Satwadhara News

Day: April 14, 2025

  • ನಿಲ್ಲಿಸಿಟ್ಟ ಸ್ಕೂಟರ್ ತೆಗೆಯುವ ವೇಳೆಗೆ ಬಂದು ನಿಂತ ಜವರಾಯ

    ನಿಲ್ಲಿಸಿಟ್ಟ ಸ್ಕೂಟರ್ ತೆಗೆಯುವ ವೇಳೆಗೆ ಬಂದು ನಿಂತ ಜವರಾಯ

    ಭಟ್ಕಳ : ವ್ಯಕ್ತಿಯೊಬ್ಬರು ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ತಮ್ಮ ಸ್ಕೂಟರನ್ನು ತೆಗೆಯುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಭಟ್ಕಳದಲ್ಲಿ ನಡೆದಿದೆ.

    ನಗರದ ಹಾಶಿಮ್ ಬೇಕರಿ ಸಮೀಪ ಈ ಘಟನೆ ನಡೆದಿದ್ದು ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಮೃತ ವ್ಯಕ್ತಿಯನ್ನು ಫಜ್ಯೂ‌ರ್ ರೆಹಮಾನ್ ಶೇಕ್ (54) ಎಂದು ಗುರುತಿಸಲಾಗಿದೆ.

    ಹೋಟಲ್ ನಿಂದ ಹೊರ ಬಂದು ತಾನು ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಸ್ಕೂಟರನ್ನು ತೆಗೆಯುತ್ತಿದ್ದ ವೇಳೆ ಹಠಾತ್ ಸ್ಕೂಟರ್ ಸಮೇತ ಅಲ್ಲೇ ಕುಸಿದು ಬಿದ್ದಿದ್ದಾರೆ. ಬಳಿಕ ಅಲ್ಲಿದ್ದ ಸಾರ್ವಜನಿಕರು ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದರಾದರೂ, ಆಸ್ಪತ್ರೆಗೆ ಬರುವ ಮುನ್ನವೆ ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

  • ವಜ್ರನಾಮ ಜಿತ್ತದತ್ತ ಗೌಡ ನಿಧನ

    ವಜ್ರನಾಮ ಜಿತ್ತದತ್ತ ಗೌಡ ನಿಧನ

    ಹೊನ್ನಾವರ : ಈ ಹಿಂದೆ ಮಂಕಿ ಗ್ರಾ.ಪಂ. ಹಾಗೂ ವ್ಯವಸಾಯ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ, ತಾಲೂಕಿನ ಮಂಕಿ ಚಿತ್ತಾರದ ಸಾಮಾಜಿಕ ಕಾರ್ಯಕರ್ತರಾಗಿದ್ದ ವಜ್ರನಾಮ ಜಿತ್ತದತ್ತ ಗೌಡ (71) ವಯಸ್ಸಿನಲ್ಲಿ ನಿಧನರಾದರು.

    ಇವರು ತಾಲೂಕಿನ ಪ್ರತಿಷ್ಠಿತ ಪಿ.ಎಲ್.ಡಿ ಬ್ಯಾಂಕ್ ನಿರ್ದೆಶಕರಾಗಿ ಸೇವೆ ಸಲ್ಲಿಸಿದ್ದರು. ಇವರು ಮಹಾರಾಷ್ಟ್ರ ಸಾಂಗ್ಲಿಯ ಸಂಬಂಧಿಕರ ಮನೆಯಲ್ಲಿ ಶನಿವಾರ ಮುಂಜಾನೆ ನಿಧನರಾದ್ದಾರೆ.

    ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ, ಸಹೋದರ ಚಂದ್ರ ಗೌಡ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯಸಭಾ ಸದಸ್ಯರು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ.ವಿರೇಂದ್ರ ಹೆಗ್ಗಡೆ ಕುಟುಂಬದವರಿಗೆ ಕರೆ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.

  • ಹಾಸ್ಯ ನಟ ಬ್ಯಾಂಕ್ ಜನಾರ್ಧನ ಇನ್ನಿಲ್ಲ.

