿ ಸಾಗುವಾಗ ಕುಸಿದ ಕಿರು ಸೇತುವೆ

    ದಾಂಡೇಲಿ: ಗಾಂಧಿನಗರದಲ್ಲಿ ಈ ಬಾರಿ ಮಳೆಗಾಲದ ಸಂದರ್ಭದಲ್ಲಿ ಕಿರು ಸೇತುವೆಯೊಂದು ಬಿರುಕು ಬಿಟ್ಟಿದ್ದು, ಘನವಾಹನಗಳು ಸಂಚರಿಸದಂತೆ ಬ್ಯಾರಿಕೇಡನ್ನು ಅಳವಡಿಸಲಾಗಿತ್ತು. ಇದೇ ಕಿರು ಸೇತುವೆಯ ಮೇಲೆ ಸರಕು ತುಂಬಿದ್ದ ಲಾರಿ ಎಂದು ಹೋಗುತ್ತಿದ್ದಾಗ ಸೇತುವೆ ಸಂಪೂರ್ಣ ಕುಸಿದು ಲಾರಿ ಹೂತು ಹೋದ ಘಟನೆ ನಡೆದಿದೆ.

    ಹೂತೋದ ಲಾರಿಯನ್ನು ಮೇಲಕ್ಕೆ ಎಳೆಯಲು ಹರಸಾಹಸ ಪಡಬೇಕಾಯಿತು. ಕೊನೆಗೆ ಲಾರಿಯಲ್ಲಿ ತುಂಬಿಕೊಂಡಿದ್ದ ಸರಕು ವಸ್ತುಗಳನ್ನು ಕೆಳಗಿಳಿಸಿ ಕ್ರೈನ್ ಸಹಾಯದ ಮೂಲಕ ಹೂತೋದ ಲಾರಿಯನ್ನು ಮೇಲಕ್ಕೆತ್ತಲಾಯಿತು. ಸರಕು ತುಂಬಿದ ಲಾರಿ ಈ ಕಿರು ಸೇತುವೆಯ ಮೇಲೆ ಹೋದ ಪರಿಣಾಮವಾಗಿ ಸೇತುವೆ ಸಂಪೂರ್ಣ ಕುಸಿದಿರುವುದರಿಂದ ಲಘು ವಾಹನಗಳ ಸಂಚಾರಕ್ಕೂ ಇದೀಗ ತೀವ್ರ ತೊಂದರೆಯಾಗತೊಡಗಿದೆ.