    ಹಾಸ್ಯ ನಟ ಬ್ಯಾಂಕ್ ಜನಾರ್ಧನ ಇನ್ನಿಲ್ಲ.

    ಬೆಂಗಳೂರು: 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ ಹಾಸ್ಯ ನಟ ಬ್ಯಾಂಕ್ ಜನಾರ್ಧನ (76) ನಿಧನರಾಗಿದ್ದಾರೆ. ಮಧ್ಯರಾತ್ರಿ 2:30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಟ ಬ್ಯಾಂಕ್ ಜನಾರ್ಧನ್ ನಿಧನರಾಗಿದ್ದಾರೆ.
    ಸುಲ್ತಾನ್ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 – 4 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

    1948ರಲ್ಲಿ ಬ್ಯಾಂಕ್ ಜನಾರ್ಧನ್ ಅವರು ಬೆಂಗಳೂರಿನಲ್ಲಿ ಜನಿಸಿದರು. 1985ರಲ್ಲಿ ಪಿತಾಮಹ ಚಿತ್ರದ ಮೂಲಕ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ನಾಟಕಗಳಿಂದ ಆರಂಭವಾದ ಅವರ ಬದುಕು ನಂತರ ಸಿನಿಮಾಗಳತ್ತ ಹೊರಳಿತು. ಆರಂಭದಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ ನಟಿಸಿದ್ದ ಅವರು ನಂತರ ದಿನಗಳಲ್ಲಿ ಪ್ರಮುಖ ಪೋಷಕ ಪಾತ್ರಗಳಲ್ಲಿ ನಟಿಸುವ ಮೂಲಕ ಕರ್ನಾಟಕದ ಮನೆ ಮಾತಾದರು. ಅವರು ಕನ್ನಡ ಚಿತ್ರಗಂಗದಲ್ಲಿ ಹಾಸ್ಯ ಹಾಗೂ ಪೋಷಕ ನಟನಾಗಿಯೇ ಗುರುತಿಸಿಕೊಂಡಿದ್ದರು. 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟನೆ ಮಾಡಿದ್ದಾರೆ.

    2023ರ ಸೆಪ್ಟಂಬರ್ 26ರಂದು ಹೃದಯಘಾತ ಆಗಿತ್ತು. ಬಳಿಕ ಚಿಕಿತ್ಸೆಯ ಪಡೆದುಕೊಂಡು ಚೇತರಿಸಿಕೊಂಡಿದ್ದರು. ಕನ್ನಡ ಸಿನಿಮಾಗಳಲ್ಲಿ 80, 90ರ ದಶಕದ ಬಹುಬೇಡಿಕೆ ಹೊಂದಿದ್ದ ಹಾಸ್ಯನಟರಲ್ಲಿ ಒಬ್ಬರಾದ ಜನಾರ್ಧನ ಶ್, ತರ್ಲೆ ನನ್ ಮಗ, ಬೆಳ್ಳಿಯಪ್ಪ ಬಂಗಾರಪ್ಪ, ಜೀ ಬೂಂಬಾ, ಗಣೇಶ ಸುಬ್ರಮಣ್ಯ, ಕೌರವ ಸೇರಿದಂತೆ 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಿನಿಮಾ ಅಲ್ಲದೇ, ಕಿರುತೆರೆ ಹಾಗೂ ರಂಗಭೂಮಿಯಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದರು. ಕಿರುತೆರೆಯಲ್ಲಿ ಪಾಪ ಪಾಂಡು, ಜೋಕಾಲಿ, ರೋಬೋ ಫ್ಯಾಮಿಲಿ, ಮಾಂಗಲ್ಯ ಧಾರಾವಾಹಿಗಳಲ್ಲಿಯೂ ಕೂಡ ಬ್ಯಾಂಕ್ ಜನಾರ್ಧನ ಅವರು ನಟನೆ ಮಾಡಿದ್ದಾರೆ.